AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನ್​ನ ಜಲಾಲಾಬಾದ್​ ಸರಣಿ ಸ್ಫೋಟದಲ್ಲಿ 35 ತಾಲಿಬಾನಿಗಳು ಸಾವು; ದಾಳಿಯ ಹೊಣೆ ಹೊತ್ತ ಐಎಸ್​ ಸಂಘಟನೆ

ಈ ಹಿಂದೆ ಅಫ್ಘಾನಿಸ್ತಾನ ಸರ್ಕಾರವಿದ್ದಾಗ ನಂಗರ್​ಹಾರ್​ ಮತ್ತು ಕುನಾರ್​ ಪ್ರಾಂತ್ಯಗಳಲ್ಲಿ ಅನೇಕ ಜಿಲ್ಲೆಗಳು ಐಎಸ್​ ಉಗ್ರರ ನೆಲೆಗಳಾಗಿದ್ದವು. ಸುಮಾರು ಐದುವರ್ಷಗಳ ಕಾಲ ಆ ಜಿಲ್ಲೆಗಳನ್ನೆಲ್ಲ ಸಂಪೂರ್ಣವಾಗಿ ಅವರೇ ಆಳಿದ್ದರು.

ಅಫ್ಘಾನ್​ನ ಜಲಾಲಾಬಾದ್​ ಸರಣಿ ಸ್ಫೋಟದಲ್ಲಿ 35 ತಾಲಿಬಾನಿಗಳು ಸಾವು; ದಾಳಿಯ ಹೊಣೆ ಹೊತ್ತ ಐಎಸ್​ ಸಂಘಟನೆ
ಜಲಾಲಾಬಾದ್​ ಚಿತ್ರಣ
TV9 Web
| Edited By: |

Updated on: Sep 20, 2021 | 7:05 PM

Share

ಅಫ್ಘಾನಿಸ್ತಾನದ ಪೂರ್ವನಗರವಾದ ಜಲಾಲಾಬಾದ್​​ನಲ್ಲಿ ನಡೆದ ಬಾಂಬ್​ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್​ ಸ್ಟೇಟ್​ ಹೊತ್ತುಕೊಂಡಿದೆ. ಇದನ್ನು ಗ್ರೂಪ್​​ನ ಅಮಾಕ್​ ನ್ಯೂಸ್​ ಏಜೆನ್ಸಿ ತನ್ನ ಟೆಲಿಗ್ರಾಂ ಚಾನಲ್​​ನಲ್ಲಿ ಹೇಳಿಕೊಂಡಿದೆ. ಜಲಾಲಾಬಾದ್​​ನಲ್ಲಿ ಮೂರು ತಾಲಿಬಾನಿ ವಾಹನಗಳನ್ನು ಗುರಿಯಾಗಿಸಿಕೊಂಡು ಶನಿವಾರ ಮೂರು ಬಾಂಬ್​ ಸ್ಫೋಟಗಳು ನಡೆದಿವೆ. ಮತ್ತೆ ಭಾನುವಾರವೂ ಒಂದು ದಾಳಿ ನಡೆದಿದೆ. ಒಟ್ಟಾರೆ ಈ ಎಲ್ಲ ದಾಳಿಯಿಂದ 35 ತಾಲಿಬಾನ್​ ಉಗ್ರರು ಮೃತಪಟ್ಟಿದ್ದಾರೆ ಎಂದು ಸುದ್ದಿಸಂಸ್ಥೆ ತಿಳಿಸಿದೆ. 

ನಂಗರ್​ಹಾರ್​ ಪ್ರಾಂತ್ಯದ ರಾಜಧಾನಿ ಜಲಾಲಾಬಾದ್​ನಲ್ಲಿ ತಾಲಿಬಾನ್​ ಹೋರಾಟಗಾರರನ್ನು ಹೊತ್ತೊಯ್ಯುತ್ತಿದ್ದ ಪಿಕಪ್​ ಟ್ರಕ್​​ವೊಂದರ ಮೇಲೆ ದಾಳಿ ನಡೆದಿದೆ. ಈ ಸ್ಫೋಟದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.  ಇನ್ನು ಜಲಾಲಾಬಾದ್ ಸರಣಿ ಸ್ಫೋಟದಲ್ಲಿ ಮೃತರಾದವರ ಸಂಖ್ಯೆ ಬಗ್ಗೆ ಇನ್ನೂ ತಾಲಿಬಾನ್​ ಉಗ್ರರು ಏನೂ ಹೇಳಿಲ್ಲ. ಅಫ್ಘಾನಿಸ್ತಾನವನ್ನು ಆಗಸ್ಟ್​ 15ರಂದು ತಾಲಿಬಾನಿಗಳು ವಶಪಡಿಸಿಕೊಂಡ ಬಳಿಕ ಪಾಕಿಸ್ತಾನದ ಗಡಿಭಾಗದಲ್ಲಿರುವ ನಂಗರ್​ಹಾರ್​ ಪ್ರಾಂತ್ಯದಲ್ಲಿ ಮಾತ್ರ ಐಎಸ್​ ಉಗ್ರರಿಂದ ದಾಳಿ ನಡೆಯುತ್ತಿದೆ. ಇವರು ತಾಲಿಬಾನಿಗಳನ್ನು ಟಾರ್ಗೆಟ್​ ಮಾಡಿಯೇ ದಾಳಿ ನಡೆಸುತ್ತಿದ್ದಾರೆ. ಇದಕ್ಕೆ ಕಾರಣ, ಈ ಹಿಂದೆ ಅಫ್ಘಾನಿಸ್ತಾನ ಸರ್ಕಾರವಿದ್ದಾಗ ನಂಗರ್​ಹಾರ್​ ಮತ್ತು ಕುನಾರ್​ ಪ್ರಾಂತ್ಯಗಳಲ್ಲಿ ಅನೇಕ ಜಿಲ್ಲೆಗಳು ಐಎಸ್​ ಉಗ್ರರ ನೆಲೆಗಳಾಗಿದ್ದವು. ಸುಮಾರು ಐದುವರ್ಷಗಳ ಕಾಲ ಆ ಜಿಲ್ಲೆಗಳನ್ನೆಲ್ಲ ಸಂಪೂರ್ಣವಾಗಿ ಅವರೇ ಆಳಿದ್ದರು. ಆದರೆ ನಂತರ ಬಂದ ತಾಲಿಬಾನಿಗಳು ಐಎಸ್​  ಹೋರಾಟಗಾರರನ್ನು ಹೊರಗೆ ಹಾಕಿದ್ದರು. ಇದೇ ಕಾರಣಕ್ಕೆ ಈಗ ಅವರು ದಾಳಿ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಜಿಎಸ್​ಟಿ, ಆಧಾರ್ ಯೋಜನೆ ಬಂದಿದ್ದೇ ಮನಮೋಹನ್​ ಸಿಂಗ್​ ಅವಧಿಯಲ್ಲಿ; ಸಿಎಂಗೆ ಹೆಚ್​ಡಿ ಕುಮಾರಸ್ವಾಮಿ ತಿರುಗೇಟು

ಬೀದರನ ಗುರು ನಾನಕ್ ಜೀರಾ ಸಾಹಿಬ್ ಅಮೃತಸರ್​ನಲ್ಲಿರುವ ಸ್ವರ್ಣಮಂದಿರಕ್ಕೆ ಪರ್ಯಾಯ ಎನಿಸಿಕೊಂಡಿದೆ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ