AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabul Blast: ಕಾಬೂಲ್​​ನಲ್ಲಿ ಮೊಬೈಲ್​​, ಇಂಟರ್​ನೆಟ್​ ಸ್ಥಗಿತ; ಸರಣಿ ಸ್ಫೋಟದಿಂದ ಕಳವಳಗೊಂಡು ತುರ್ತು ಸಭೆ ಕರೆದ ಅಮೆರಿಕ, ಬ್ರಿಟನ್

ಅಫ್ಘಾನಿಸ್ತಾನದ ಕಾಬೂಲ್​ನಲ್ಲಿ ಸರಣಿ ಸ್ಫೋಟವಾಗುತ್ತಿದ್ದಂತೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ತುರ್ತು ಸಭೆ ಕರೆದಿದ್ದಾರೆ. ಜೋ ಬೈಡೆನ್ ಭಾಗವಹಿಸಬೇಕಿದ್ದ ಪೂರ್ವ ನಿಗದಿತ ಎಲ್ಲ ಕಾರ್ಯಕ್ರಮಗಳನ್ನೂ ರದ್ದುಗೊಳಿಸಲಾಗಿದ್ದು ಅಮೆರಿಕದ ಶ್ವೇತಭವನದಲ್ಲಿ ತುರ್ತು ಸಭೆ ನಡೆಸಲಿದ್ದಾರೆ.

Kabul Blast: ಕಾಬೂಲ್​​ನಲ್ಲಿ ಮೊಬೈಲ್​​, ಇಂಟರ್​ನೆಟ್​ ಸ್ಥಗಿತ; ಸರಣಿ ಸ್ಫೋಟದಿಂದ ಕಳವಳಗೊಂಡು ತುರ್ತು ಸಭೆ ಕರೆದ ಅಮೆರಿಕ, ಬ್ರಿಟನ್
ಸ್ಫೋಟದಲ್ಲಿ ಗಾಯಗೊಂಡ ಮಹಿಳೆಯನ್ನು ಚಿಕಿತ್ಸೆಗೆ ಕರೆದೊಯ್ದ ದೃಶ್ಯ
TV9 Web
| Edited By: |

Updated on:Aug 26, 2021 | 9:46 PM

Share

ಕಾಬೂಲ್: ಅಫ್ಘಾನಿಸ್ತಾನದಲ್ಲಿ ನಡೆದ ಸತತ ಮೂರು ಬಾಂಬ್ ದಾಳಿಯ ಬೆನ್ನಲ್ಲೇ ವಿವಿಧ ದೇಶಗಳು ತೀವ್ರ ಕಳವಳಗೊಂಡಿವೆ. ಅಫ್ಘಾನಿಸ್ತಾನದಲ್ಲಿರುವ ವಿದೇಶಿ ಪ್ರಜೆಗಳನ್ನು ಆಯಾ ದೇಶಗಳು ಮರಳಿ ಕರೆತರುವ ಯತ್ನ ಇನ್ನಷ್ಟು ಜಟಿಲಗೊಂಡಿದೆ. ಸ್ಫೋಟದ ತೀವ್ರತೆ ಮತ್ತು ಪರಿಣಾಮ ತೀವ್ರ ಗಂಭೀರವಾಗಿದ್ದು, ಪರಿಸ್ಥಿತಿ ಕೈಮೀರುವ ಸಂಭಾವ್ಯತೆ ದಟ್ಟವಾಗಿದೆ ಎಂದು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ತಿಳಿಸಿದ್ದಾರೆ. ಬ್ರಿಟನ್ ಸರ್ಕಾರ ಸಹ ಘಟನೆಯ ಸ್ವರೂಪವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ತುರ್ತು ಸಭೆ ಕರೆದಿದೆ. ಅಫ್ಘಾನಿಸ್ತಾನದಲ್ಲಿ ಕರ್ಫ್ಯೂ ಹೇರಲಾಗಿದೆ.

ಅಫ್ಘಾನಿಸ್ತಾನದ ಕಾಬೂಲ್​ನಲ್ಲಿ ಸರಣಿ ಸ್ಫೋಟವಾಗುತ್ತಿದ್ದಂತೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ತುರ್ತು ಸಭೆ ಕರೆದಿದ್ದಾರೆ. ಜೋ ಬೈಡೆನ್ ಭಾಗವಹಿಸಬೇಕಿದ್ದ ಪೂರ್ವ ನಿಗದಿತ ಎಲ್ಲ ಕಾರ್ಯಕ್ರಮಗಳನ್ನೂ ರದ್ದುಗೊಳಿಸಲಾಗಿದ್ದು ಅಮೆರಿಕದ ಶ್ವೇತಭವನದಲ್ಲಿ ತುರ್ತು ಸಭೆ ನಡೆಸಲಿದ್ದಾರೆ.

ಮೊದಲು ಇಟಲಿ ವಿಮಾನ ಗುರಿಯಾಗಿಸಿಕೊಂಡು ಉಗ್ರರು ಆತ್ಮಾಹುತಿ ದಾಳಿ ನಡೆಸಿರುವ ಮಾಹಿತಿ ಲಭ್ಯವಾಗಿದೆ. ಸ್ಫೋಟದ ವೇಳೆ ಸಾವಿರಾರು ಜನರಿದ್ದರು ಎನ್ನಲಾಗಿದ್ದು, ಕಾಬೂಲ್ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಫೋಟದಲ್ಲಿ ಈವರೆಗೆ 18 ಜನ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಸ್ಫೋಟದಲ್ಲಿ 70ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು, ಮೂವರು ಅಮೆರಿಕ ಸೇನೆಯ ಯೋಧರಿಗೆ ಗಾಯಗೊಂಡಿದ್ದಾರೆ.

ಇದನ್ನೂ ಓದಿ: 

Kabul Blast: ಕಾಬೂಲ್ ವಿಮಾನ ನಿಲ್ದಾಣದ ಬಳಿ ಪ್ರಬಲ ಬಾಂಬ್​ ಸ್ಫೋಟ

Kabul Blast: ಕಾಬೂಲ್ ವಿಮಾನ ನಿಲ್ದಾಣದ ಬಳಿ ಪ್ರಬಲ ಬಾಂಬ್​ ಸ್ಫೋಟ

(Kabul blast effect mobile internet stopped America and Britain calls emergency meeting)

Published On - 9:24 pm, Thu, 26 August 21

Follow Us
TV9 Web
TV9 Web

TV9 Kannada

Read More
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ