AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabul Blast: ಕಾಬೂಲ್​​ನಲ್ಲಿ ಮೊಬೈಲ್​​, ಇಂಟರ್​ನೆಟ್​ ಸ್ಥಗಿತ; ಸರಣಿ ಸ್ಫೋಟದಿಂದ ಕಳವಳಗೊಂಡು ತುರ್ತು ಸಭೆ ಕರೆದ ಅಮೆರಿಕ, ಬ್ರಿಟನ್

ಅಫ್ಘಾನಿಸ್ತಾನದ ಕಾಬೂಲ್​ನಲ್ಲಿ ಸರಣಿ ಸ್ಫೋಟವಾಗುತ್ತಿದ್ದಂತೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ತುರ್ತು ಸಭೆ ಕರೆದಿದ್ದಾರೆ. ಜೋ ಬೈಡೆನ್ ಭಾಗವಹಿಸಬೇಕಿದ್ದ ಪೂರ್ವ ನಿಗದಿತ ಎಲ್ಲ ಕಾರ್ಯಕ್ರಮಗಳನ್ನೂ ರದ್ದುಗೊಳಿಸಲಾಗಿದ್ದು ಅಮೆರಿಕದ ಶ್ವೇತಭವನದಲ್ಲಿ ತುರ್ತು ಸಭೆ ನಡೆಸಲಿದ್ದಾರೆ.

Kabul Blast: ಕಾಬೂಲ್​​ನಲ್ಲಿ ಮೊಬೈಲ್​​, ಇಂಟರ್​ನೆಟ್​ ಸ್ಥಗಿತ; ಸರಣಿ ಸ್ಫೋಟದಿಂದ ಕಳವಳಗೊಂಡು ತುರ್ತು ಸಭೆ ಕರೆದ ಅಮೆರಿಕ, ಬ್ರಿಟನ್
ಸ್ಫೋಟದಲ್ಲಿ ಗಾಯಗೊಂಡ ಮಹಿಳೆಯನ್ನು ಚಿಕಿತ್ಸೆಗೆ ಕರೆದೊಯ್ದ ದೃಶ್ಯ
TV9 Web
| Edited By: |

Updated on:Aug 26, 2021 | 9:46 PM

Share

ಕಾಬೂಲ್: ಅಫ್ಘಾನಿಸ್ತಾನದಲ್ಲಿ ನಡೆದ ಸತತ ಮೂರು ಬಾಂಬ್ ದಾಳಿಯ ಬೆನ್ನಲ್ಲೇ ವಿವಿಧ ದೇಶಗಳು ತೀವ್ರ ಕಳವಳಗೊಂಡಿವೆ. ಅಫ್ಘಾನಿಸ್ತಾನದಲ್ಲಿರುವ ವಿದೇಶಿ ಪ್ರಜೆಗಳನ್ನು ಆಯಾ ದೇಶಗಳು ಮರಳಿ ಕರೆತರುವ ಯತ್ನ ಇನ್ನಷ್ಟು ಜಟಿಲಗೊಂಡಿದೆ. ಸ್ಫೋಟದ ತೀವ್ರತೆ ಮತ್ತು ಪರಿಣಾಮ ತೀವ್ರ ಗಂಭೀರವಾಗಿದ್ದು, ಪರಿಸ್ಥಿತಿ ಕೈಮೀರುವ ಸಂಭಾವ್ಯತೆ ದಟ್ಟವಾಗಿದೆ ಎಂದು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ತಿಳಿಸಿದ್ದಾರೆ. ಬ್ರಿಟನ್ ಸರ್ಕಾರ ಸಹ ಘಟನೆಯ ಸ್ವರೂಪವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ತುರ್ತು ಸಭೆ ಕರೆದಿದೆ. ಅಫ್ಘಾನಿಸ್ತಾನದಲ್ಲಿ ಕರ್ಫ್ಯೂ ಹೇರಲಾಗಿದೆ.

ಅಫ್ಘಾನಿಸ್ತಾನದ ಕಾಬೂಲ್​ನಲ್ಲಿ ಸರಣಿ ಸ್ಫೋಟವಾಗುತ್ತಿದ್ದಂತೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ತುರ್ತು ಸಭೆ ಕರೆದಿದ್ದಾರೆ. ಜೋ ಬೈಡೆನ್ ಭಾಗವಹಿಸಬೇಕಿದ್ದ ಪೂರ್ವ ನಿಗದಿತ ಎಲ್ಲ ಕಾರ್ಯಕ್ರಮಗಳನ್ನೂ ರದ್ದುಗೊಳಿಸಲಾಗಿದ್ದು ಅಮೆರಿಕದ ಶ್ವೇತಭವನದಲ್ಲಿ ತುರ್ತು ಸಭೆ ನಡೆಸಲಿದ್ದಾರೆ.

ಮೊದಲು ಇಟಲಿ ವಿಮಾನ ಗುರಿಯಾಗಿಸಿಕೊಂಡು ಉಗ್ರರು ಆತ್ಮಾಹುತಿ ದಾಳಿ ನಡೆಸಿರುವ ಮಾಹಿತಿ ಲಭ್ಯವಾಗಿದೆ. ಸ್ಫೋಟದ ವೇಳೆ ಸಾವಿರಾರು ಜನರಿದ್ದರು ಎನ್ನಲಾಗಿದ್ದು, ಕಾಬೂಲ್ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಫೋಟದಲ್ಲಿ ಈವರೆಗೆ 18 ಜನ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಸ್ಫೋಟದಲ್ಲಿ 70ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು, ಮೂವರು ಅಮೆರಿಕ ಸೇನೆಯ ಯೋಧರಿಗೆ ಗಾಯಗೊಂಡಿದ್ದಾರೆ.

ಇದನ್ನೂ ಓದಿ: 

Kabul Blast: ಕಾಬೂಲ್ ವಿಮಾನ ನಿಲ್ದಾಣದ ಬಳಿ ಪ್ರಬಲ ಬಾಂಬ್​ ಸ್ಫೋಟ

Kabul Blast: ಕಾಬೂಲ್ ವಿಮಾನ ನಿಲ್ದಾಣದ ಬಳಿ ಪ್ರಬಲ ಬಾಂಬ್​ ಸ್ಫೋಟ

(Kabul blast effect mobile internet stopped America and Britain calls emergency meeting)

Published On - 9:24 pm, Thu, 26 August 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್