AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಬೂಲ್ ಮಸೀದಿಯಲ್ಲಿ ಬಾಂಬ್ ಸ್ಫೋಟ: ಇಬ್ಬರು ಸಾವು, ಹಲವರಿಗೆ ಗಾಯ

ಬಾಂಬ್ ಸ್ಫೋಟ ಸಂಭವಿಸಿದಾಗ ಮಸೀದಿಯಲ್ಲಿ ಪ್ರಾರ್ಥನೆಯ ಸೇವೆಯೊಂದು ನಡೆಯುತ್ತಿತ್ತು ಎಂದು ತಾಲಿಬಾನ್ ವಕ್ತಾರ ಝಬಿಯುಲ್ಲಾ ಮುಜಾಹಿದ್ ಹೇಳಿದ್ದಾರೆ.

ಕಾಬೂಲ್ ಮಸೀದಿಯಲ್ಲಿ ಬಾಂಬ್ ಸ್ಫೋಟ: ಇಬ್ಬರು ಸಾವು, ಹಲವರಿಗೆ ಗಾಯ
ಕಾಬೂಲ್​ ಸ್ಫೋಟದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು
TV9 Web
| Edited By: |

Updated on:Oct 03, 2021 | 7:40 PM

Share

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನಲ್ಲಿ ಭಾನುವಾರ ಬಾಂಬ್ ಸ್ಫೋಟಿಸಿದ್ದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಈದ್ಗಾ ಮಸೀದಿಯಲ್ಲಿ ಸೇರಿದ್ದವರನ್ನು ಈ ಬಾಂಬ್ ಸ್ಫೋಟದ ಮೂಲಕ ಗುರಿಯಾಗಿಸಲಾಗಿತ್ತು. ಬಾಂಬ್ ಸ್ಫೋಟ ಸಂಭವಿಸಿದಾಗ ಮಸೀದಿಯಲ್ಲಿ ಪ್ರಾರ್ಥನೆಯ ಸೇವೆಯೊಂದು ನಡೆಯುತ್ತಿತ್ತು ಎಂದು ತಾಲಿಬಾನ್ ವಕ್ತಾರ ಝಬಿಯುಲ್ಲಾ ಮುಜಾಹಿದ್ ಹೇಳಿದ್ದಾರೆ.

‘ಪ್ರಾಥಮಿಕ ಮಾಹಿತಿ ಪ್ರಕಾರ ಇಬ್ಬರು ನಾಗರಿಕರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ’ ಎಂದು ಎಎಫ್​ಪಿ ಸುದ್ದಿಸಂಸ್ಥೆಯು ಆಂತರಿಕ ಸಚಿವಾಲಯದ ವಕ್ತಾರ ಖಾರಿ ಸಯ್ಯದ್ ಖೋಸ್ತಿ ಹೇಳಿಕೆಯನ್ನು ವರದಿ ಮಾಡಿದೆ. ಸ್ಫೋಟದ ಹೊಣೆಯನ್ನು ಯಾವುದೇ ಉಗ್ರಗಾಮಿ ಗುಂಪು ಹೊತ್ತುಕೊಂಡಿಲ್ಲ. ಮಸೀದಿ ಸುತ್ತಮುತ್ತಲ ಪ್ರದೇಶದಲ್ಲಿ ಜನಸಂಚಾರ ನಿಷೇಧಿಸಲಾಗಿದೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

ತಾಲಿಬಾನ್ ಸರ್ಕಾರದ ಮಾಹಿತಿ ಮತ್ತು ಸಂಸ್ಕೃತಿ ಸಚಿವರೂ ಆಗಿರುವ ಮುಜಾಹಿದ್, ಈಗಾ ಮಸೀದಿಯಲ್ಲಿ ಭಾನುವಾರ ಮಧ್ಯಾಹ್ನ ಬಾಂಬ್​ಸ್ಫೋಟದಿಂದ ಸಾವುನೋವು ಸಂಭವಿಸಿದೆ ಎಂದು ಉರ್ದುವಿನಲ್ಲಿ ಟ್ವೀಟ್ ಮಾಡಿದ್ದರು. ಸ್ಥಳಕ್ಕೆ ಧಾವಿಸಿದ ಆಂಬುಲೆನ್ಸ್​ಗಳು ಗಾಯಾಳುಗಳನ್ನು ಕಾಬೂಲ್ ಆಸ್ಪತ್ರೆಗೆ ಕರೆದೊಯ್ದಿವೆ.

ವಿಶ್ವಸಂಸ್ಥೆಯು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿರುವ ತಾಲಿಬಾನ್ ಉಗ್ರರು ಕಳೆದ ಆಗಸ್ಟ್ 15ರಂದು ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಗರವನ್ನು ವಶಪಡಿಸಿಕೊಂಡಿದ್ದರು. ಅಮೆರಿಕ ನೇತೃತ್ವದ ವಿದೇಶಿ ಭದ್ರತಾ ಪಡೆಗಳು ತರಾತುರಿಯಲ್ಲಿ ಹೊರನಡೆದ ನಂತರ ಉಂಟಾಗಿದ್ದ ನಿರ್ವಾತವನ್ನು ತಾಲಿಬಾನ್ ತನ್ನ ಅನುಕೂಲಕ್ಕೆ ತಕ್ಕಂತೆ ಬಳಸಿಕೊಂಡಿತು.

ಆಗಸ್ಟ್ ತಿಂಗಳಲ್ಲಿ ಕಾಬೂಲ್​ನ ಹಮೀದ್ ಕರ್ಜೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟದಿಂದ ಅಮೆರಿಕ ಭದ್ರತಾಪಡೆಗೆ ಸೇರಿದ 12 ಮಂದಿಯ ಜೊತೆಗೆ ಹತ್ತಾರು ಮಂದಿ ಸಾವನ್ನಪ್ಪಿದ್ದರು. ದೇಶಬಿಟ್ಟು ಹೋಗಲು ಉದ್ದೇಶಿಸಿದ್ದ ಜನರನ್ನು ಗುರಿಯಾಗಿಸಿ ಬಾಂಬ್ ಸ್ಫೋಟ ನಡೆದಿತ್ತು. ನಂತರದ ದಿನಗಳಲ್ಲಿ ಬಾಂಬ್ ಸ್ಫೋಟದ ಹೊಣೆಯನ್ನು ಐಸಿಸ್-ಕೆ ಹೊತ್ತುಕೊಂಡಿತ್ತು.

(Kabul Bomb Explosion in Mosque At least 2 killed several injured)

ಇದನ್ನೂ ಓದಿ: Taliban ಪೂರ್ವ ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಮೇಲೆ ದಾಳಿ, 5 ಸಾವು

ಇದನ್ನೂ ಓದಿ: Afghanistan Update: ಕಾಬೂಲ್ ಹೊರವಲಯದಲ್ಲಿ ತಾಲಿಬಾನ್ ಬೆಂಬಲಿಗರ ಸಮಾವೇಶ: ಸಾವಿರಾರು ಮಂದಿ ಭಾಗಿ

Published On - 7:39 pm, Sun, 3 October 21

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ