AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಬೂಲ್​ ಏರ್​ಪೋರ್ಟ್​​ ಮೇಲೆ ನಾವು ಡ್ರೋನ್​ ದಾಳಿ ಮಾಡಿದ್ದು ತಪ್ಪಾಯ್ತು’-ಕ್ಷಮೆ ಕೇಳಿದ ಯುಎಸ್​

ಆಗಸ್ಟ್​​ ಕೊನೇ ವಾರದಲ್ಲಿ ಅಮೆರಿಕದ ಯೋಧರು ತಮ್ಮ ದೇಶದ ನಾಗರಿಕರನ್ನು ಸ್ಥಳಾಂತರ ಮಾಡುವ ಕೆಲಸದಲ್ಲಿ ತೊಡಗಿದ್ದರೆ, ಐಸಿಸ್​-ಕೆ ಉಗ್ರರು ಆ ಸೈನಿಕರನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್​ ದಾಳಿ ನಡೆಸಿದ್ದರು.

‘ಕಾಬೂಲ್​ ಏರ್​ಪೋರ್ಟ್​​ ಮೇಲೆ ನಾವು ಡ್ರೋನ್​ ದಾಳಿ ಮಾಡಿದ್ದು ತಪ್ಪಾಯ್ತು’-ಕ್ಷಮೆ ಕೇಳಿದ ಯುಎಸ್​
ಡ್ರೋನ್​ ದಾಳಿ ಚಿತ್ರಣ
TV9 Web
| Edited By: |

Updated on:Sep 18, 2021 | 8:36 AM

Share

ಅಫ್ಘಾನಿಸ್ತಾನದ ಕಾಬೂಲ್​​ನ ಏರ್​ಪೋರ್ಟ್ (Kabul Airport)​ ಮೇಲೆ ಆಗಸ್ಟ್​ 29ರಂದು ತಾವು ನಡೆಸಿದ ಡ್ರೋನ್​ ದಾಳಿ ತಪ್ಪು ಎಂದು ಯುಎಸ್​​ ಮಿಲಿಟರಿ ಉನ್ನತ ಕಮಾಂಡರ್​ ಒಬ್ಬರು ಒಪ್ಪಿಕೊಂಡಿದ್ದಾರೆ. ಆಗಸ್ಟ್​ 15ರಂದು ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ಆಗಸ್ಟ್​​ 30ರೊಳಗೆ ಅಲ್ಲಿರುವ ಅಮೆರಿಕನ್ನರನ್ನು ಸ್ಥಳಾಂತರ ಮಾಡುವ ಪ್ರಕ್ರಿಯೆ ಮುಗಿಸಬೇಕು ಎಂದು ಯುಎಸ್​ಗೆ ಎಚ್ಚರಿಕೆಯನ್ನು ನೀಡಿದ್ದರು. ಆದರೆ ಅಮೆರಿಕ ಕೊನೇ ಹಂತದ ಸ್ಥಳಾಂತರ ಪ್ರಕ್ರಿಯೆ ನಡೆಸುವಾಗ ಐಸಿಸ್​-ಕೆ (ISIS-K) ಉಗ್ರರು ಆತ್ಮಾಹುತಿ ಬಾಂಬ್​ ದಾಳಿ ನಡೆಸಿದ್ದರು. ಈ ದಾಳಿಗೆ ಪ್ರತಿದಾಳಿಯಾಗಿ ಅಮೆರಿಕ ಆಗಸ್ಟ್​ 29ರಂದು ಡ್ರೋನ್​ ಸ್ಟ್ರೈಕ್​ ನಡೆಸಿತ್ತು. ಇದರಲ್ಲಿ ಮಕ್ಕಳೂ ಸೇರಿ 10 ನಾಗರಿಕರು ಸಾವನ್ನಪ್ಪಿದ್ದರು. 

ಆಗಸ್ಟ್​ 29ರ ಡ್ರೋನ್​ ದಾಳಿಯ ವರದಿ ನೀಡಿದ ಅಮೆರಿಕ ಉನ್ನತ ಕಮಾಂಡರ್​ ಜನರಲ್ ಫ್ರಾಂಕ್ ಮೆಕೆಂಜಿ, ನಾವು ಅಂದು ನಡೆಸಿದ ದಾಳಿ ಒಂದು ದುರಂತ. ನಮ್ಮಿಂದಾದ ತಪ್ಪು ಅದು ಎಂದು ಹೇಳಿದ್ದಾರೆ. ಹಾಗೇ, ಈ ಬಗ್ಗೆ ಯುಎಸ್​ ಭದ್ರತಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಕೂಡ ಕ್ಷಮೆ ಕೇಳಿದ್ದಾರೆ. ಅಂದಿನ ದಾಳಿಯಲ್ಲಿ 10 ನಾಗರಿಕರು ಮೃತಪಟ್ಟಿದ್ದಾರೆ. ಈ ಸಾವಿನ ಬಗ್ಗೆ ತೀವ್ರ ಸಂತಾಪವಿದೆ. ಅವರ ಕುಟುಂಬಗಳಿಗೆ ನಮ್ಮ ಸಾಂತ್ವನಗಳು. ಹಾಗೇ ಘಟನೆಯಲ್ಲಿ ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆಯೂ ನಾವು ಪರಿಶೀಲನೆ ಮಾಡುತ್ತಿದ್ದೇವೆ ಎಂದು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಆಗಸ್ಟ್​​ ಕೊನೇ ವಾರದಲ್ಲಿ ಅಮೆರಿಕದ ಯೋಧರು ತಮ್ಮ ದೇಶದ ನಾಗರಿಕರನ್ನು ಸ್ಥಳಾಂತರ ಮಾಡುವ ಕೆಲಸದಲ್ಲಿ ತೊಡಗಿದ್ದರೆ, ಐಸಿಸ್​-ಕೆ ಉಗ್ರರು ಆ ಸೈನಿಕರನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್​ ದಾಳಿ ನಡೆಸಿದ್ದರು. ಇದರಲ್ಲಿ ಯುಎಸ್​ನ ಸುಮಾರು 10 ಯೋಧರು ಮೃತಪಟ್ಟಿದ್ದರು. ಅದಕ್ಕೆ ಪ್ರತಿಯಾಗಿ ಅಮೆರಿಕ ಸೇನೆ ಆಗಸ್ಟ್​ 29ರಂದು ಡ್ರೋನ್​ ದಾಳಿ ನಡೆಸಿತ್ತು. ವಿಮಾನ ನಿಲ್ದಾಣದ ಬಳಿಯಿರುವ ಒಂದು ಬಿಳಿಬಣ್ಣದ ಟೊಯೊಟಾ ವಾಹನ ಗುರಿಯಾಗಿಸಿ ಮಾಡಿದ್ದ ದಾಳಿಯಲ್ಲಿ ಮಕ್ಕಳೂ ಸೇರಿ 10 ಮಂದಿ ಮೃತಪಟ್ಟಿದ್ದರು. ಆದರೆ ಇವರು ಮುಗ್ಧ ನಾಗರಿಕರಾಗಿದ್ದಾರೆ. ಅದನ್ನೀಗ ಅಮೆರಿಕವೇ ಒಪ್ಪಿಕೊಂಡು ಕ್ಷಮೆ ಕೇಳಿದೆ.

ಇದನ್ನೂ ಓದಿ: Health Tips: ಅರಿಶಿಣ ಹಾಲು ಸೇವಿಸಿದರೆ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ತಿಳಿದಿದೆಯೇ?

TDS: ಬ್ಯಾಂಕ್​ ಠೇವಣಿ ಮೇಲೆ ಬರುವ ಬಡ್ಡಿಗೆ ಪರಿಶಿಷ್ಟ ಪಂಗಡವರಿಗೆ ಟಿಡಿಎಸ್​ ಕಡಿತವಿಲ್ಲ; ಕೇಂದ್ರದ ಅಧಿಸೂಚನೆ

Published On - 8:35 am, Sat, 18 September 21

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ