AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಬೂಲ್​ ಏರ್​ಪೋರ್ಟ್​​ ಮೇಲೆ ನಾವು ಡ್ರೋನ್​ ದಾಳಿ ಮಾಡಿದ್ದು ತಪ್ಪಾಯ್ತು’-ಕ್ಷಮೆ ಕೇಳಿದ ಯುಎಸ್​

ಆಗಸ್ಟ್​​ ಕೊನೇ ವಾರದಲ್ಲಿ ಅಮೆರಿಕದ ಯೋಧರು ತಮ್ಮ ದೇಶದ ನಾಗರಿಕರನ್ನು ಸ್ಥಳಾಂತರ ಮಾಡುವ ಕೆಲಸದಲ್ಲಿ ತೊಡಗಿದ್ದರೆ, ಐಸಿಸ್​-ಕೆ ಉಗ್ರರು ಆ ಸೈನಿಕರನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್​ ದಾಳಿ ನಡೆಸಿದ್ದರು.

‘ಕಾಬೂಲ್​ ಏರ್​ಪೋರ್ಟ್​​ ಮೇಲೆ ನಾವು ಡ್ರೋನ್​ ದಾಳಿ ಮಾಡಿದ್ದು ತಪ್ಪಾಯ್ತು’-ಕ್ಷಮೆ ಕೇಳಿದ ಯುಎಸ್​
ಡ್ರೋನ್​ ದಾಳಿ ಚಿತ್ರಣ
TV9 Web
| Edited By: |

Updated on:Sep 18, 2021 | 8:36 AM

Share

ಅಫ್ಘಾನಿಸ್ತಾನದ ಕಾಬೂಲ್​​ನ ಏರ್​ಪೋರ್ಟ್ (Kabul Airport)​ ಮೇಲೆ ಆಗಸ್ಟ್​ 29ರಂದು ತಾವು ನಡೆಸಿದ ಡ್ರೋನ್​ ದಾಳಿ ತಪ್ಪು ಎಂದು ಯುಎಸ್​​ ಮಿಲಿಟರಿ ಉನ್ನತ ಕಮಾಂಡರ್​ ಒಬ್ಬರು ಒಪ್ಪಿಕೊಂಡಿದ್ದಾರೆ. ಆಗಸ್ಟ್​ 15ರಂದು ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ಆಗಸ್ಟ್​​ 30ರೊಳಗೆ ಅಲ್ಲಿರುವ ಅಮೆರಿಕನ್ನರನ್ನು ಸ್ಥಳಾಂತರ ಮಾಡುವ ಪ್ರಕ್ರಿಯೆ ಮುಗಿಸಬೇಕು ಎಂದು ಯುಎಸ್​ಗೆ ಎಚ್ಚರಿಕೆಯನ್ನು ನೀಡಿದ್ದರು. ಆದರೆ ಅಮೆರಿಕ ಕೊನೇ ಹಂತದ ಸ್ಥಳಾಂತರ ಪ್ರಕ್ರಿಯೆ ನಡೆಸುವಾಗ ಐಸಿಸ್​-ಕೆ (ISIS-K) ಉಗ್ರರು ಆತ್ಮಾಹುತಿ ಬಾಂಬ್​ ದಾಳಿ ನಡೆಸಿದ್ದರು. ಈ ದಾಳಿಗೆ ಪ್ರತಿದಾಳಿಯಾಗಿ ಅಮೆರಿಕ ಆಗಸ್ಟ್​ 29ರಂದು ಡ್ರೋನ್​ ಸ್ಟ್ರೈಕ್​ ನಡೆಸಿತ್ತು. ಇದರಲ್ಲಿ ಮಕ್ಕಳೂ ಸೇರಿ 10 ನಾಗರಿಕರು ಸಾವನ್ನಪ್ಪಿದ್ದರು. 

ಆಗಸ್ಟ್​ 29ರ ಡ್ರೋನ್​ ದಾಳಿಯ ವರದಿ ನೀಡಿದ ಅಮೆರಿಕ ಉನ್ನತ ಕಮಾಂಡರ್​ ಜನರಲ್ ಫ್ರಾಂಕ್ ಮೆಕೆಂಜಿ, ನಾವು ಅಂದು ನಡೆಸಿದ ದಾಳಿ ಒಂದು ದುರಂತ. ನಮ್ಮಿಂದಾದ ತಪ್ಪು ಅದು ಎಂದು ಹೇಳಿದ್ದಾರೆ. ಹಾಗೇ, ಈ ಬಗ್ಗೆ ಯುಎಸ್​ ಭದ್ರತಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಕೂಡ ಕ್ಷಮೆ ಕೇಳಿದ್ದಾರೆ. ಅಂದಿನ ದಾಳಿಯಲ್ಲಿ 10 ನಾಗರಿಕರು ಮೃತಪಟ್ಟಿದ್ದಾರೆ. ಈ ಸಾವಿನ ಬಗ್ಗೆ ತೀವ್ರ ಸಂತಾಪವಿದೆ. ಅವರ ಕುಟುಂಬಗಳಿಗೆ ನಮ್ಮ ಸಾಂತ್ವನಗಳು. ಹಾಗೇ ಘಟನೆಯಲ್ಲಿ ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆಯೂ ನಾವು ಪರಿಶೀಲನೆ ಮಾಡುತ್ತಿದ್ದೇವೆ ಎಂದು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಆಗಸ್ಟ್​​ ಕೊನೇ ವಾರದಲ್ಲಿ ಅಮೆರಿಕದ ಯೋಧರು ತಮ್ಮ ದೇಶದ ನಾಗರಿಕರನ್ನು ಸ್ಥಳಾಂತರ ಮಾಡುವ ಕೆಲಸದಲ್ಲಿ ತೊಡಗಿದ್ದರೆ, ಐಸಿಸ್​-ಕೆ ಉಗ್ರರು ಆ ಸೈನಿಕರನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್​ ದಾಳಿ ನಡೆಸಿದ್ದರು. ಇದರಲ್ಲಿ ಯುಎಸ್​ನ ಸುಮಾರು 10 ಯೋಧರು ಮೃತಪಟ್ಟಿದ್ದರು. ಅದಕ್ಕೆ ಪ್ರತಿಯಾಗಿ ಅಮೆರಿಕ ಸೇನೆ ಆಗಸ್ಟ್​ 29ರಂದು ಡ್ರೋನ್​ ದಾಳಿ ನಡೆಸಿತ್ತು. ವಿಮಾನ ನಿಲ್ದಾಣದ ಬಳಿಯಿರುವ ಒಂದು ಬಿಳಿಬಣ್ಣದ ಟೊಯೊಟಾ ವಾಹನ ಗುರಿಯಾಗಿಸಿ ಮಾಡಿದ್ದ ದಾಳಿಯಲ್ಲಿ ಮಕ್ಕಳೂ ಸೇರಿ 10 ಮಂದಿ ಮೃತಪಟ್ಟಿದ್ದರು. ಆದರೆ ಇವರು ಮುಗ್ಧ ನಾಗರಿಕರಾಗಿದ್ದಾರೆ. ಅದನ್ನೀಗ ಅಮೆರಿಕವೇ ಒಪ್ಪಿಕೊಂಡು ಕ್ಷಮೆ ಕೇಳಿದೆ.

ಇದನ್ನೂ ಓದಿ: Health Tips: ಅರಿಶಿಣ ಹಾಲು ಸೇವಿಸಿದರೆ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ತಿಳಿದಿದೆಯೇ?

TDS: ಬ್ಯಾಂಕ್​ ಠೇವಣಿ ಮೇಲೆ ಬರುವ ಬಡ್ಡಿಗೆ ಪರಿಶಿಷ್ಟ ಪಂಗಡವರಿಗೆ ಟಿಡಿಎಸ್​ ಕಡಿತವಿಲ್ಲ; ಕೇಂದ್ರದ ಅಧಿಸೂಚನೆ

Published On - 8:35 am, Sat, 18 September 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ