AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಲಿಬಾನ್​ನೊಂದಿಗೆ ಮಾತುಕತೆಗಾಗಿ ಕಾಬೂಲ್​ಗೆ ತೆರಳಿದ ಪಾಕಿಸ್ತಾನದ ಹಣಕಾಸು ಸಚಿವ ಖುರೇಷಿ ಮತ್ತು ಐಎಸ್​ಐ ಮುಖ್ಯಸ್ಥ

ಅಫ್ಘಾನಿಸ್ತಾನದ ವಿದೇಶಾಂಗ ವ್ಯವಹಾರ ಸಚಿವ ಅಮಿರ್​ ಖಾನ್ ಮುತ್ತಾಖಿ ಅವರೊಂದಿಗೆ ಪಾಕಿಸ್ತಾನದ ನಿಯೋಗ ಮಾತುಕತೆ ನಡೆಸಲಿದೆ

ತಾಲಿಬಾನ್​ನೊಂದಿಗೆ ಮಾತುಕತೆಗಾಗಿ ಕಾಬೂಲ್​ಗೆ ತೆರಳಿದ ಪಾಕಿಸ್ತಾನದ ಹಣಕಾಸು ಸಚಿವ ಖುರೇಷಿ ಮತ್ತು ಐಎಸ್​ಐ ಮುಖ್ಯಸ್ಥ
ತಾಲಿಬಾನ್ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Oct 21, 2021 | 9:15 PM

Share

ಇಸ್ಲಾಮಾಬಾದ್: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್​ಐ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಫೈಜ್ ಹಮೀದ್ ಅವರೊಂದಿಗೆ ಪಾಕ್ ಹಣಕಾಸು ಸಚಿವ ಶಾ ಮಹ್ಮೂದ್ ಖುರೇಷಿ ಗುರುವಾರ ಕಾಬೂಲ್​ಗೆ ತೆರಳಿದ್ದು, ತಾಲಿಬಾನ್ ನೇತೃತ್ವದಲ್ಲಿ ಆಡಳಿತ ನಡೆಸುತ್ತಿರುವ ಅಲ್ಲಿನ ಹಂಗಾಮಿ ಸರ್ಕಾರದೊಂದಿಗೆ ಮಾತುಕತೆ ನಡೆಸುವ ಸಾಧ್ಯತೆಯಿದೆ. ಅಫ್ಘಾನಿಸ್ತಾನದ ವಿದೇಶಾಂಗ ವ್ಯವಹಾರ ಸಚಿವ ಅಮಿರ್​ ಖಾನ್ ಮುತ್ತಾಖಿ ಅವರೊಂದಿಗೆ ಪಾಕಿಸ್ತಾನದ ನಿಯೋಗ ಮಾತುಕತೆ ನಡೆಸಲಿದೆ ಎಂದು ಪಾಕ್ ಸರ್ಕಾರದ ಪ್ರಕಟಣೆ ತಿಳಿಸಿದೆ. ಕಾಬೂಲ್ ವಿಮಾನ ನಿಲ್ದಾಣದಲ್ಲಿ ಪಾಕಿಸ್ತಾನದ ನಿಯೋಗವನ್ನು ಮುತ್ತಾಖಿ ಸ್ವಾಗತಿಸಿದರು.

ಎರಡೂ ದೇಶಗಳ ನಡುವಣ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಸುಭದ್ರಗೊಳಿಸಲು ಹಲವು ವಿಚಾರಗಳಲ್ಲಿ ಸಹಕಾರ ವೃದ್ಧಿಗೆ ಏನೆಲ್ಲಾ ಮಾಡಬೇಕು ಎಂಬ ಬಗ್ಗೆ ಎರಡೂ ದೇಶಗಳ ವಿದೇಶಾಂಗ ಸಚಿವರು ಚರ್ಚಿಸಲಿದ್ದಾರೆ. ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆ ವಿಚಾರದಲ್ಲಿ ಪಾಕಿಸ್ತಾನದ ದೃಷ್ಟಿಕೋನವನ್ನು ಈ ವೇಳೆ ಅಫ್ಘಾನಿಸ್ತಾನಕ್ಕೆ ಸ್ಪಷ್ಟಪಡಿಸಲಾಗುವುದು ಎಂದು ಪಾಕ್ ವಿದೇಶಾಂಗ ಇಲಾಖೆ ಹೇಳಿದೆ.

ಅಫ್ಘಾನಿಸ್ತಾನದ ನೆರೆಯಲ್ಲಿರುವ ಪಾಕಿಸ್ತಾನವು ಸದಾ ಅಲ್ಲಿನ ಜನರ ಪರವಾಗಿ ನಿಂತಿದೆ. ವ್ಯಾಪಾರ ಮತ್ತು ಪಾದಚಾರಿಗಳ ಸಂಚಾರಕ್ಕೆ ಗಡಿಗಳನ್ನು ಮುಕ್ತವಾಗಿ ಇರಿಸಲಾಗಿದೆ. ಅಫ್ಘಾನಿಸ್ತಾನಕ್ಕೆ ಅಗತ್ಯವಿರುವ ಮಾನವೀಯ ನೆರವು ಒದಗಿಸುವುದರೊಂದಿಗೆ ಆಹಾರ ಪದಾರ್ಥಗಳು, ಔಷಧಿ ಮತ್ತು ಇತರ ಸರಕುಗಳನ್ನು ಪಾಕಿಸ್ತಾನವು ಕಳಿಸಿಕೊಟ್ಟಿದೆ.

ಚೀನಾ, ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ರಷ್ಯಾದ ಪ್ರತಿನಿಧಿಗಳು ಮಾಸ್ಕೋದಲ್ಲಿ ಮಾತುಕತೆ ನಡೆಸಿದ ನಂತರ ಪಾಕ್ ನಿಯೋಗವು ಅಫ್ಘಾನಿಸ್ತಾನಕ್ಕೆ ತೆರಳುತ್ತಿದೆ. ಮುಂದಿನ ವಾರದಲ್ಲಿ ಇರಾನ್ ರಾಜಧಾನಿ ತೆಹರಾನ್​ನಲ್ಲಿ ನಡೆಯಲಿರುವ ಮಹತ್ವದ ಸಭೆಯಲ್ಲಿ ಅಫ್ಘಾನಿಸ್ತಾನದ ಸುತ್ತಮುತ್ತಲ ದೇಶಗಳ ವಿದೇಶಾಂಗ ವ್ಯವಹಾರಗಳ ಸಚಿವರೊಂದಿಗೆ ರಷ್ಯಾ ಸಹ ಪಾಲ್ಗೊಳ್ಳಲಿದೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸಂಘಟನೆ ರಚಿಸುವ ಹಂಗಾಮಿ ಸರ್ಕಾರಕ್ಕೆ ಈವರೆಗೆ ಅಂತರರಾಷ್ಟ್ರೀಯ ಮಾನ್ಯತೆ ಸಿಕ್ಕಿಲ್ಲ.

ಸೆಪ್ಟೆಂಬರ್ 4ರಂದು ಲೆಫ್ಟಿನೆಂಟ್ ಜನರಲ್ ಹಮೀದ್ ಇದ್ದಕ್ಕಿದ್ದಂತೆ ಕಾಬೂಲ್​ಗೆ ಭೇಟಿ ನೀಡಿದ್ದರು. ಅಫ್ಘಾನಿಸ್ತಾನದಲ್ಲಿ ಸರ್ಕಾರ ರಚಿಸಲು ಹಲವು ತಡೆಗಳನ್ನು ಎದುರಿಸುತ್ತಿದ್ದ ತಾಲಿಬಾನ್​ಗೆ ನೆರವಾಗಿದ್ದರು. ಇವರ ಮೂರು ದಿನಗಳ ಭೇಟಿಯ ಅವಧಿಯಲ್ಲಿ ತಾಲಿಬಾನ್ ಹಂಗಾಮಿ ಸರ್ಕಾರವನ್ನು ಘೋಷಿಸಿತ್ತು.

ತಾಲಿಬಾನ್ ಸಂಘಟನೆಯಲ್ಲಿ ಪಾಕಿಸ್ತಾನವು ಸಾಕಷ್ಟು ಪ್ರಭಾವ ಹೊಂದಿದ್ದು, ಅಮೆರಿಕದೊಂದಿಗಿನ ಮಾತುಕತೆಯಲ್ಲಿಯೂ ಮುಖ್ಯ ಪಾತ್ರ ನಿರ್ವಹಿಸಿತ್ತು. ತಾಲಿಬಾನ್​ಗೆ ಪಾಕಿಸ್ತಾನದಿಂದ ಮಿಲಿಟರಿ ನೆರವು ಸಿಗುತ್ತಿದೆ ಎಂದು ಅಫ್ಘಾನಿಸ್ತಾನದ ಅಧ್ಯಕ್ಷರಾಗಿದ್ದ ಅಶ್ರಫ್ ಘನಿ ಈ ಹಿಂದೆ ಆರೋಪಿಸಿದ್ದರು. ಈ ಆರೋಪವನ್ನು ಪಾಕಿಸ್ತಾನ ನಿರಾಕರಿಸಿತ್ತು. ಕಳೆದ ಆಗಸ್ಟ್ 15ರಂದು ತಾಲಿಬಾನ್ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ವಶಪಡಿಸಿಕೊಂಡಿತ್ತು. ಆಗಸ್ಟ್​ 31ರಂದು ಅಮೆರಿಕ ಸೇನೆ ಅಫ್ಘಾನಿಸ್ತಾನದಿಂದ ಕಾಲ್ತೆಗೆಯಿತು. 20 ವರ್ಷಗಳ ಯುದ್ಧದಲ್ಲಿ ಅಮೆರಿಕ ಸಾಧಿಸಿದ್ದೇನು ಎಂಬ ಪ್ರಶ್ನೆಯನ್ನು ವಿಶ್ವದ ಹಲವು ವಿಶ್ಲೇಷಕರು ಕೇಳಿದ್ದರು.

ಇದನ್ನೂ ಓದಿ: ಅಫ್ಘಾನಿಸ್ತಾನವು ತೀವ್ರವಾದಿಗಳು, ಭಯೋತ್ಪಾದಕರ ನೆಲೆವೀಡಾಗದಿರಲಿ: ಜಿ20 ಸಮಾವೇಶದಲ್ಲಿ ನರೇಂದ್ರ ಮೋದಿ ಇದನ್ನೂ ಓದಿ: ಅಫ್ಘಾನಿಸ್ತಾನದ ಕುಂಡುಜ್ ಮಸೀದಿ ಸ್ಫೋಟ: ಕನಿಷ್ಠ 100 ಮಂದಿ ಸಾವು, ಹಲವರಿಗೆ ಗಾಯ

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್