AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜ್​ಶೀರ್​ ವಶಪಡಿಸಿಕೊಂಡಿದ್ದಾಗಿ ತಾಲಿಬಾನ್ ಘೋಷಣೆ; ರಸ್ತೆ ಮಾತ್ರ ನಿಮ್ಮ ವಶದಲ್ಲಿದೆ ಎಂದು ತಿರುಗೇಟು ಕೊಟ್ಟ ರೆಸಿಸ್ಟೆನ್ಸ್ ಫ್ರಂಟ್‌

ಇದಕ್ಕೆ ತಿರುಗೇಟು ನೀಡಿರುವ ರೆಸಿಸ್ಟೆನ್ಸ್ ಫ್ರಂಟ್‌, ಪಂಜ್‌ಶೀರ್‌ ಕಣಿವೆ ಮೇಲೆ ಇನ್ನೂ ನಮ್ಮ ಹಿಡಿತವಿದೆ. ತಾಲಿಬಾನ್ ಕೇವಲ ಪಂಜ್‌ಶೀರ್‌ ರಸ್ತೆಯನ್ನು ವಶಕ್ಕೆ ಪಡೆದಿದೆ. ಪಂಜ್​ಶೀರ್ ಪ್ರಾಂತ್ಯ ಅವರ ಹಿಡಿತಕ್ಕೆ ಸಿಲುಕಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಪಂಜ್​ಶೀರ್​ ವಶಪಡಿಸಿಕೊಂಡಿದ್ದಾಗಿ ತಾಲಿಬಾನ್ ಘೋಷಣೆ; ರಸ್ತೆ ಮಾತ್ರ ನಿಮ್ಮ ವಶದಲ್ಲಿದೆ ಎಂದು ತಿರುಗೇಟು ಕೊಟ್ಟ ರೆಸಿಸ್ಟೆನ್ಸ್ ಫ್ರಂಟ್‌
ಸಾಂಕೇತಿಕ ಚಿತ್ರ
TV9 Web
| Updated By: Skanda|

Updated on: Sep 06, 2021 | 8:05 AM

Share

ಅಫ್ಘಾನಿಸ್ತಾನದ ಬಹುಭಾಗವನ್ನು ಆಕ್ರಮಿಸಿಕೊಂಡಿರುವ ತಾಲಿಬಾನ್​ ಉಗ್ರರು ಇದೀಗ ಪಂಜ್​ಶೀರ್​ ಪ್ರಾಂತ್ಯವನ್ನೂ ತಮ್ಮ ತೆಕ್ಕೆಗೆ ತೆಗೆದುಕೊಂಡಿರುವುದಾಗಿ ಘೋಷಿಸಿದ್ದಾರೆ. ತಾಲಿಬಾನ್ ಸಂಘಟನೆ ವಕ್ತಾರ ಸುಹೈಲ್ ಶಾಹಿನ್ ಈ ಬಗ್ಗೆ ಹೇಳಿಕೆ ನೀಡಿದ್ದು, ಪಂಜ್‌ಶೀರ್‌ ವಿವಾದ ಅಂತ್ಯವಾಗಿದೆ. ಅಫ್ಘಾನಿಸ್ತಾನ ಸಂಪೂರ್ಣವಾಗಿ ತಾಲಿಬಾನ್ ವಶವಾಗಿದೆ. ಅಫ್ಘಾನಿಸ್ತಾನದ ಪುನರ್‌ನಿರ್ಮಾಣ ಮಾಡುತ್ತೇವೆ ಎಂದು ತಿಳಿಸಿದ್ದಾನೆ.

ಪಂಜ್‌ಶೀರ್‌ನ ಎಲ್ಲ ಜಿಲ್ಲೆಗಳನ್ನು ವಶಕ್ಕೆ ಪಡೆದಿದ್ದೇವೆ. ಯಾರ ವಿರುದ್ಧವೂ ಆಫ್ಘನ್ ಭೂಮಿ ಬಳಕೆಗೆ ಅವಕಾಶವಿಲ್ಲ. ಅಫ್ಘಾನಿಸ್ತಾನವನ್ನು ಮರಳಿ ಕಟ್ಟುವ ಕಡೆ ನಮ್ಮ ಗಮನ ಇರಲಿದೆ ಎಂದು ತಾಲಿಬಾನ್ ಸಂಘಟನೆ ವಕ್ತಾರ ಸುಹೈಲ್ ಶಾಹಿನ್ ಹೇಳಿಕೆ ನೀಡಿದ್ದಾನೆ. ಆ ಮೂಲಕ ತಾಲಿಬಾನಿಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದ್ದ ಪಂಜ್​ಶೀರ್​ ಪ್ರಾಂತ್ಯ ಕೂಡಾ ತೆಕ್ಕೆಗೆ ಸಿಲುಕಿರುವುದಾಗಿ ತಿಳಿಸಿದ್ದಾನೆ.

ಆದರೆ, ಇದಕ್ಕೆ ತಿರುಗೇಟು ನೀಡಿರುವ ರೆಸಿಸ್ಟೆನ್ಸ್ ಫ್ರಂಟ್‌, ಪಂಜ್‌ಶೀರ್‌ ಕಣಿವೆ ಮೇಲೆ ಇನ್ನೂ ನಮ್ಮ ಹಿಡಿತವಿದೆ. ತಾಲಿಬಾನ್ ಕೇವಲ ಪಂಜ್‌ಶೀರ್‌ ರಸ್ತೆಯನ್ನು ವಶಕ್ಕೆ ಪಡೆದಿದೆ. ಪಂಜ್​ಶೀರ್ ಪ್ರಾಂತ್ಯ ಅವರ ಹಿಡಿತಕ್ಕೆ ಸಿಲುಕಿಲ್ಲ ಎಂದು ಸ್ಪಷ್ಟನೆ ನೀಡಿದೆ. ಕೆಲ ದಿನಗಳ ಹಿಂದೆಯೂ ತಾಲಿಬಾನ್​ ಪಂಜ್​ಶೀರ್​ ಬಗ್ಗೆ ಮಾತನಾಡಿದ್ದಾಗ ಅಲ್ಲಿನ ನಾಯಕರು ಇದೇ ರೀತಿ ತಿರುಗೇಟು ನೀಡಿ ನಾವು ತಾಲಿಬಾನ್​ಗಳ ಬೆದರಿಕೆಗೆ ಜಗ್ಗುವುದಿಲ್ಲ ಎಂದಿದ್ದರು.

ಅಮರುಲ್ಲಾ ಸಾಲೇಹ್ ಹೇಳಿದ್ದೇನು? ತಮ್ಮನ್ನು ತಾವು ಅಫ್ಘಾನಿಸ್ತಾನದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡಿರುವ, ಸದ್ಯ ಪಂಜ್‌ಶೀರ್‌​ ಪ್ರಾಂತ್ಯದ ಹೋರಾಟಗಾರರೊಂದಿಗೆ ಸೇರಿರುವ ಅಮರುಲ್ಲಾ ಸಾಲೇಹ್, ಕಾಬೂಲ್​ ಹೇಗೆ ತಾಲಿಬಾನ್​ ಉಗ್ರರ ಕೈವಶವಾಯಿತು, ಅಂಥ ಕಷ್ಟಕರದ ಸಂದರ್ಭದಲ್ಲಿ ಅಫ್ಘಾನಿಸ್ತಾನದ ನಾಯಕತ್ವ ಜನರನ್ನು ಹೇಗೆ ಕೈಬಿಟ್ಟಿತು ಎಂಬ ಬಗ್ಗೆ ಮಾಧ್ಯಮಕ್ಕೆ ವಿವರಿಸಿದ್ದಾರೆ. 48 ವರ್ಷದ ಅವರು, ತಾವು ತಾಲಿಬಾನಿಗಳಿಗೆ ಹೆದರುವುದಿಲ್ಲ ಎಂದು ಹೇಳಿಕೊಂಡಿದ್ದಾರೆ. ​

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಅಟ್ಟಹಾಸ ಶುರುವಾಗುತ್ತಿದ್ದಂತೆ ದೇಶದ ಪ್ರಮುಖ ನಾಯಕರೆಲ್ಲ ದೇಶ ತೊರೆದು ಹೋಗಿದ್ದಾರೆ. ಇಲ್ಲಿನ ಜನರಿಗೆ ಅವರ ಅಗತ್ಯ ಇತ್ತು. ಆ ಸಮಯದಲ್ಲೇ ಅವರನ್ನು ಬಿಟ್ಟು ಹೋಗಿದ್ದಾರೆ. ಹೀಗೆ ದೇಶ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿದ್ದಾಗ ದೇಶದಿಂದ ಪಲಾಯನ ಮಾಡಿದವರು ಈ ಮಣ್ಣಿಗೆ ದ್ರೋಹ ಬಗೆದಿದ್ದಾರೆ ಎಂದು ಭಾವಿಸುತ್ತೇನೆ ಎಂದು ಸಾಲೇಹ್​ ಹೇಳಿದ್ದಾಗಿ ಯುಕೆ ಪತ್ರಿಕೆ ಡೇಲಿ ಮೇಲ್​ ವರದಿ ಮಾಡಿದೆ. ಹಾಗೇ, ಕಳೆದ ತಿಂಗಳು ಒಂದೊಂದೇ ಪ್ರಾಂತ್ಯಗಳನ್ನು ವಶಪಡಿಸಿಕೊಂಡು, ಕಾಬೂಲ್​ಗೆ ಕಾಲಿಟ್ಟ ತಾಲಿಬಾನಿಗಳನ್ನು ಅಫ್ಘಾನಿಸ್ತಾನದ ಆಡಳಿತ ಎದುರಿಸುವುದು ಬಿಟ್ಟು, ಪಲಾಯನ ಮಾಡಿದ್ದನ್ನು ಕೂಡ ಅವರು ವಿವರಿಸಿದ್ದಾರೆ.

ಇದನ್ನೂ ಓದಿ: ತಾಲಿಬಾನ್ ಆಡಳಿತಕ್ಕೆ ವಿಶ್ವಸಂಸ್ಥೆ ಅಭಯ: ಅಫ್ಘಾನಿಸ್ತಾನದಲ್ಲಿ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಮಾರ್ಟಿನ್ ಗ್ರಿಫಿತ್ಸ್​-ಮುಲ್ಲಾ ಬಾರದಾರ್ ಭೇಟಿ

‘ನಾನು ತಾಲಿಬಾನಿಗಳಿಗೆ ಶರಣಾಗುವುದಿಲ್ಲ..ಅಂಥ ಪರಿಸ್ಥಿತಿ ಬಂದರೆ ನನ್ನ ತಲೆಗೆ ಎರಡು ಬಾರಿ ಗುಂಡು ಹೊಡಿ

(Panjshir in our control says Taliban but Resistance front deny and slams back)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ