AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಂತರ ಹೋರಾಟ, ಅಪಾರ ಸಾವು-ನೋವು: ಕದನ ವಿರಾಮಕ್ಕೆ ಕರೆ ನೀಡಿದ ಪಂಜಶಿರ್​ ಹೋರಾಟಗಾರರು

ಪಂಜಶಿರ್​ ವ್ಯಾಲಿಯ ಹೋರಾಟ ಮಾಡುತ್ತಿರುವ ನ್ಯಾಶನಲ್​ ರೆಸಿಸ್ಟೆನ್ಸ್​ ಫ್ರಂಟ್​ ಆಫ್​ ಅಫ್ಘಾನಿಸ್ತಾನ ಸಂಘಟನೆ ನಾಯಕ ಅಹ್ಮದ್​ ಮಸೂದ್​, ತಾವು ಶಾಂತಿ ಮಾತುಕತೆಗೆ ಸಿದ್ಧ ಎಂದು ಹೇಳಿದ್ದಾರೆ.

ನಿರಂತರ ಹೋರಾಟ, ಅಪಾರ ಸಾವು-ನೋವು: ಕದನ ವಿರಾಮಕ್ಕೆ ಕರೆ ನೀಡಿದ ಪಂಜಶಿರ್​ ಹೋರಾಟಗಾರರು
ಪಂಜಶಿರ್​ ಹೋರಾಟಗಾರರು
TV9 Web
| Edited By: |

Updated on:Sep 06, 2021 | 9:36 AM

Share

ತಾಲಿಬಾನಿಗಳಿಗೆ ಬಹುದೊಡ್ಡ ಸವಾಲಾಗಿದ್ದ ಪಂಜಶಿರ್​ ಕಣಿವೆಯಲ್ಲಿ ಹೋರಾಟ ಮುಂದುವರಿದಿದೆ. ಪಂಜಶಿರ್​ನ್ನು ತಾವು ವಶಪಡಿಸಿಕೊಂಡಿದ್ದಾಗಿ ತಾಲಿಬಾನ್​ ಪಡೆಗಳು ಹೇಳಿದ್ದರೂ, ಪಂಜಶಿರ್​ ಪ್ರತಿರೋಧಕ ಪಡೆ ಇದನ್ನು ಅಲ್ಲಗಳೆದಿದೆ. ತಾಲಿಬಾನಿಗಳು ಪಂಜಶಿರ್​ ರಸ್ತೆಯನ್ನಷ್ಟೇ ವಶಪಡಿಸಿಕೊಂಡಿದ್ದಾರೆ ಎಂದು ತಿರುಗೇಟು ನೀಡಿದೆ. ಈ ಮಧ್ಯೆ ಪಂಜಶಿರ್​ ಪ್ರತಿರೋಧಕ ಪಡೆ (National Resistance Front of Afghanistan) ಕದನ ವಿರಾಮಕ್ಕೆ ಕರೆ ನೀಡಿದೆ. ಅಫ್ಘಾನಿಸ್ತಾನದಲ್ಲಿ ಈಗ ತಾಲಿಬಾನಿಗಳ ಹೊಸ ನಿಯಮಗಳು ಜಾರಿಯಾದ ಬೆನ್ನಲ್ಲೇ ಪಂಜಶಿರ್​ ಕಣಿವೆಯಲ್ಲೂ ಹೆಚ್ಚೆಚ್ಚು ಸಂಘರ್ಷಗಳು ನಡೆಯುತ್ತಿವೆ. ಕಳೆದ ಕೆಲವು ದಿನಗಳಿಂದ ತಾಲಿಬಾನ್​ ಮತ್ತು ಪಂಜಶಿರ್​ ಹೋರಾಟ ಪಡೆಗಳ ನಡುವೆ ಸಿಕ್ಕಾಪಟೆ ಹೊಡೆದಾಟ, ಸಂಘರ್ಷಗಳು ನಡೆದ ಪರಿಣಾಮ ಎರಡೂ ಕಡೆಗಳಿಂದ ಸಾಕಷ್ಟು ಸಾವು-ನೋವು ಸಂಭವಿಸಿದೆ. ಈ ಮಧ್ಯೆ ಎನ್​​ಆರ್​ಎಫ್​​ಎ ಕದನ ವಿರಾಮಕ್ಕೆ ಕರೆ ನೀಡಿದೆ.  ತಾಲಿಬಾನ್​ ಕೂಡ ಒಪ್ಪಿಕೊಂಡು ಯುದ್ಧ ನಿಲ್ಲಿಸಿದೆ ಎಂದು ವರದಿಯಾಗಿದೆ. 

ಮಾತುಕತೆಗೆ ಸಿದ್ಧವೆಂದ ಅಹ್ಮದ್​ ಮಸೂದ್​ ಇನ್ನು ಪಂಜಶಿರ್​ ವ್ಯಾಲಿಯ ಹೋರಾಟ ಮಾಡುತ್ತಿರುವ ನ್ಯಾಶನಲ್​ ರೆಸಿಸ್ಟೆನ್ಸ್​ ಫ್ರಂಟ್​ ಆಫ್​ ಅಫ್ಘಾನಿಸ್ತಾನ ಸಂಘಟನೆ ನಾಯಕ ಅಹ್ಮದ್​ ಮಸೂದ್​, ತಾವು ಶಾಂತಿ ಮಾತುಕತೆಗೆ ಸಿದ್ಧ ಎಂದು ಹೇಳಿದ್ದಾರೆ. ಪ್ರಸ್ತುತ ಉಂಟಾಗಿರುವ ಸಮಸ್ಯೆಯನ್ನು, ದ್ವೇಷದ ಸ್ಥಿತಿಯನ್ನು ಅಂತ್ಯಗೊಳಿಸಲು ನಾವು ಒಪ್ಪುತ್ತೇವೆ. ಅದಕ್ಕೆ ತಾಲಿಬಾನ್​ ಕೂಡ ಒಪ್ಪಬೇಕು..ಮುಸ್ಲಿಂ ಧಾರ್ಮಿಕ ಗುರುಗಳ ಕರೆಗೆ ಅವರು ಸ್ಪಂದಿಸಿ, ದಾಳಿಯನ್ನು ನಿಲ್ಲಿಸಬೇಕು ಎಂದೂ ಮಸೂದ್​ ಹೇಳಿದ್ದಾರೆ.

ತಾಲಿಬಾನಿಗಳು ಪಂಜಶಿರ್​ ಮತ್ತು ಅಂದರಾಬ್​​ನಲ್ಲಿ ತಮ್ಮ ದಾಳಿ ಹಾಗೂ ಸೇನಾ ಕಾರ್ಯಾಚರಣೆಯನ್ನು ತಕ್ಷಣ ನಿಲ್ಲಿಸಬೇಕು. ಹಾಗೊಮ್ಮೆ ಮಾಡಿದರೆ ನಾವೂ ಕೂಡ ನಮ್ಮ ಹೋರಾಟವನ್ನು ಬಿಡುತ್ತೇವೆ. ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ತಾಲಿಬಾನಿಗಳು ಬರಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಗಳನ್ನು ಸೂರ್ಯ-ಜ್ಯೋತಿಕಾ ದಂಪತಿಯ ಕೈಗೆ ಒಪ್ಪಿಸಿದ ಸ್ಟಾರ್​ ನಿರ್ದೇಶಕ; ಏನಾಗಲಿದೆ ಅದಿತಿ ಶಂಕರ್​ ಭವಿಷ್ಯ?

ಐದು ರೂಪಾಯಿ ನಾಣ್ಯ ನುಂಗಿದ್ದ 4 ವರ್ಷದ ಬಾಲಕಿ ಸಾವು

Published On - 9:09 am, Mon, 6 September 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ