AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಂತರ ಹೋರಾಟ, ಅಪಾರ ಸಾವು-ನೋವು: ಕದನ ವಿರಾಮಕ್ಕೆ ಕರೆ ನೀಡಿದ ಪಂಜಶಿರ್​ ಹೋರಾಟಗಾರರು

ಪಂಜಶಿರ್​ ವ್ಯಾಲಿಯ ಹೋರಾಟ ಮಾಡುತ್ತಿರುವ ನ್ಯಾಶನಲ್​ ರೆಸಿಸ್ಟೆನ್ಸ್​ ಫ್ರಂಟ್​ ಆಫ್​ ಅಫ್ಘಾನಿಸ್ತಾನ ಸಂಘಟನೆ ನಾಯಕ ಅಹ್ಮದ್​ ಮಸೂದ್​, ತಾವು ಶಾಂತಿ ಮಾತುಕತೆಗೆ ಸಿದ್ಧ ಎಂದು ಹೇಳಿದ್ದಾರೆ.

ನಿರಂತರ ಹೋರಾಟ, ಅಪಾರ ಸಾವು-ನೋವು: ಕದನ ವಿರಾಮಕ್ಕೆ ಕರೆ ನೀಡಿದ ಪಂಜಶಿರ್​ ಹೋರಾಟಗಾರರು
ಪಂಜಶಿರ್​ ಹೋರಾಟಗಾರರು
TV9 Web
| Updated By: Lakshmi Hegde|

Updated on:Sep 06, 2021 | 9:36 AM

Share

ತಾಲಿಬಾನಿಗಳಿಗೆ ಬಹುದೊಡ್ಡ ಸವಾಲಾಗಿದ್ದ ಪಂಜಶಿರ್​ ಕಣಿವೆಯಲ್ಲಿ ಹೋರಾಟ ಮುಂದುವರಿದಿದೆ. ಪಂಜಶಿರ್​ನ್ನು ತಾವು ವಶಪಡಿಸಿಕೊಂಡಿದ್ದಾಗಿ ತಾಲಿಬಾನ್​ ಪಡೆಗಳು ಹೇಳಿದ್ದರೂ, ಪಂಜಶಿರ್​ ಪ್ರತಿರೋಧಕ ಪಡೆ ಇದನ್ನು ಅಲ್ಲಗಳೆದಿದೆ. ತಾಲಿಬಾನಿಗಳು ಪಂಜಶಿರ್​ ರಸ್ತೆಯನ್ನಷ್ಟೇ ವಶಪಡಿಸಿಕೊಂಡಿದ್ದಾರೆ ಎಂದು ತಿರುಗೇಟು ನೀಡಿದೆ. ಈ ಮಧ್ಯೆ ಪಂಜಶಿರ್​ ಪ್ರತಿರೋಧಕ ಪಡೆ (National Resistance Front of Afghanistan) ಕದನ ವಿರಾಮಕ್ಕೆ ಕರೆ ನೀಡಿದೆ. ಅಫ್ಘಾನಿಸ್ತಾನದಲ್ಲಿ ಈಗ ತಾಲಿಬಾನಿಗಳ ಹೊಸ ನಿಯಮಗಳು ಜಾರಿಯಾದ ಬೆನ್ನಲ್ಲೇ ಪಂಜಶಿರ್​ ಕಣಿವೆಯಲ್ಲೂ ಹೆಚ್ಚೆಚ್ಚು ಸಂಘರ್ಷಗಳು ನಡೆಯುತ್ತಿವೆ. ಕಳೆದ ಕೆಲವು ದಿನಗಳಿಂದ ತಾಲಿಬಾನ್​ ಮತ್ತು ಪಂಜಶಿರ್​ ಹೋರಾಟ ಪಡೆಗಳ ನಡುವೆ ಸಿಕ್ಕಾಪಟೆ ಹೊಡೆದಾಟ, ಸಂಘರ್ಷಗಳು ನಡೆದ ಪರಿಣಾಮ ಎರಡೂ ಕಡೆಗಳಿಂದ ಸಾಕಷ್ಟು ಸಾವು-ನೋವು ಸಂಭವಿಸಿದೆ. ಈ ಮಧ್ಯೆ ಎನ್​​ಆರ್​ಎಫ್​​ಎ ಕದನ ವಿರಾಮಕ್ಕೆ ಕರೆ ನೀಡಿದೆ.  ತಾಲಿಬಾನ್​ ಕೂಡ ಒಪ್ಪಿಕೊಂಡು ಯುದ್ಧ ನಿಲ್ಲಿಸಿದೆ ಎಂದು ವರದಿಯಾಗಿದೆ. 

ಮಾತುಕತೆಗೆ ಸಿದ್ಧವೆಂದ ಅಹ್ಮದ್​ ಮಸೂದ್​ ಇನ್ನು ಪಂಜಶಿರ್​ ವ್ಯಾಲಿಯ ಹೋರಾಟ ಮಾಡುತ್ತಿರುವ ನ್ಯಾಶನಲ್​ ರೆಸಿಸ್ಟೆನ್ಸ್​ ಫ್ರಂಟ್​ ಆಫ್​ ಅಫ್ಘಾನಿಸ್ತಾನ ಸಂಘಟನೆ ನಾಯಕ ಅಹ್ಮದ್​ ಮಸೂದ್​, ತಾವು ಶಾಂತಿ ಮಾತುಕತೆಗೆ ಸಿದ್ಧ ಎಂದು ಹೇಳಿದ್ದಾರೆ. ಪ್ರಸ್ತುತ ಉಂಟಾಗಿರುವ ಸಮಸ್ಯೆಯನ್ನು, ದ್ವೇಷದ ಸ್ಥಿತಿಯನ್ನು ಅಂತ್ಯಗೊಳಿಸಲು ನಾವು ಒಪ್ಪುತ್ತೇವೆ. ಅದಕ್ಕೆ ತಾಲಿಬಾನ್​ ಕೂಡ ಒಪ್ಪಬೇಕು..ಮುಸ್ಲಿಂ ಧಾರ್ಮಿಕ ಗುರುಗಳ ಕರೆಗೆ ಅವರು ಸ್ಪಂದಿಸಿ, ದಾಳಿಯನ್ನು ನಿಲ್ಲಿಸಬೇಕು ಎಂದೂ ಮಸೂದ್​ ಹೇಳಿದ್ದಾರೆ.

ತಾಲಿಬಾನಿಗಳು ಪಂಜಶಿರ್​ ಮತ್ತು ಅಂದರಾಬ್​​ನಲ್ಲಿ ತಮ್ಮ ದಾಳಿ ಹಾಗೂ ಸೇನಾ ಕಾರ್ಯಾಚರಣೆಯನ್ನು ತಕ್ಷಣ ನಿಲ್ಲಿಸಬೇಕು. ಹಾಗೊಮ್ಮೆ ಮಾಡಿದರೆ ನಾವೂ ಕೂಡ ನಮ್ಮ ಹೋರಾಟವನ್ನು ಬಿಡುತ್ತೇವೆ. ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ತಾಲಿಬಾನಿಗಳು ಬರಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಗಳನ್ನು ಸೂರ್ಯ-ಜ್ಯೋತಿಕಾ ದಂಪತಿಯ ಕೈಗೆ ಒಪ್ಪಿಸಿದ ಸ್ಟಾರ್​ ನಿರ್ದೇಶಕ; ಏನಾಗಲಿದೆ ಅದಿತಿ ಶಂಕರ್​ ಭವಿಷ್ಯ?

ಐದು ರೂಪಾಯಿ ನಾಣ್ಯ ನುಂಗಿದ್ದ 4 ವರ್ಷದ ಬಾಲಕಿ ಸಾವು

Published On - 9:09 am, Mon, 6 September 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ