AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಂತರ ಹೋರಾಟ, ಅಪಾರ ಸಾವು-ನೋವು: ಕದನ ವಿರಾಮಕ್ಕೆ ಕರೆ ನೀಡಿದ ಪಂಜಶಿರ್​ ಹೋರಾಟಗಾರರು

ಪಂಜಶಿರ್​ ವ್ಯಾಲಿಯ ಹೋರಾಟ ಮಾಡುತ್ತಿರುವ ನ್ಯಾಶನಲ್​ ರೆಸಿಸ್ಟೆನ್ಸ್​ ಫ್ರಂಟ್​ ಆಫ್​ ಅಫ್ಘಾನಿಸ್ತಾನ ಸಂಘಟನೆ ನಾಯಕ ಅಹ್ಮದ್​ ಮಸೂದ್​, ತಾವು ಶಾಂತಿ ಮಾತುಕತೆಗೆ ಸಿದ್ಧ ಎಂದು ಹೇಳಿದ್ದಾರೆ.

ನಿರಂತರ ಹೋರಾಟ, ಅಪಾರ ಸಾವು-ನೋವು: ಕದನ ವಿರಾಮಕ್ಕೆ ಕರೆ ನೀಡಿದ ಪಂಜಶಿರ್​ ಹೋರಾಟಗಾರರು
ಪಂಜಶಿರ್​ ಹೋರಾಟಗಾರರು
TV9 Web
| Edited By: |

Updated on:Sep 06, 2021 | 9:36 AM

Share

ತಾಲಿಬಾನಿಗಳಿಗೆ ಬಹುದೊಡ್ಡ ಸವಾಲಾಗಿದ್ದ ಪಂಜಶಿರ್​ ಕಣಿವೆಯಲ್ಲಿ ಹೋರಾಟ ಮುಂದುವರಿದಿದೆ. ಪಂಜಶಿರ್​ನ್ನು ತಾವು ವಶಪಡಿಸಿಕೊಂಡಿದ್ದಾಗಿ ತಾಲಿಬಾನ್​ ಪಡೆಗಳು ಹೇಳಿದ್ದರೂ, ಪಂಜಶಿರ್​ ಪ್ರತಿರೋಧಕ ಪಡೆ ಇದನ್ನು ಅಲ್ಲಗಳೆದಿದೆ. ತಾಲಿಬಾನಿಗಳು ಪಂಜಶಿರ್​ ರಸ್ತೆಯನ್ನಷ್ಟೇ ವಶಪಡಿಸಿಕೊಂಡಿದ್ದಾರೆ ಎಂದು ತಿರುಗೇಟು ನೀಡಿದೆ. ಈ ಮಧ್ಯೆ ಪಂಜಶಿರ್​ ಪ್ರತಿರೋಧಕ ಪಡೆ (National Resistance Front of Afghanistan) ಕದನ ವಿರಾಮಕ್ಕೆ ಕರೆ ನೀಡಿದೆ. ಅಫ್ಘಾನಿಸ್ತಾನದಲ್ಲಿ ಈಗ ತಾಲಿಬಾನಿಗಳ ಹೊಸ ನಿಯಮಗಳು ಜಾರಿಯಾದ ಬೆನ್ನಲ್ಲೇ ಪಂಜಶಿರ್​ ಕಣಿವೆಯಲ್ಲೂ ಹೆಚ್ಚೆಚ್ಚು ಸಂಘರ್ಷಗಳು ನಡೆಯುತ್ತಿವೆ. ಕಳೆದ ಕೆಲವು ದಿನಗಳಿಂದ ತಾಲಿಬಾನ್​ ಮತ್ತು ಪಂಜಶಿರ್​ ಹೋರಾಟ ಪಡೆಗಳ ನಡುವೆ ಸಿಕ್ಕಾಪಟೆ ಹೊಡೆದಾಟ, ಸಂಘರ್ಷಗಳು ನಡೆದ ಪರಿಣಾಮ ಎರಡೂ ಕಡೆಗಳಿಂದ ಸಾಕಷ್ಟು ಸಾವು-ನೋವು ಸಂಭವಿಸಿದೆ. ಈ ಮಧ್ಯೆ ಎನ್​​ಆರ್​ಎಫ್​​ಎ ಕದನ ವಿರಾಮಕ್ಕೆ ಕರೆ ನೀಡಿದೆ.  ತಾಲಿಬಾನ್​ ಕೂಡ ಒಪ್ಪಿಕೊಂಡು ಯುದ್ಧ ನಿಲ್ಲಿಸಿದೆ ಎಂದು ವರದಿಯಾಗಿದೆ. 

ಮಾತುಕತೆಗೆ ಸಿದ್ಧವೆಂದ ಅಹ್ಮದ್​ ಮಸೂದ್​ ಇನ್ನು ಪಂಜಶಿರ್​ ವ್ಯಾಲಿಯ ಹೋರಾಟ ಮಾಡುತ್ತಿರುವ ನ್ಯಾಶನಲ್​ ರೆಸಿಸ್ಟೆನ್ಸ್​ ಫ್ರಂಟ್​ ಆಫ್​ ಅಫ್ಘಾನಿಸ್ತಾನ ಸಂಘಟನೆ ನಾಯಕ ಅಹ್ಮದ್​ ಮಸೂದ್​, ತಾವು ಶಾಂತಿ ಮಾತುಕತೆಗೆ ಸಿದ್ಧ ಎಂದು ಹೇಳಿದ್ದಾರೆ. ಪ್ರಸ್ತುತ ಉಂಟಾಗಿರುವ ಸಮಸ್ಯೆಯನ್ನು, ದ್ವೇಷದ ಸ್ಥಿತಿಯನ್ನು ಅಂತ್ಯಗೊಳಿಸಲು ನಾವು ಒಪ್ಪುತ್ತೇವೆ. ಅದಕ್ಕೆ ತಾಲಿಬಾನ್​ ಕೂಡ ಒಪ್ಪಬೇಕು..ಮುಸ್ಲಿಂ ಧಾರ್ಮಿಕ ಗುರುಗಳ ಕರೆಗೆ ಅವರು ಸ್ಪಂದಿಸಿ, ದಾಳಿಯನ್ನು ನಿಲ್ಲಿಸಬೇಕು ಎಂದೂ ಮಸೂದ್​ ಹೇಳಿದ್ದಾರೆ.

ತಾಲಿಬಾನಿಗಳು ಪಂಜಶಿರ್​ ಮತ್ತು ಅಂದರಾಬ್​​ನಲ್ಲಿ ತಮ್ಮ ದಾಳಿ ಹಾಗೂ ಸೇನಾ ಕಾರ್ಯಾಚರಣೆಯನ್ನು ತಕ್ಷಣ ನಿಲ್ಲಿಸಬೇಕು. ಹಾಗೊಮ್ಮೆ ಮಾಡಿದರೆ ನಾವೂ ಕೂಡ ನಮ್ಮ ಹೋರಾಟವನ್ನು ಬಿಡುತ್ತೇವೆ. ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ತಾಲಿಬಾನಿಗಳು ಬರಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಗಳನ್ನು ಸೂರ್ಯ-ಜ್ಯೋತಿಕಾ ದಂಪತಿಯ ಕೈಗೆ ಒಪ್ಪಿಸಿದ ಸ್ಟಾರ್​ ನಿರ್ದೇಶಕ; ಏನಾಗಲಿದೆ ಅದಿತಿ ಶಂಕರ್​ ಭವಿಷ್ಯ?

ಐದು ರೂಪಾಯಿ ನಾಣ್ಯ ನುಂಗಿದ್ದ 4 ವರ್ಷದ ಬಾಲಕಿ ಸಾವು

Published On - 9:09 am, Mon, 6 September 21

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’