AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನ್​​ನಲ್ಲಿ ತಾಲಿಬಾನಿಗಳನ್ನು ಗುರಿಯಾಗಿಸಿ ಬಾಂಬ್​ ದಾಳಿ; ಮೂವರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಕಾಬೂಲ್​ನಿಂದ ಸುಮಾರು 80 ಮೈಲುಗಳಷ್ಟು ದೂರ ಇರುವ ಜಲಾಲಾಬಾದ್​ ಅಫ್ಘಾನಿಸ್ತಾನದಲ್ಲಿ 5ನೇ ದೊಡ್ಡ ನಗರ. ಆಗಸ್ಟ್​ 15ರಂದು ಅಫ್ಘಾನ್​​ನ್ನು ತಾಲಿಬಾನ್​ ವಶಪಡಿಸಿಕೊಂಡ ನಂತರ ಇಡೀ ಜಗತ್ತಿನ ಗಮನವೀಗ ಆ ದೇಶದ ಮೇಲೆ ಇದೆ.

ಅಫ್ಘಾನ್​​ನಲ್ಲಿ ತಾಲಿಬಾನಿಗಳನ್ನು ಗುರಿಯಾಗಿಸಿ ಬಾಂಬ್​ ದಾಳಿ; ಮೂವರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ
ಬಾಂಬ್​ ಸ್ಫೋಟವಾದ ಸ್ಥಳದ ಚಿತ್ರ
TV9 Web
| Edited By: |

Updated on: Sep 19, 2021 | 4:09 PM

Share

ಕಾಬೂಲ್​: ಅಫ್ಘಾನಿಸ್ತಾನದಲ್ಲಿ ಹಿಂಸಾಚಾರ ನಿಲ್ಲುವಂತೆ ಕಾಣುತ್ತಿಲ್ಲ. ಶನಿವಾರ ಸಂಜೆ ಹೊತ್ತಿಗೆ ಅಫ್ಘಾನಿಸ್ತಾನದ ಜಲಾಲಾಬಾದ್ (Jalalabad)​​ನಲ್ಲಿ ಸರಣಿ ಸ್ಫೋಟವಾಗಿದ್ದು ಮೂವರು ಮೃತಪಟ್ಟಿದ್ದಾರೆ. ಸುಮಾರು 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ನಂಗರ್​ಹಾರ್​ ಪ್ರಾಂತ್ಯದ ಜಲಾಲಾಬಾದ್​​ನಲ್ಲಿ ತಾಲಿಬಾನಿಗಳ ವಾಹನಗಳನ್ನು ಗುರಿಯಾಗಿಸಿಕೊಂಡು ಬಾಂಬ್​ ದಾಳಿ ನಡೆಸಲಾಗಿತ್ತು. ರಸ್ತೆ ಬದಿಯಲ್ಲಿ ಈ ಸ್ಫೋಟವಾಗಿದೆ. 

ಸ್ಫೋಟದಲ್ಲಿ ಸತ್ತ ಮೂವರಲ್ಲಿ ಇಬ್ಬರು ತಾಲಿಬಾನ್​ ಅಧಿಕಾರಿಗಳಾಗಿದ್ದಾರೆ.  ಇದರಲ್ಲಿ ಗಾಯಗೊಂಡವರಲ್ಲಿ ಅನೇಕರು ಸಾಮಾನ್ಯ ಜನರೇ ಆಗಿದ್ದಾರೆ. ಜಲಾಲಾಬಾದ್​​ನಲ್ಲಿ ನಡೆದ ಈ ಬಾಂಬ್​ ಸ್ಫೋಟ ಪಕ್ಕಾ ತಾಲಿಬಾನಿಗಳನ್ನು ಗುರಿಯಾಗಿಸಿಕೊಂಡೇ ನಡೆದದ್ದು ಎಂಬುದು ಸ್ಪಷ್ಟವಾಗಿದೆ.  ಆದರೆ ಈ ದಾಳಿಯ ಹೊಣೆಯನ್ನು ಯಾರೂ ಹೊತ್ತುಕೊಂಡಿಲ್ಲ.

ಕಾಬೂಲ್​ನಿಂದ ಸುಮಾರು 80 ಮೈಲುಗಳಷ್ಟು ದೂರ ಇರುವ ಜಲಾಲಾಬಾದ್​ ಅಫ್ಘಾನಿಸ್ತಾನದಲ್ಲಿ 5ನೇ ದೊಡ್ಡ ನಗರ. ಆಗಸ್ಟ್​ 15ರಂದು ಅಫ್ಘಾನ್​​ನ್ನು ತಾಲಿಬಾನ್​ ವಶಪಡಿಸಿಕೊಂಡ ನಂತರ ಇಡೀ ಜಗತ್ತಿನ ಗಮನವೀಗ ಆ ದೇಶದ ಮೇಲೆ ಇದೆ. ತಾಲಿಬಾನಿಗಳಿಗೆ ಅಫ್ಘಾನಿಸ್ತಾನದಲ್ಲೇ ವಿರೋಧಿಗಳು ಇದ್ದಾರೆ. ಅಫ್ಘಾನ್​ ಪ್ರತಿರೋಧಕ ಪಡೆ ತಾಲಿಬಾನಿಗಳ ವಿರುದ್ಧ ಸಮರ ಸಾರಿದೆ. ಹಾಗೇ, ಅಮೆರಿಕ ಸೇನೆಯೂ ಸಹ ಒಂದು ಕಣ್ಣಿಟ್ಟಿದೆ. ಯುಎಸ್​ ಸೇನೆ ನಾಗರಿಕರ ಸ್ಥಳಾಂತರ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದಾಗ ಕಾಬೂಲ್​ ಬಳಿ ಐಸಿಸ್​ ಕೆ ದಾಳಿ ನಡೆಸಿತ್ತು ಇದರಲ್ಲಿ ಯುಎಸ್​ನ ಸುಮಾರು 10 ಯೋಧರು ಮೃತಪಟ್ಟಿದ್ದಾರೆ. ಅದಕ್ಕೆ ಪ್ರತಿಯಾಗಿ ಯುಎಸ್​ ನಡೆಸಿದ್ದ ಡ್ರೋನ್​ ದಾಳಿಯಲ್ಲಿ ಮಕ್ಕಳೂ ಸೇರಿ ಮುಗ್ಧ ನಾಗರಿಕರು ಸಾವನ್ನಪ್ಪಿದ್ದರು. ಈ ಮಧ್ಯೆ ತಾಲಿಬಾನಿಗಳಲ್ಲೇ ಎರಡು ಬಣಗಳಾಗಿದ್ದು, ಆಂತರಿಕ ಕಲಹವೂ ಈ ಬಾಂಬ್​ ಸ್ಫೋಟಕ್ಕೆ ಕಾರಣವಾಗಿರಬಹುದು ಎಂದೂ ಹೇಳಲಾಗಿದೆ.

ಇದನ್ನೂ ಓದಿ: ಅಪಘಾತದ ಸುದ್ದಿ ಕೇಳಿ ಬೇಸರವಾಗಿದ್ದ ಸಾಯಿ ಧರಮ್​ತೇಜ್ ಅಭಿಮಾನಿಗಳಿಗೆ ಸಂತಸದ ಸುದ್ದಿ ಇಲ್ಲಿದೆ

ಬುರ್ಖಾಧಾರಿ ಮಹಿಳೆ ಜತೆ ಪ್ರಯಾಣಿಸುತ್ತಿದ್ದ ಬೈಕ್ ಸವಾರನ ಮೇಲೆ ಹಲ್ಲೆ: ಇಬ್ಬರ ಬಂಧನ; ಕಠಿಣ ಕ್ರಮದ ಭರವಸೆ ನೀಡಿದ ಸಿಎಂ 

(Series of Bomb explosions in Jalalabad Of Afghanistan)

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ