AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜ್​ಶಿರ್​ ಹೋರಾಟಕ್ಕೆ ತಜಕಿಸ್ತಾನ್ ಬೆಂಬಲ: ಮತ್ತೊಂದು ಮಜಲಿಗೆ ಅಫ್ಘಾನಿಸ್ತಾನ ಯುದ್ಧ

ಅಫ್ಘಾನಿಸ್ತಾನದೊಂದಿಗೆ ಗಡಿ ಹಂಚಿಕೊಂಡಿರುವ ತಜಕಿಸ್ತಾನದಿಂದಲೂ ಪಂಜ್​ಶಿರ್ ಪ್ರಾಂತ್ಯಕ್ಕೆ ಯುದ್ಧೋಪಕರಣಗಳು ಸೇರಿದಂತೆ ಅಗತ್ಯ ಸಾಮಗ್ರಿಗಳು ಪೂರೈಕೆಯಾಗುತ್ತಿವೆ.

ಪಂಜ್​ಶಿರ್​ ಹೋರಾಟಕ್ಕೆ ತಜಕಿಸ್ತಾನ್ ಬೆಂಬಲ: ಮತ್ತೊಂದು ಮಜಲಿಗೆ ಅಫ್ಘಾನಿಸ್ತಾನ ಯುದ್ಧ
ತಾಲಿಬಾನ್​ ವಿರೋಧಿ ಹೋರಾಟಕ್ಕೆಂದು ತಜಕಿಸ್ತಾನದಿಂದ ಬಂದಿರುವ ಅಫ್ಘಾನಿಸ್ತಾನ್ ಯೋಧರು
TV9 Web
| Edited By: |

Updated on:Aug 23, 2021 | 9:51 PM

Share

ಕಾಬೂಲ್: ಅಫ್ಘಾನಿಸ್ತಾನದ ಈಶಾನ್ಯಕ್ಕಿರುವ ಪಂಜ್​ಶಿರ್ ಪ್ರಾಂತ್ಯದಲ್ಲಿ ತಾಲಿಬಾನ್​ಗೆ ಮಸೂದ್ ನೇತೃತ್ವದ ನಾರ್ದರ್ನ್ ಅಲಯನ್ಸ್​ ಪಡೆಗಳಿಂದ ಪ್ರಬಲ ಪ್ರತಿರೋಧ ವ್ಯಕ್ತವಾಗಿದೆ. ಅಫ್ಘಾನಿಸ್ತಾನದಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಸರ್ಕಾರಿ ಪಡೆಗಳು ಇದೀಗ ಪಂಜ್​ಶಿರ್​ನಲ್ಲಿ ಒಗ್ಗೂಡಿದ್ದು, ತಾಲಿಬಾನ್​ನೊಂದಿಗೆ ಪ್ರಬಲ ಹೋರಾಟ ನಡೆಸಲು ಸಜ್ಜಾಗಿವೆ. ಅಫ್ಘಾನಿಸ್ತಾನದೊಂದಿಗೆ ಗಡಿ ಹಂಚಿಕೊಂಡಿರುವ ತಜಕಿಸ್ತಾನದಿಂದಲೂ ಪಂಜ್​ಶಿರ್ ಪ್ರಾಂತ್ಯಕ್ಕೆ ಯುದ್ಧೋಪಕರಣಗಳು ಸೇರಿದಂತೆ ಅಗತ್ಯ ಸಾಮಗ್ರಿಗಳು ಪೂರೈಕೆಯಾಗುತ್ತಿವೆ.

ತಾಲಿಬಾನ್ ದಾಳಿಯ ವೇಳೆ ಅಫ್ಘಾನಿಸ್ತಾನದಿಂದ ತಜಕಿಸ್ತಾನಕ್ಕೆ ಪರಾರಿಯಾಗಿದ್ದ ಅಫ್ಘಾನಿಸ್ತಾನದ ಯೋಧರು 3 ಹೆಲಿಕಾಪ್ಟರ್‌ಗಳಲ್ಲಿ ಪಂಜ್​ಶಿರ್​ ಪ್ರದೇಶಕ್ಕೆ ಬಂದಿದ್ದಾರೆ. ತಾಲಿಬಾನಿಗಳಿಗೆ ಸೆಡ್ಡು ಹೊಡೆದು ನಿಂತಿರುವ ಪಂಜ್​ಶಿರ್ ಪ್ರಾಂತ್ಯದ ಶಕ್ತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ತಾಲಿಬಾನ್​ ಭಾನುವಾರ ರಾತ್ರಿ ಸಂಘಟಿಸಿದ್ದ ದಾಳಿಯನ್ನು ವಿಫಲಗೊಳಿಸಿದ್ದ ನಾರ್ದರ್ನ್ ಅಲಯನ್ಸ್​ ಹಲವು ವಿಡಿಯೊ ಮತ್ತು ಛಾಯಾಚಿತ್ರಗಳನ್ನು ಟ್ವೀಟ್ ಮಾಡಿದೆ. ಬೆನೊ ಜಿಲ್ಲೆಯ ತಾಲಿಬಾನ್ ಗವರ್ನರ್ ಮತ್ತು ಅವರ ಮೂವರು ಅಂಗರಕ್ಷಕರು ಸಂಘರ್ಷದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಿದೆ.

ತಾಲಿಬಾನ್ ಹೋರಾಟಗಾರರೊಂದಿಗೆ ಪಾಕಿಸ್ತಾನದ ಸೇನೆ ಮತ್ತು ನಾಗರಿಕರು ಇದ್ದಾರೆ ಎಂಬ ಆರೋಪಕ್ಕೆ ಪುಷ್ಟಿ ನೀಡುವ ಪುರಾವೆಗಳನ್ನೂ ನಾರ್ದರ್ನ್ ಅಲಯನ್ಸ್​ ಟ್ವೀಟ್ ಮಾಡಿದೆ. ‘ಪ್ರಿಯ ಪಾಕಿಸ್ತಾನೀಯರೇ ನಮ್ಮ ದೇಶಕ್ಕೆ ಬಂದರೆ ನಿಮ್ಮನ್ನು ನರಕಕ್ಕೆ ಕಳಿಸುತ್ತೇವೆ’ ಎಂದು ಅಫ್ಘಾನಿಸ್ತಾನದ ವಿದ್ಯಮಾನಗಳಲ್ಲಿ ಪದೇಪದೆ ಮೂಗು ತೂರಿಸುವ ಪಾಕಿಸ್ತಾನವನ್ನು ಎಚ್ಚರಿಸಿದೆ.

(Tajikistan support Northern Alliance in their fight against Taliban)

ಇದನ್ನೂ ಓದಿ: ತಾಲಿಬಾನ್​ಗೆ ಪಂಜ್​ಶಿರ್ ಪ್ರಾಂತ್ಯದ ಸವಾಲು: ಫಲಿತಾಂಶದ ಬಗ್ಗೆ ವಿಶ್ವ ಸಮುದಾಯದಲ್ಲಿ ಕುತೂಹಲ

ಇದನ್ನೂ ಓದಿ: ಮತ್ತೊಂದು ರಕ್ತಸಿಕ್ತ ಅಧ್ಯಾಯ: ತಾಲಿಬಾನ್ ವಿರೋಧಿಗಳ ಹಿಡಿತದಲ್ಲಿರುವ ಪಂಜ್​ಶಿರ್​ ಕಣಿವೆಯತ್ತ ಧಾವಿಸಿದ ಉಗ್ರರು

Published On - 9:45 pm, Mon, 23 August 21

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ