AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಿಧ ಇಲಾಖೆಗಳಿಗೆ ಹಂಗಾಮಿ ಸಚಿವರನ್ನು ನೇಮಿಸಿದ ತಾಲಿಬಾನ್; ನೂತನ ಸಚಿವರ ಪಟ್ಟಿ ಹೀಗಿದೆ ನೋಡಿ

ವಿವಿಧ ಇಲಾಖೆಗಳಿಗೆ ತಾಲಿಬಾನ್​ ತಾನೇ ಖುದ್ದಾಗಿ ಹಂಗಾಮಿ ಮುಖ್ಯಸ್ಥರನ್ನು ನೇಮಿಸಿದೆ. ಜನರ ಹಣಕಾಸು ಸಮಸ್ಯೆ ಪರಿಹರಿಸಲು, ಬ್ಯಾಂಕ್, ಎಟಿಎಂಗಳ ಬಳಿ ಹಣ ಪಡೆಯಲು ಜನರ ಉದ್ದನೆಯ ಸರತಿ ಸಾಲು ತಪ್ಪಿಸಲು ಸೂಚನೆ ನೀಡಿರುವ ತಾಲಿಬಾನಿಗಳು ಆದಷ್ಟು ಬೇಗ ವ್ಯವಸ್ಥೆಯನ್ನು ಸರಿಪಡಿಸಬೇಕೆಂದು ಹರಸಾಹಸಪಡುತ್ತಿದ್ದಾರೆ.

ವಿವಿಧ ಇಲಾಖೆಗಳಿಗೆ ಹಂಗಾಮಿ ಸಚಿವರನ್ನು ನೇಮಿಸಿದ ತಾಲಿಬಾನ್; ನೂತನ ಸಚಿವರ ಪಟ್ಟಿ ಹೀಗಿದೆ ನೋಡಿ
ವಿವಿಧ ಇಲಾಖೆಗಳಿಗೆ ಸಚಿವರನ್ನು ನೇಮಿಸಿದ ತಾಲಿಬಾನ್
TV9 Web
| Updated By: Skanda|

Updated on: Aug 25, 2021 | 7:32 AM

Share

ತಾಲಿಬಾನ್​ ಉಗ್ರರ ಬಂದೂಕಿನ ಭಯದಲ್ಲಿ ನಲುಗುತ್ತಿರುವ ಅಫ್ಘಾನಿಸ್ತಾನದಲ್ಲಿ ಜನಜೀವನ ದುರ್ಬರವಾಗಿದೆ. ಎಟಿಎಂಗಳಲ್ಲಿ ಹಣ ಇಲ್ಲದೇ, ಅಗತ್ಯ ಸಾಮಾಗ್ರಿಗಳು ದೊರೆಯದೇ ಜನರ ಪರದಾಟಡುತ್ತಿದ್ದಾರೆ. ತಾನೇ ತಂದೊಡ್ಡಿದ ಈ ಸಮಸ್ಯೆಗಳ ಪರಿಹಾರಕ್ಕಾಗಿ ಮುಂದಾಗಿರುವ ತಾಲಿಬಾನ್​ ಇದೀಗ ವಿವಿಧ ಇಲಾಖೆಗಳಿಗೆ ಹಂಗಾಮಿ ಸಚಿವರನ್ನು ನೇಮಿಸಿದೆ. ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಒಳಾಡಳಿತ, ಹಣಕಾಸು, ಇಂಟಲಿಜೆನ್ಸ್ ಇಲಾಖೆ ಹೀಗೆ ವಿವಿಧ ಇಲಾಖೆಗಳಿಗೆ ಸಚಿವರನ್ನು ನೇಮಿಸಲಾಗಿದ್ದು, ಕೈ ಮೀರುತ್ತಿರುವ ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿದೆ.

ಅಫ್ಘಾನಿಸ್ತಾನದಲ್ಲಿ ಈಗಾಗಲೇ ಅಡುಗೆ ಎಣ್ಣೆ, ಆಹಾರ ಧಾನ್ಯಗಳ ಬೆಲೆ ಶೇ.35 ರಷ್ಟು ಏರಿಕೆಯಾಗಿದ್ದು ಜನ ಕಂಗಾಲಾಗಿದ್ದಾರೆ. ಬ್ಯಾಂಕಿಂಗ್ ಸಮಸ್ಯೆ, ಹಣದ ಸಮಸ್ಯೆ ತಲೆದೋರಿದ್ದು ಎಟಿಎಂಗಳ ಮುಂದೆ ಉದ್ದನೆಯ ಸರತಿ ಸಾಮಾನ್ಯವಾಗಿದೆ. ಒಂದೆಡೆ ತಾಲಿಬಾನಿಗಳ ಭಯ, ಇನ್ನೊಂದೆಡೆ ಅಗತ್ಯ ಸಾಮಾಗ್ರಿಗಳು ಸಿಗದೇ ಪರದಾಟವಾಗಿ ಜನರು ಅಕ್ಷರಶಃ ಯಾತನೆ ಅನುಭವಿಸುತ್ತಿದ್ದಾರೆ.

ಈ ಸಮಸ್ಯೆಗಳನ್ನು ಪರಿಹರಿಸದಿದ್ದರೆ ತನಗೇ ಮುಳುವಾಗಬಹುದೆಂದು ಯೋಚಿಸಿರುವ ತಾಲಿಬಾನ್​ ಹಂಗಾಮಿ ಮುಖ್ಯಸ್ಥರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ತಾಲಿಬಾನ್​ ವಿವಿಧ ಇಲಾಖೆಗಳಿಗೆ ನೇಮಿಸಿರುವ ಹಂಗಾಮಿ ಸಚಿವರ ಪಟ್ಟಿ ಈ ಕೆಳಗಿನಂತಿದೆ:

ಸಖಾವುಲ್ಲಾ  – ಶಿಕ್ಷಣ ಇಲಾಖೆ ಮುಖ್ಯಸ್ಥ ಅಬ್ದುಲ್ ಬಾಕಿ – ಉನ್ನತ ಶಿಕ್ಷಣ ಇಲಾಖೆ ಸಚಿವ ಸದರ್ ಇಬ್ರಾಹಿಂ – ಒಳಾಡಳಿತ ಸಚಿವ ಗುಲ್ ಆಗಾ – ಹಣಕಾಸು ಮಂತ್ರಿ ಮುಲ್ಲಾ ಶಿರಿನ್ – ಕಾಬೂಲ್ ಗರ್ವನರ್ ಅಹಮದುಲ್ಲಾ ನೋಮನಿ – ಕಾಬೂಲ್ ಮೇಯರ್ ನಜೀಬುಲ್ಲಾ – ಗುಪ್ತಚರ ಇಲಾಖೆ ಮುಖ್ಯಸ್ಥ ಹಾಜಿ ಮೊಹಮ್ಮದ್ ಇದರೀಸ್ – ದ ಅಫ್ಘಾನಿಸ್ತಾನ ಬ್ಯಾಂಕ್ ಮುಖ್ಯಸ್ಥ

ಹೀಗೆ ವಿವಿಧ ಇಲಾಖೆಗಳಿಗೆ ತಾಲಿಬಾನ್​ ತಾನೇ ಖುದ್ದಾಗಿ ಹಂಗಾಮಿ ಮುಖ್ಯಸ್ಥರನ್ನು ನೇಮಿಸಿದೆ. ಜನರ ಹಣಕಾಸು ಸಮಸ್ಯೆ ಪರಿಹರಿಸಲು, ಬ್ಯಾಂಕ್, ಎಟಿಎಂಗಳ ಬಳಿ ಹಣ ಪಡೆಯಲು ಜನರ ಉದ್ದನೆಯ ಸರತಿ ಸಾಲು ತಪ್ಪಿಸಲು ಸೂಚನೆ ನೀಡಿರುವ ತಾಲಿಬಾನಿಗಳು ಆದಷ್ಟು ಬೇಗ ವ್ಯವಸ್ಥೆಯನ್ನು ಸರಿಪಡಿಸಬೇಕೆಂದು ಹರಸಾಹಸಪಡುತ್ತಿದ್ದಾರೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ನೇಲ್ ಪಾಲಿಶ್ ಹಚ್ಚಿದರೆ ಅಫ್ಘಾನಿಸ್ತಾನದ ಮಹಿಳೆಯರ ಬೆರಳೇ ಕಟ್!; ತಾಲಿಬಾನ್ ಹೊಸ ನಿಯಮ 

ಅಫ್ಘಾನಿಸ್ತಾನದಲ್ಲಿ ಹಂಗಾಮಿ ಸರ್ಕಾರ ರಚಿಸಿದ ತಾಲಿಬಾನ್: ಆಹಾರ ಧಾನ್ಯದ ಬೆಲೆ ಏರಿಕೆ

(Taliban appoints temporary ministers for various departments to control the situation in Afghanistan)

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ