AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂದಹಾರ್​​ನ ರೇಡಿಯೋ, ಟಿವಿಗಳಲ್ಲಿ ಮಹಿಳೆಯರ ಧ್ವನಿ ಕೇಳುವಂತಿಲ್ಲ; ತಾಲಿಬಾನಿಗಳ ಆದೇಶ

ಆಗಸ್ಟ್​ 15ರಂದು ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಕೆಲವು ಸುದ್ದಿ ವಾಹಿನಿಗಳು ತಮ್ಮಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ನಿರೂಪಕರನ್ನು ಕೆಲಸದಿಂದ ತೆಗೆದಿದ್ದವು.

ಕಂದಹಾರ್​​ನ ರೇಡಿಯೋ, ಟಿವಿಗಳಲ್ಲಿ ಮಹಿಳೆಯರ ಧ್ವನಿ ಕೇಳುವಂತಿಲ್ಲ; ತಾಲಿಬಾನಿಗಳ ಆದೇಶ
ಅಫ್ಘಾನಿಸ್ತಾನದ ಮಹಿಳೆಯರು
TV9 Web
| Edited By: |

Updated on:Aug 29, 2021 | 4:41 PM

Share

ನಾವು ಮಹಿಳೆಯರಿಗೆ ತೊಂದರೆ ಕೊಡುವುದಿಲ್ಲ. ಅವರ ಹಕ್ಕುಗಳನ್ನು ಗೌರವಿಸುತ್ತೇವೆ ಎಂದು ಹೇಳಿದ್ದ ತಾಲಿಬಾನಿಗಳು (Taliban Terrorists) ನಿಧಾನವಾಗಿ ಮಹಿಳೆಯರ ಮೇಲಿನ ಕಟ್ಟುಪಾಡು ಹೆಚ್ಚಿಸುತ್ತಿದ್ದಾರೆ. ಇದೀಗ ಅಫ್ಘಾನಿಸ್ತಾನದ ಕಂದಹಾರ್ (Kandahar)​​ನ ರೇಡಿಯೋ ಮತ್ತು ಟಿವಿ ಚಾನಲ್​ಗಳಲ್ಲಿ ಮಹಿಳೆಯರ ಧ್ವನಿ, ಸಂಗೀತ ಕಾರ್ಯಕ್ರಮವನ್ನು ತಾಲಿಬಾನ್ ಉಗ್ರರು ನಿಷೇಧಿಸಿದ್ದಾರೆ.

ಆಗಸ್ಟ್​ 15ರಂದು ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಕೆಲವು ಸುದ್ದಿ ವಾಹಿನಿಗಳು ತಮ್ಮಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ನಿರೂಪಕರನ್ನು ಕೆಲಸದಿಂದ ತೆಗೆದಿದ್ದವು. ತಾಲಿಬಾನಿಗಳ ಕ್ರೂರ ಕಾನೂನಿಗೆ ಹೆದರಿ ಈ ನಿರ್ಧಾರ ಕೈಗೊಂಡಿದ್ದವು. ಈ ಮಧ್ಯೆ ತಾಲಿಬಾನ್ ಉಗ್ರರು, ಮಹಿಳೆಯರನ್ನೂ ಕೆಲಸಕ್ಕೆ ಕರೆಯುತ್ತಿದ್ದಾರೆ. ಇಸ್ಲಾಮಿಕ್ ಕಾನೂನಿನಡಿ ಮಹಿಳೆಯರ ಶಿಕ್ಷಣ ಮತ್ತು ಉದ್ಯೋಗಕ್ಕೆ ಅವಕಾಶ ನೀಡುವುದಾಗಿ ತಾಲಿಬಾನಿಗಳು ಭರವಸೆ ಕೊಟ್ಟಿದ್ದಾರೆ ಎಂದೂ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದೀಗ ತಾಲಿಬಾನ್​ ಉಲ್ಟಾ ಹೊಡೆದಿದೆ. ಹುಡುಗಿಯರು-ಹುಡುಗರು ಒಟ್ಟಾಗಿ ಶಿಕ್ಷಣವನ್ನೂ ಕಲಿಯುವಂತಿಲ್ಲ ಎಂದೂ ಹೇಳಿದೆ.

ಅದೆಲ್ಲದರ ಹೊರತಾಗಿಯೂ ಅಫ್ಘಾನಿಸ್ತಾನದಲ್ಲಿ ಮಹಿಳೆಯರು ಕಷ್ಟಪಡುತ್ತಿರುವ ಬಗ್ಗೆ ದಿನನಿತ್ಯವೂ ವರದಿಯಾಗುತ್ತಿದೆ. ಈ ಹಿಂದೆ 20 ವರ್ಷಗಳ ಹಿಂದೆ ತಾಲಿಬಾನ್​ ಆಡಳಿತ ಇದ್ದಾಗಲೂ ಸಹ ಮಹಿಳೆಯರು ಸಿಕ್ಕಾಪಟೆ ಕಷ್ಟ ಅನುಭವಿಸಿದ್ದಾರೆ. ತಾಲಿಬಾನಿಗಳ ಶರಿಯಾ ಕಾನೂನಿನ ಅನ್ವಯ ಮಹಿಳೆಯರು ಮುಖ ಮುಚ್ಚಿಕೊಳ್ಳದೆ, ಜತೆಯಲ್ಲಿ ರಕ್ತ ಸಂಬಂಧಿ ಪುರುಷ ಅಥವಾ ಪತಿ ಇಲ್ಲದೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಂತಿರಲಿಲ್ಲ.

ಇದನ್ನೂ ಓದಿ: Yakshagana: ಬರೆದದ್ದರಲ್ಲಿ ಏನೂ ಇಲ್ಲ ಅನಿಸಿದರೆ ಒಂದು ವಿಡಿಯೋ ಹಾಕಿದ್ದೇನೆ; ಅದನ್ನು ನೋಡಿ ನಕ್ಕುಬಿಡಿ

‘ಭಾರತ್​ ಸರಣಿ’ಯಲ್ಲಿ ವಾಹನ ನೋಂದಣಿ; ಕೇಂದ್ರ ಸರ್ಕಾರ ಪರಿಚಯಿಸಿದ ನೂತನ ಪದ್ಧತಿಯ ಸಮಗ್ರ ವಿವರ ಇಲ್ಲಿದೆ

Published On - 4:39 pm, Sun, 29 August 21

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?