AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂದಹಾರ್​​ನ ರೇಡಿಯೋ, ಟಿವಿಗಳಲ್ಲಿ ಮಹಿಳೆಯರ ಧ್ವನಿ ಕೇಳುವಂತಿಲ್ಲ; ತಾಲಿಬಾನಿಗಳ ಆದೇಶ

ಆಗಸ್ಟ್​ 15ರಂದು ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಕೆಲವು ಸುದ್ದಿ ವಾಹಿನಿಗಳು ತಮ್ಮಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ನಿರೂಪಕರನ್ನು ಕೆಲಸದಿಂದ ತೆಗೆದಿದ್ದವು.

ಕಂದಹಾರ್​​ನ ರೇಡಿಯೋ, ಟಿವಿಗಳಲ್ಲಿ ಮಹಿಳೆಯರ ಧ್ವನಿ ಕೇಳುವಂತಿಲ್ಲ; ತಾಲಿಬಾನಿಗಳ ಆದೇಶ
ಅಫ್ಘಾನಿಸ್ತಾನದ ಮಹಿಳೆಯರು
Follow us
TV9 Web
| Updated By: Lakshmi Hegde

Updated on:Aug 29, 2021 | 4:41 PM

ನಾವು ಮಹಿಳೆಯರಿಗೆ ತೊಂದರೆ ಕೊಡುವುದಿಲ್ಲ. ಅವರ ಹಕ್ಕುಗಳನ್ನು ಗೌರವಿಸುತ್ತೇವೆ ಎಂದು ಹೇಳಿದ್ದ ತಾಲಿಬಾನಿಗಳು (Taliban Terrorists) ನಿಧಾನವಾಗಿ ಮಹಿಳೆಯರ ಮೇಲಿನ ಕಟ್ಟುಪಾಡು ಹೆಚ್ಚಿಸುತ್ತಿದ್ದಾರೆ. ಇದೀಗ ಅಫ್ಘಾನಿಸ್ತಾನದ ಕಂದಹಾರ್ (Kandahar)​​ನ ರೇಡಿಯೋ ಮತ್ತು ಟಿವಿ ಚಾನಲ್​ಗಳಲ್ಲಿ ಮಹಿಳೆಯರ ಧ್ವನಿ, ಸಂಗೀತ ಕಾರ್ಯಕ್ರಮವನ್ನು ತಾಲಿಬಾನ್ ಉಗ್ರರು ನಿಷೇಧಿಸಿದ್ದಾರೆ.

ಆಗಸ್ಟ್​ 15ರಂದು ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಕೆಲವು ಸುದ್ದಿ ವಾಹಿನಿಗಳು ತಮ್ಮಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ನಿರೂಪಕರನ್ನು ಕೆಲಸದಿಂದ ತೆಗೆದಿದ್ದವು. ತಾಲಿಬಾನಿಗಳ ಕ್ರೂರ ಕಾನೂನಿಗೆ ಹೆದರಿ ಈ ನಿರ್ಧಾರ ಕೈಗೊಂಡಿದ್ದವು. ಈ ಮಧ್ಯೆ ತಾಲಿಬಾನ್ ಉಗ್ರರು, ಮಹಿಳೆಯರನ್ನೂ ಕೆಲಸಕ್ಕೆ ಕರೆಯುತ್ತಿದ್ದಾರೆ. ಇಸ್ಲಾಮಿಕ್ ಕಾನೂನಿನಡಿ ಮಹಿಳೆಯರ ಶಿಕ್ಷಣ ಮತ್ತು ಉದ್ಯೋಗಕ್ಕೆ ಅವಕಾಶ ನೀಡುವುದಾಗಿ ತಾಲಿಬಾನಿಗಳು ಭರವಸೆ ಕೊಟ್ಟಿದ್ದಾರೆ ಎಂದೂ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದೀಗ ತಾಲಿಬಾನ್​ ಉಲ್ಟಾ ಹೊಡೆದಿದೆ. ಹುಡುಗಿಯರು-ಹುಡುಗರು ಒಟ್ಟಾಗಿ ಶಿಕ್ಷಣವನ್ನೂ ಕಲಿಯುವಂತಿಲ್ಲ ಎಂದೂ ಹೇಳಿದೆ.

ಅದೆಲ್ಲದರ ಹೊರತಾಗಿಯೂ ಅಫ್ಘಾನಿಸ್ತಾನದಲ್ಲಿ ಮಹಿಳೆಯರು ಕಷ್ಟಪಡುತ್ತಿರುವ ಬಗ್ಗೆ ದಿನನಿತ್ಯವೂ ವರದಿಯಾಗುತ್ತಿದೆ. ಈ ಹಿಂದೆ 20 ವರ್ಷಗಳ ಹಿಂದೆ ತಾಲಿಬಾನ್​ ಆಡಳಿತ ಇದ್ದಾಗಲೂ ಸಹ ಮಹಿಳೆಯರು ಸಿಕ್ಕಾಪಟೆ ಕಷ್ಟ ಅನುಭವಿಸಿದ್ದಾರೆ. ತಾಲಿಬಾನಿಗಳ ಶರಿಯಾ ಕಾನೂನಿನ ಅನ್ವಯ ಮಹಿಳೆಯರು ಮುಖ ಮುಚ್ಚಿಕೊಳ್ಳದೆ, ಜತೆಯಲ್ಲಿ ರಕ್ತ ಸಂಬಂಧಿ ಪುರುಷ ಅಥವಾ ಪತಿ ಇಲ್ಲದೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಂತಿರಲಿಲ್ಲ.

ಇದನ್ನೂ ಓದಿ: Yakshagana: ಬರೆದದ್ದರಲ್ಲಿ ಏನೂ ಇಲ್ಲ ಅನಿಸಿದರೆ ಒಂದು ವಿಡಿಯೋ ಹಾಕಿದ್ದೇನೆ; ಅದನ್ನು ನೋಡಿ ನಕ್ಕುಬಿಡಿ

‘ಭಾರತ್​ ಸರಣಿ’ಯಲ್ಲಿ ವಾಹನ ನೋಂದಣಿ; ಕೇಂದ್ರ ಸರ್ಕಾರ ಪರಿಚಯಿಸಿದ ನೂತನ ಪದ್ಧತಿಯ ಸಮಗ್ರ ವಿವರ ಇಲ್ಲಿದೆ

Published On - 4:39 pm, Sun, 29 August 21

ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ