AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂದಹಾರ್​​ನ ರೇಡಿಯೋ, ಟಿವಿಗಳಲ್ಲಿ ಮಹಿಳೆಯರ ಧ್ವನಿ ಕೇಳುವಂತಿಲ್ಲ; ತಾಲಿಬಾನಿಗಳ ಆದೇಶ

ಆಗಸ್ಟ್​ 15ರಂದು ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಕೆಲವು ಸುದ್ದಿ ವಾಹಿನಿಗಳು ತಮ್ಮಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ನಿರೂಪಕರನ್ನು ಕೆಲಸದಿಂದ ತೆಗೆದಿದ್ದವು.

ಕಂದಹಾರ್​​ನ ರೇಡಿಯೋ, ಟಿವಿಗಳಲ್ಲಿ ಮಹಿಳೆಯರ ಧ್ವನಿ ಕೇಳುವಂತಿಲ್ಲ; ತಾಲಿಬಾನಿಗಳ ಆದೇಶ
ಅಫ್ಘಾನಿಸ್ತಾನದ ಮಹಿಳೆಯರು
TV9 Web
| Updated By: Lakshmi Hegde|

Updated on:Aug 29, 2021 | 4:41 PM

Share

ನಾವು ಮಹಿಳೆಯರಿಗೆ ತೊಂದರೆ ಕೊಡುವುದಿಲ್ಲ. ಅವರ ಹಕ್ಕುಗಳನ್ನು ಗೌರವಿಸುತ್ತೇವೆ ಎಂದು ಹೇಳಿದ್ದ ತಾಲಿಬಾನಿಗಳು (Taliban Terrorists) ನಿಧಾನವಾಗಿ ಮಹಿಳೆಯರ ಮೇಲಿನ ಕಟ್ಟುಪಾಡು ಹೆಚ್ಚಿಸುತ್ತಿದ್ದಾರೆ. ಇದೀಗ ಅಫ್ಘಾನಿಸ್ತಾನದ ಕಂದಹಾರ್ (Kandahar)​​ನ ರೇಡಿಯೋ ಮತ್ತು ಟಿವಿ ಚಾನಲ್​ಗಳಲ್ಲಿ ಮಹಿಳೆಯರ ಧ್ವನಿ, ಸಂಗೀತ ಕಾರ್ಯಕ್ರಮವನ್ನು ತಾಲಿಬಾನ್ ಉಗ್ರರು ನಿಷೇಧಿಸಿದ್ದಾರೆ.

ಆಗಸ್ಟ್​ 15ರಂದು ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಕೆಲವು ಸುದ್ದಿ ವಾಹಿನಿಗಳು ತಮ್ಮಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ನಿರೂಪಕರನ್ನು ಕೆಲಸದಿಂದ ತೆಗೆದಿದ್ದವು. ತಾಲಿಬಾನಿಗಳ ಕ್ರೂರ ಕಾನೂನಿಗೆ ಹೆದರಿ ಈ ನಿರ್ಧಾರ ಕೈಗೊಂಡಿದ್ದವು. ಈ ಮಧ್ಯೆ ತಾಲಿಬಾನ್ ಉಗ್ರರು, ಮಹಿಳೆಯರನ್ನೂ ಕೆಲಸಕ್ಕೆ ಕರೆಯುತ್ತಿದ್ದಾರೆ. ಇಸ್ಲಾಮಿಕ್ ಕಾನೂನಿನಡಿ ಮಹಿಳೆಯರ ಶಿಕ್ಷಣ ಮತ್ತು ಉದ್ಯೋಗಕ್ಕೆ ಅವಕಾಶ ನೀಡುವುದಾಗಿ ತಾಲಿಬಾನಿಗಳು ಭರವಸೆ ಕೊಟ್ಟಿದ್ದಾರೆ ಎಂದೂ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದೀಗ ತಾಲಿಬಾನ್​ ಉಲ್ಟಾ ಹೊಡೆದಿದೆ. ಹುಡುಗಿಯರು-ಹುಡುಗರು ಒಟ್ಟಾಗಿ ಶಿಕ್ಷಣವನ್ನೂ ಕಲಿಯುವಂತಿಲ್ಲ ಎಂದೂ ಹೇಳಿದೆ.

ಅದೆಲ್ಲದರ ಹೊರತಾಗಿಯೂ ಅಫ್ಘಾನಿಸ್ತಾನದಲ್ಲಿ ಮಹಿಳೆಯರು ಕಷ್ಟಪಡುತ್ತಿರುವ ಬಗ್ಗೆ ದಿನನಿತ್ಯವೂ ವರದಿಯಾಗುತ್ತಿದೆ. ಈ ಹಿಂದೆ 20 ವರ್ಷಗಳ ಹಿಂದೆ ತಾಲಿಬಾನ್​ ಆಡಳಿತ ಇದ್ದಾಗಲೂ ಸಹ ಮಹಿಳೆಯರು ಸಿಕ್ಕಾಪಟೆ ಕಷ್ಟ ಅನುಭವಿಸಿದ್ದಾರೆ. ತಾಲಿಬಾನಿಗಳ ಶರಿಯಾ ಕಾನೂನಿನ ಅನ್ವಯ ಮಹಿಳೆಯರು ಮುಖ ಮುಚ್ಚಿಕೊಳ್ಳದೆ, ಜತೆಯಲ್ಲಿ ರಕ್ತ ಸಂಬಂಧಿ ಪುರುಷ ಅಥವಾ ಪತಿ ಇಲ್ಲದೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಂತಿರಲಿಲ್ಲ.

ಇದನ್ನೂ ಓದಿ: Yakshagana: ಬರೆದದ್ದರಲ್ಲಿ ಏನೂ ಇಲ್ಲ ಅನಿಸಿದರೆ ಒಂದು ವಿಡಿಯೋ ಹಾಕಿದ್ದೇನೆ; ಅದನ್ನು ನೋಡಿ ನಕ್ಕುಬಿಡಿ

‘ಭಾರತ್​ ಸರಣಿ’ಯಲ್ಲಿ ವಾಹನ ನೋಂದಣಿ; ಕೇಂದ್ರ ಸರ್ಕಾರ ಪರಿಚಯಿಸಿದ ನೂತನ ಪದ್ಧತಿಯ ಸಮಗ್ರ ವಿವರ ಇಲ್ಲಿದೆ

Published On - 4:39 pm, Sun, 29 August 21

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು