AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದ ಪಂಜ್​ಶಿರ್ ಪ್ರಾಂತ್ಯಕ್ಕೆ ತಾಲಿಬಾನ್ ಮುತ್ತಿಗೆ: ಆಹಾರ, ಇಂಧನ ಸ್ಥಗಿತ

ತಾಲಿಬಾನಿಗಳು ದೊಡ್ಡ ಸಂಖ್ಯೆಯನ್ನು ಹೋರಾಟಗಾರರನ್ನು ಪಂಜ್​ಶಿರ್​ ಕಣಿವೆಗೆ ನಿಯೋಜಿಸಿದ್ದು, ಇಡೀ ಪ್ರಾಂತ್ಯಕ್ಕೆ ದಿಗ್ಬಂಧನ ವಿಧಿಸಿದೆ.

ಅಫ್ಘಾನಿಸ್ತಾನದ ಪಂಜ್​ಶಿರ್ ಪ್ರಾಂತ್ಯಕ್ಕೆ ತಾಲಿಬಾನ್ ಮುತ್ತಿಗೆ: ಆಹಾರ, ಇಂಧನ ಸ್ಥಗಿತ
ಪಂಜ್​ಶಿರ್ ಪ್ರಾಂತ್ಯದಲ್ಲಿ ಕಾವಲು ಕಾಯುತ್ತಿರುವ ಪ್ರತಿರೋಧ ಪಡೆಯ ಹೋರಾಟಗಾರರು
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Aug 25, 2021 | 4:09 PM

Share

ಕಾಬೂಲ್: ತಾಲಿಬಾನ್ ಆಡಳಿತಕ್ಕೆ ಪ್ರಬಲ ಪ್ರತಿರೋಧ ತೋರಿರುವ ಅಫ್ಘಾನಿಸ್ತಾನದ ಪಂಜ್​ಶಿರ್ ಪ್ರಾಂತ್ಯದಲ್ಲಿ ನಾರ್ದರ್ನ್​ ಅಲಯನ್ಸ್​ ಮತ್ತು ಅಫ್ಘಾನ್ ರಾಷ್ಟ್ರೀಯ ಸೇನೆ ಯುದ್ಧ ಸಿದ್ಧತೆ ತೀವ್ರಗೊಳಿಸಿದೆ. ಮತ್ತೊಂದು ಬೆಳವಣಿಗೆಯಲ್ಲಿ ತಾಲಿಬಾನಿಗಳು ದೊಡ್ಡ ಸಂಖ್ಯೆಯನ್ನು ಹೋರಾಟಗಾರರನ್ನು ಪಂಜ್​ಶಿರ್​ ಕಣಿವೆಗೆ ನಿಯೋಜಿಸಿದ್ದು, ಇಡೀ ಪ್ರಾಂತ್ಯಕ್ಕೆ ದಿಗ್ಬಂಧನ ವಿಧಿಸಿದೆ.

ಪ್ರಾಂತ್ಯದೊಳಗೆ ಪ್ರವೇಶಿಸಲು ಕೆಲ ಪತ್ರಕರ್ತರಿಗೆ ಅವಕಾಶ ಸಿಕ್ಕಿದೆ. ಅವರು ತಿಳಿಸಿರುವ ಮಾಹಿತಿ ಪ್ರಕಾರ ಪ್ರತಿರೋಧ ತೋರಲು ಅಲ್ಲಿ ದೊಡ್ಡಮಟ್ಟದ ಸಿದ್ಧತೆಯೇ ನಡೆಯುತ್ತಿದೆ. ಹೆವಿ ಮಿಷಿನ್​ ಗನ್​ಗಳನ್ನು ಆಯಕಟ್ಟಿನ ಜಾಗಗಳಲ್ಲಿ ಸ್ಥಾಪಿಸಲಾಗಿದೆ. ಸಶಸ್ತ್ರ ವಾಹನಗಳಲ್ಲಿ ಪ್ರತಿರೋಧ ಪಡೆಯ ಹೋರಾಟಗಾರರು ಗಸ್ತು ತಿರುಗುತ್ತಿದ್ದಾರೆ.

ಅಂದರಬ್​ ಕಣಿವೆಯನ್ನು ಇತರ ಪ್ರಾಂತ್ಯಗಳಿಂದ ತಾಲಿಬಾನ್ ಬೇರ್ಪಡಿಸಿದ್ದು, ವೃದ್ಧರು ಮತ್ತು ಮಕ್ಕಳನ್ನು ಜೀವಂತ ಕವಚವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಪ್ರತಿರೋಧ ಪಡೆಗಳ ನಾಯಕ ಅಮರುಲ್ಲಾ ಸಲೇಹ್ ಹೇಳಿದ್ದಾರೆ.

ಆಸ್ಟ್ರೇಲಿಯಾ ನಾಗರಿಕನ ಮೇಲೆ ಹಲ್ಲೆ ತಾಲಿಬಾನಿಗಳ ಮಾತು ಮತ್ತು ಕೃತಿಯಲ್ಲಿ ವ್ಯತ್ಯಾಸಗಳು ವರದಿಯಾಗುತ್ತಲೇ ಇವೆ. ಕಾಬೂಲ್​ನಲ್ಲಿ ತಾಲಿಬಾನಿಗಳು ಆಸ್ಟ್ರೇಲಿಯಾದ ನಾಗರಿಕನ ಮೇಲೆ ಮುಖದಲ್ಲಿ ರಕ್ತ ಬರುವಂತೆ ಹಲ್ಲೆ ನಡೆಸಿದ್ದಾರೆ.

ಅಫ್ಘಾನಿಸ್ತಾನದಲ್ಲಿರುವ ಬ್ರಿಟಿಷ್ ನಾಗರಿಕರ ಏರ್‌ಲಿಫ್ಟ್ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದೆ ಎಂದು ಬ್ರಿಟನ್​ನ ವಿದೇಶಾಂಗ ಸಚಿವ ರಾಬ್ ಮಾಹಿತಿ ನೀಡಿದ್ದಾರೆ. ಫ್ರೆಂಚ್ ನಾಗರಿಕರ ಏರ್‌ಲಿಫ್ಟ್ ನಾಳೆ ಬಹುತೇಕ ಅಂತ್ಯಗೊಳ್ಳಲಿದೆ ಎಂದು ಫ್ರಾನ್ಸ್​ ಸರ್ಕಾರ ಹೇಳಿದೆ.

(Taliban Blocks Panjshir Province leaders of the Resistance group preparing for full-fledged struggle)

ಇದನ್ನೂ ಓದಿ: Ahmad Massoud: ಪಂಜ್​ಶಿರ್​ ಕಣಿವೆಯಲ್ಲಿ ತಾಲಿಬಾನ್ ವಿರೋಧಿ ಹೋರಾಟ ಮುಂದುವರಿಸುತ್ತಿರುವ ಅಹ್ಮದ್ ಮಸೂದ್ ಯಾರು?

ಇದನ್ನೂ ಓದಿ: ಪಂಜ್​ಶಿರ್​ ಹೋರಾಟಕ್ಕೆ ತಜಕಿಸ್ತಾನ್ ಬೆಂಬಲ: ಮತ್ತೊಂದು ಮಜಲಿಗೆ ಅಫ್ಘಾನಿಸ್ತಾನ ಯುದ್ಧ

Published On - 4:06 pm, Wed, 25 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ