AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದ ಪಂಜ್​ಶಿರ್ ಪ್ರಾಂತ್ಯಕ್ಕೆ ತಾಲಿಬಾನ್ ಮುತ್ತಿಗೆ: ಆಹಾರ, ಇಂಧನ ಸ್ಥಗಿತ

ತಾಲಿಬಾನಿಗಳು ದೊಡ್ಡ ಸಂಖ್ಯೆಯನ್ನು ಹೋರಾಟಗಾರರನ್ನು ಪಂಜ್​ಶಿರ್​ ಕಣಿವೆಗೆ ನಿಯೋಜಿಸಿದ್ದು, ಇಡೀ ಪ್ರಾಂತ್ಯಕ್ಕೆ ದಿಗ್ಬಂಧನ ವಿಧಿಸಿದೆ.

ಅಫ್ಘಾನಿಸ್ತಾನದ ಪಂಜ್​ಶಿರ್ ಪ್ರಾಂತ್ಯಕ್ಕೆ ತಾಲಿಬಾನ್ ಮುತ್ತಿಗೆ: ಆಹಾರ, ಇಂಧನ ಸ್ಥಗಿತ
ಪಂಜ್​ಶಿರ್ ಪ್ರಾಂತ್ಯದಲ್ಲಿ ಕಾವಲು ಕಾಯುತ್ತಿರುವ ಪ್ರತಿರೋಧ ಪಡೆಯ ಹೋರಾಟಗಾರರು
TV9 Web
| Edited By: |

Updated on:Aug 25, 2021 | 4:09 PM

Share

ಕಾಬೂಲ್: ತಾಲಿಬಾನ್ ಆಡಳಿತಕ್ಕೆ ಪ್ರಬಲ ಪ್ರತಿರೋಧ ತೋರಿರುವ ಅಫ್ಘಾನಿಸ್ತಾನದ ಪಂಜ್​ಶಿರ್ ಪ್ರಾಂತ್ಯದಲ್ಲಿ ನಾರ್ದರ್ನ್​ ಅಲಯನ್ಸ್​ ಮತ್ತು ಅಫ್ಘಾನ್ ರಾಷ್ಟ್ರೀಯ ಸೇನೆ ಯುದ್ಧ ಸಿದ್ಧತೆ ತೀವ್ರಗೊಳಿಸಿದೆ. ಮತ್ತೊಂದು ಬೆಳವಣಿಗೆಯಲ್ಲಿ ತಾಲಿಬಾನಿಗಳು ದೊಡ್ಡ ಸಂಖ್ಯೆಯನ್ನು ಹೋರಾಟಗಾರರನ್ನು ಪಂಜ್​ಶಿರ್​ ಕಣಿವೆಗೆ ನಿಯೋಜಿಸಿದ್ದು, ಇಡೀ ಪ್ರಾಂತ್ಯಕ್ಕೆ ದಿಗ್ಬಂಧನ ವಿಧಿಸಿದೆ.

ಪ್ರಾಂತ್ಯದೊಳಗೆ ಪ್ರವೇಶಿಸಲು ಕೆಲ ಪತ್ರಕರ್ತರಿಗೆ ಅವಕಾಶ ಸಿಕ್ಕಿದೆ. ಅವರು ತಿಳಿಸಿರುವ ಮಾಹಿತಿ ಪ್ರಕಾರ ಪ್ರತಿರೋಧ ತೋರಲು ಅಲ್ಲಿ ದೊಡ್ಡಮಟ್ಟದ ಸಿದ್ಧತೆಯೇ ನಡೆಯುತ್ತಿದೆ. ಹೆವಿ ಮಿಷಿನ್​ ಗನ್​ಗಳನ್ನು ಆಯಕಟ್ಟಿನ ಜಾಗಗಳಲ್ಲಿ ಸ್ಥಾಪಿಸಲಾಗಿದೆ. ಸಶಸ್ತ್ರ ವಾಹನಗಳಲ್ಲಿ ಪ್ರತಿರೋಧ ಪಡೆಯ ಹೋರಾಟಗಾರರು ಗಸ್ತು ತಿರುಗುತ್ತಿದ್ದಾರೆ.

ಅಂದರಬ್​ ಕಣಿವೆಯನ್ನು ಇತರ ಪ್ರಾಂತ್ಯಗಳಿಂದ ತಾಲಿಬಾನ್ ಬೇರ್ಪಡಿಸಿದ್ದು, ವೃದ್ಧರು ಮತ್ತು ಮಕ್ಕಳನ್ನು ಜೀವಂತ ಕವಚವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಪ್ರತಿರೋಧ ಪಡೆಗಳ ನಾಯಕ ಅಮರುಲ್ಲಾ ಸಲೇಹ್ ಹೇಳಿದ್ದಾರೆ.

ಆಸ್ಟ್ರೇಲಿಯಾ ನಾಗರಿಕನ ಮೇಲೆ ಹಲ್ಲೆ ತಾಲಿಬಾನಿಗಳ ಮಾತು ಮತ್ತು ಕೃತಿಯಲ್ಲಿ ವ್ಯತ್ಯಾಸಗಳು ವರದಿಯಾಗುತ್ತಲೇ ಇವೆ. ಕಾಬೂಲ್​ನಲ್ಲಿ ತಾಲಿಬಾನಿಗಳು ಆಸ್ಟ್ರೇಲಿಯಾದ ನಾಗರಿಕನ ಮೇಲೆ ಮುಖದಲ್ಲಿ ರಕ್ತ ಬರುವಂತೆ ಹಲ್ಲೆ ನಡೆಸಿದ್ದಾರೆ.

ಅಫ್ಘಾನಿಸ್ತಾನದಲ್ಲಿರುವ ಬ್ರಿಟಿಷ್ ನಾಗರಿಕರ ಏರ್‌ಲಿಫ್ಟ್ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದೆ ಎಂದು ಬ್ರಿಟನ್​ನ ವಿದೇಶಾಂಗ ಸಚಿವ ರಾಬ್ ಮಾಹಿತಿ ನೀಡಿದ್ದಾರೆ. ಫ್ರೆಂಚ್ ನಾಗರಿಕರ ಏರ್‌ಲಿಫ್ಟ್ ನಾಳೆ ಬಹುತೇಕ ಅಂತ್ಯಗೊಳ್ಳಲಿದೆ ಎಂದು ಫ್ರಾನ್ಸ್​ ಸರ್ಕಾರ ಹೇಳಿದೆ.

(Taliban Blocks Panjshir Province leaders of the Resistance group preparing for full-fledged struggle)

ಇದನ್ನೂ ಓದಿ: Ahmad Massoud: ಪಂಜ್​ಶಿರ್​ ಕಣಿವೆಯಲ್ಲಿ ತಾಲಿಬಾನ್ ವಿರೋಧಿ ಹೋರಾಟ ಮುಂದುವರಿಸುತ್ತಿರುವ ಅಹ್ಮದ್ ಮಸೂದ್ ಯಾರು?

ಇದನ್ನೂ ಓದಿ: ಪಂಜ್​ಶಿರ್​ ಹೋರಾಟಕ್ಕೆ ತಜಕಿಸ್ತಾನ್ ಬೆಂಬಲ: ಮತ್ತೊಂದು ಮಜಲಿಗೆ ಅಫ್ಘಾನಿಸ್ತಾನ ಯುದ್ಧ

Published On - 4:06 pm, Wed, 25 August 21

ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​