AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕದನ ವಿರಾಮಕ್ಕೆ ಒಪ್ಪದ ತಾಲಿಬಾನಿಗಳು; ಪಂಜಶಿರ್​ ಗವರ್ನರ್​ ಕಚೇರಿ ಮೇಲೆ ಧ್ವಜಾರೋಹಣ

ತಾಲಿಬಾನ್​ ಅದಾಗಲೇ ತಾವು ಪಂಜಶಿರ್ ಪ್ರಾಂತ್ಯವನ್ನು ಸಂಪೂರ್ಣವಾಗಿ ವಶಕ್ಕೆ ಪಡಿಸಿಕೊಂಡಿದ್ದೇವೆ ಎಂದು ಪ್ರತಿಪಾದಿಸಿದೆ. ಆದರೆ ಸ್ಥಳೀಯ ಹೋರಾಟಗಾರರು ಇದನ್ನು ಸುತಾರಾಂ ಒಪ್ಪುತ್ತಿಲ್ಲ.

ಕದನ ವಿರಾಮಕ್ಕೆ ಒಪ್ಪದ ತಾಲಿಬಾನಿಗಳು; ಪಂಜಶಿರ್​ ಗವರ್ನರ್​ ಕಚೇರಿ ಮೇಲೆ ಧ್ವಜಾರೋಹಣ
ಪಂಜಶಿರ್​ ಗವರ್ನರ್​ ಕಚೇರಿ ಮೇಲೆ ತಾಲಿಬಾನಿಗಳ ಧ್ವಜ
TV9 Web
| Edited By: |

Updated on: Sep 06, 2021 | 11:56 AM

Share

ಪಂಜಶಿರ್​ (Panjshir) ಪ್ರಾಂತ್ಯದ ಹೋರಾಟಗಾರರ ನ್ಯಾಶನಲ್​ ರೆಸಿಸ್ಟೆನ್ಸ್​ ಫ್ರಂಟ್​ ಆಫ್​ ಅಫ್ಘಾನಿಸ್ತಾನ (National Resistance Front Of Afghanistan)ಪಡೆ ನೀಡಿದ್ದ ಕದನ ವಿರಾಮ (Ceasefire) ಕರೆಯನ್ನು ತಾಲಿಬಾನ್​ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಹೋರಾಟ ನಿಲ್ಲಿಸುವುದಿಲ್ಲ ಮತ್ತು ನಮ್ಮ ಸೈನ್ಯವನ್ನು ಪಂಜಶಿರ್​ ಕಣಿವೆಯಿಂದ ವಾಪಸ್​ ಪಡೆಯುವುದಿಲ್ಲ ಎಂದು ತಾಲಿಬಾನಿ (Taliban Terrorists)ಗಳು ಹೇಳಿದ್ದಾರೆ. ಪಂಜಶಿರ್​ ಉಳಿಸಿಕೊಳ್ಳುವ ಹೋರಾಟದಲ್ಲಿ ಎನ್​ಆರ್​ಎಫ್​ ಪಡೆ ನಿನ್ನೆ ರಾತ್ರಿ ವಕ್ತಾರ ಫಾಹಿಮ್​ ದಷ್ಟಿ ಸೇರಿ ಮೂವರು ಪ್ರಮುಖ ನಾಯಕರನ್ನು ಕಳೆದುಕೊಂಡಿದೆ. ಅದರ ಬೆನ್ನಲ್ಲೇ ಸಂಘಟನೆ ಮುಖ್ಯಸ್ಥ ಅಹ್ಮದ್ ಮಸೂದ್​ ಕದನ ವಿರಾಮಕ್ಕೆ ಕರೆ ನೀಡಿದ್ದರು. ಶಾಂತಿಯುತ ಮಾತುಕತೆಗೆ ನಾವು ಸಿದ್ಧರಿದ್ದೇವೆ, ತಾಲಿಬಾನ್​ ತನ್ನ ಸೈನಿಕರನ್ನು ಹಿಂಪಡೆದರೆ ನಾವೂ ಸುಮ್ಮನಾಗುತ್ತೇವೆ ಎಂದು ಹೇಳಿದ್ದರು. ಆದರೆ ಅಹ್ಮದ್ ಮಸೂದ್​ ಮನವಿಯನ್ನು ತಾಲಿಬಾನಿಗಳು ಸಾರಾಸಗಾಟವಾಗಿ ತಿರಸ್ಕರಿಸಿದ್ದಾರೆ.

ನಾವು ನಮ್ಮ ಕಡೆಯಿಂದ ಶಾಂತಿ ಮಾತುಕತೆಗೆ ಮುಂದಾದಾಗ ಅಹ್ಮದ್​ ಮಸೂದ್​ ಅದನ್ನು ಒಪ್ಪದೆ, ಹೋರಾಟ ಮುಂದುವರಿಸಿದ್ದರು. ಈಗ ನಾವ್ಯಾಕೆ ಅವರ ಕದನ ವಿರಾಮ ಮನವಿ ಒಪ್ಪಬೇಕು. ನಮಗೆ ಅಹ್ಮದ್​ ಜತೆ ಮಾತನಾಡಲು ಏನೂ ಇಲ್ಲ ಎಂದು ತಾಲಿಬಾನಿಗಳು ಸ್ಪಷ್ಟಪಡಿಸಿದ್ದಾಗಿ ಅಲ್​ ಜಜೀರಾ ಮಾಧ್ಯಮ ವರದಿ ಮಾಡಿದೆ.

ಧ್ವಜ ಹಾರಿಸಿದ ತಾಲಿಬಾನಿಗಳು ತಾಲಿಬಾನ್​ ಅದಾಗಲೇ ತಾವು ಪಂಜಶಿರ್ ಪ್ರಾಂತ್ಯವನ್ನು ಸಂಪೂರ್ಣವಾಗಿ ವಶಕ್ಕೆ ಪಡಿಸಿಕೊಂಡಿದ್ದೇವೆ ಎಂದು ಪ್ರತಿಪಾದಿಸಿದೆ. ಇನ್ನು ಯುದ್ಧ ಮಾಡುವುದೇನೂ ಇಲ್ಲ. ಪಂಜಶಿರ್​ ನಮ್ಮ ನಿಯಂತ್ರಣಕ್ಕೆ ಬಂದಿದೆ ಎಂದು ಹೇಳಿದ್ದಲ್ಲದೆ, ಪಂಜಶಿರ್ ಪ್ರಾಂತ್ಯದ ಗವರ್ನರ್ ಕಚೇರಿ ಮೇಲೆ ತಾಲಿಬಾನ್​ ಧ್ವಜ ಹಾರಿಸಿದ್ದಾಗಿ ಸ್ಥಳೀಯ ಅಸ್ವಾಕಾ ನ್ಯೂಸ್​ ವರದಿ ಮಾಡಿದೆ.  ಆದರೆ ತಾಲಿಬಾನಿಗಳ ಹೇಳಿಕೆಯನ್ನು ಸ್ಥಳೀಯ ಹೋರಾಟ ಪಡೆಗಳು ಅಲ್ಲಗಳೆದಿದ್ದವು. ಹಂಗಾಮಿ ಅಧ್ಯಕ್ಷ ಅಮರುಲ್ಲಾ ಸಾಲೇಹ್​ ಆಪ್ತವಲಯದ ಪ್ರತಿನಿಧಿಯೊಬ್ಬರು ಮಾತನಾಡಿ, ಪಂಜಶಿರ್​ ನಮ್ಮ ವಶದಲ್ಲೇ ಇದೆ. ಇಲ್ಲಿನ ಗುಡ್ಡಗಾಡುಗಳೆಲ್ಲ ನಮ್ಮ ಜನರೇ ಇದ್ದಾರೆ. ಆದರೆ ತಾಲಿಬಾನ್​ ಪಾಕಿಸ್ತಾನದ ಡ್ರೋನ್​ ನೆರವಿನಿಂದ ಬಾಂಬ್​ ದಾಳಿ ನಡೆಸುತ್ತಿದೆ ಎಂದು ಹೇಳಿದ್ದರು.

ಇದನ್ನೂ ಓದಿ: Bhabanipur bypoll ಭವಾನಿಪುರ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧೆ; ಅಭ್ಯರ್ಥಿ ಆಯ್ಕೆಗೆ ಬಿಜೆಪಿ ಸಭೆ ನಾಳೆ

ಯೋಗಿ ಆದಿತ್ಯನಾಥ್​​ ವಿರುದ್ಧ ಮಾತನಾಡಿದ್ದ ಮಾಜಿ ರಾಜ್ಯಪಾಲ ಅಜೀಜ್​ ಖುರೇಷಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ