AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕದನ ವಿರಾಮಕ್ಕೆ ಒಪ್ಪದ ತಾಲಿಬಾನಿಗಳು; ಪಂಜಶಿರ್​ ಗವರ್ನರ್​ ಕಚೇರಿ ಮೇಲೆ ಧ್ವಜಾರೋಹಣ

ತಾಲಿಬಾನ್​ ಅದಾಗಲೇ ತಾವು ಪಂಜಶಿರ್ ಪ್ರಾಂತ್ಯವನ್ನು ಸಂಪೂರ್ಣವಾಗಿ ವಶಕ್ಕೆ ಪಡಿಸಿಕೊಂಡಿದ್ದೇವೆ ಎಂದು ಪ್ರತಿಪಾದಿಸಿದೆ. ಆದರೆ ಸ್ಥಳೀಯ ಹೋರಾಟಗಾರರು ಇದನ್ನು ಸುತಾರಾಂ ಒಪ್ಪುತ್ತಿಲ್ಲ.

ಕದನ ವಿರಾಮಕ್ಕೆ ಒಪ್ಪದ ತಾಲಿಬಾನಿಗಳು; ಪಂಜಶಿರ್​ ಗವರ್ನರ್​ ಕಚೇರಿ ಮೇಲೆ ಧ್ವಜಾರೋಹಣ
ಪಂಜಶಿರ್​ ಗವರ್ನರ್​ ಕಚೇರಿ ಮೇಲೆ ತಾಲಿಬಾನಿಗಳ ಧ್ವಜ
TV9 Web
| Edited By: |

Updated on: Sep 06, 2021 | 11:56 AM

Share

ಪಂಜಶಿರ್​ (Panjshir) ಪ್ರಾಂತ್ಯದ ಹೋರಾಟಗಾರರ ನ್ಯಾಶನಲ್​ ರೆಸಿಸ್ಟೆನ್ಸ್​ ಫ್ರಂಟ್​ ಆಫ್​ ಅಫ್ಘಾನಿಸ್ತಾನ (National Resistance Front Of Afghanistan)ಪಡೆ ನೀಡಿದ್ದ ಕದನ ವಿರಾಮ (Ceasefire) ಕರೆಯನ್ನು ತಾಲಿಬಾನ್​ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಹೋರಾಟ ನಿಲ್ಲಿಸುವುದಿಲ್ಲ ಮತ್ತು ನಮ್ಮ ಸೈನ್ಯವನ್ನು ಪಂಜಶಿರ್​ ಕಣಿವೆಯಿಂದ ವಾಪಸ್​ ಪಡೆಯುವುದಿಲ್ಲ ಎಂದು ತಾಲಿಬಾನಿ (Taliban Terrorists)ಗಳು ಹೇಳಿದ್ದಾರೆ. ಪಂಜಶಿರ್​ ಉಳಿಸಿಕೊಳ್ಳುವ ಹೋರಾಟದಲ್ಲಿ ಎನ್​ಆರ್​ಎಫ್​ ಪಡೆ ನಿನ್ನೆ ರಾತ್ರಿ ವಕ್ತಾರ ಫಾಹಿಮ್​ ದಷ್ಟಿ ಸೇರಿ ಮೂವರು ಪ್ರಮುಖ ನಾಯಕರನ್ನು ಕಳೆದುಕೊಂಡಿದೆ. ಅದರ ಬೆನ್ನಲ್ಲೇ ಸಂಘಟನೆ ಮುಖ್ಯಸ್ಥ ಅಹ್ಮದ್ ಮಸೂದ್​ ಕದನ ವಿರಾಮಕ್ಕೆ ಕರೆ ನೀಡಿದ್ದರು. ಶಾಂತಿಯುತ ಮಾತುಕತೆಗೆ ನಾವು ಸಿದ್ಧರಿದ್ದೇವೆ, ತಾಲಿಬಾನ್​ ತನ್ನ ಸೈನಿಕರನ್ನು ಹಿಂಪಡೆದರೆ ನಾವೂ ಸುಮ್ಮನಾಗುತ್ತೇವೆ ಎಂದು ಹೇಳಿದ್ದರು. ಆದರೆ ಅಹ್ಮದ್ ಮಸೂದ್​ ಮನವಿಯನ್ನು ತಾಲಿಬಾನಿಗಳು ಸಾರಾಸಗಾಟವಾಗಿ ತಿರಸ್ಕರಿಸಿದ್ದಾರೆ.

ನಾವು ನಮ್ಮ ಕಡೆಯಿಂದ ಶಾಂತಿ ಮಾತುಕತೆಗೆ ಮುಂದಾದಾಗ ಅಹ್ಮದ್​ ಮಸೂದ್​ ಅದನ್ನು ಒಪ್ಪದೆ, ಹೋರಾಟ ಮುಂದುವರಿಸಿದ್ದರು. ಈಗ ನಾವ್ಯಾಕೆ ಅವರ ಕದನ ವಿರಾಮ ಮನವಿ ಒಪ್ಪಬೇಕು. ನಮಗೆ ಅಹ್ಮದ್​ ಜತೆ ಮಾತನಾಡಲು ಏನೂ ಇಲ್ಲ ಎಂದು ತಾಲಿಬಾನಿಗಳು ಸ್ಪಷ್ಟಪಡಿಸಿದ್ದಾಗಿ ಅಲ್​ ಜಜೀರಾ ಮಾಧ್ಯಮ ವರದಿ ಮಾಡಿದೆ.

ಧ್ವಜ ಹಾರಿಸಿದ ತಾಲಿಬಾನಿಗಳು ತಾಲಿಬಾನ್​ ಅದಾಗಲೇ ತಾವು ಪಂಜಶಿರ್ ಪ್ರಾಂತ್ಯವನ್ನು ಸಂಪೂರ್ಣವಾಗಿ ವಶಕ್ಕೆ ಪಡಿಸಿಕೊಂಡಿದ್ದೇವೆ ಎಂದು ಪ್ರತಿಪಾದಿಸಿದೆ. ಇನ್ನು ಯುದ್ಧ ಮಾಡುವುದೇನೂ ಇಲ್ಲ. ಪಂಜಶಿರ್​ ನಮ್ಮ ನಿಯಂತ್ರಣಕ್ಕೆ ಬಂದಿದೆ ಎಂದು ಹೇಳಿದ್ದಲ್ಲದೆ, ಪಂಜಶಿರ್ ಪ್ರಾಂತ್ಯದ ಗವರ್ನರ್ ಕಚೇರಿ ಮೇಲೆ ತಾಲಿಬಾನ್​ ಧ್ವಜ ಹಾರಿಸಿದ್ದಾಗಿ ಸ್ಥಳೀಯ ಅಸ್ವಾಕಾ ನ್ಯೂಸ್​ ವರದಿ ಮಾಡಿದೆ.  ಆದರೆ ತಾಲಿಬಾನಿಗಳ ಹೇಳಿಕೆಯನ್ನು ಸ್ಥಳೀಯ ಹೋರಾಟ ಪಡೆಗಳು ಅಲ್ಲಗಳೆದಿದ್ದವು. ಹಂಗಾಮಿ ಅಧ್ಯಕ್ಷ ಅಮರುಲ್ಲಾ ಸಾಲೇಹ್​ ಆಪ್ತವಲಯದ ಪ್ರತಿನಿಧಿಯೊಬ್ಬರು ಮಾತನಾಡಿ, ಪಂಜಶಿರ್​ ನಮ್ಮ ವಶದಲ್ಲೇ ಇದೆ. ಇಲ್ಲಿನ ಗುಡ್ಡಗಾಡುಗಳೆಲ್ಲ ನಮ್ಮ ಜನರೇ ಇದ್ದಾರೆ. ಆದರೆ ತಾಲಿಬಾನ್​ ಪಾಕಿಸ್ತಾನದ ಡ್ರೋನ್​ ನೆರವಿನಿಂದ ಬಾಂಬ್​ ದಾಳಿ ನಡೆಸುತ್ತಿದೆ ಎಂದು ಹೇಳಿದ್ದರು.

ಇದನ್ನೂ ಓದಿ: Bhabanipur bypoll ಭವಾನಿಪುರ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧೆ; ಅಭ್ಯರ್ಥಿ ಆಯ್ಕೆಗೆ ಬಿಜೆಪಿ ಸಭೆ ನಾಳೆ

ಯೋಗಿ ಆದಿತ್ಯನಾಥ್​​ ವಿರುದ್ಧ ಮಾತನಾಡಿದ್ದ ಮಾಜಿ ರಾಜ್ಯಪಾಲ ಅಜೀಜ್​ ಖುರೇಷಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು

Follow Us
Web contact
Web contact

TV9 Kannada

Read More
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ