AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ ಪಡೆಯ ನಿರ್ಗಮನದ ನಂತರ ವ್ಯಕ್ತಿಯೊಬ್ಬನನ್ನು ಹೆಲಿಕಾಪ್ಟರ್​​ಗೆ ನೇತು ಹಾಕಿ ಹಾರಾಟ ನಡೆಸಿದ ತಾಲಿಬಾನ್

ಕಂದಹಾರ್ ಪ್ರಾಂತ್ಯದ ಮೇಲೆ ತಾಲಿಬಾನ್ ವಶದಲ್ಲಿರುವ ಅಮೆರಿಕದ ಮಿಲಿಟರಿ ಹೆಲಿಕಾಪ್ಟರ್ ಗೆ ಹಗ್ಗ ಕಟ್ಟಿ ಅದರಲ್ಲಿ ಓರ್ವ ವ್ಯಕ್ತಿ ತೂಗಾಡುತ್ತಿರುವುದನ್ನು ಈ ದೃಶ್ಯಗಳು ವಿಡಿಯೊದಲ್ಲಿವೆ. ನೆಲದಿಂದ ಚಿತ್ರೀಕರಿಸಿದ ವಿಡಿಯೊದಲ್ಲಿ ಹೆಲಿಕಾಪ್ಟರ್ ಗೆ ಕಟ್ಟಿದ ವ್ಯಕ್ತಿ ಬದುಕಿದ್ದಾನೆಯೇ ಇಲ್ಲವೇ ಎಂಬುದನ್ನು ಸ್ಪಷ್ಟವಾಗಿ ತೋರಿಸುವುದಿಲ್ಲ

ಅಮೆರಿಕ ಪಡೆಯ ನಿರ್ಗಮನದ ನಂತರ ವ್ಯಕ್ತಿಯೊಬ್ಬನನ್ನು ಹೆಲಿಕಾಪ್ಟರ್​​ಗೆ ನೇತು ಹಾಕಿ ಹಾರಾಟ ನಡೆಸಿದ ತಾಲಿಬಾನ್
ಹೆಲಿಕಾಪ್ಟರ್ ನಲ್ಲಿ ತೂಗಾಡುತ್ತಿರುವ ವ್ಯಕ್ತಿಯ ದೇಹ (ವಿಡಿಯೊ ಚಿತ್ರ)
TV9 Web
| Edited By: |

Updated on:Aug 31, 2021 | 4:30 PM

Share

ಕಾಬೂಲ್: ಅಮೆರಿಕದ ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್ ಗೆ ವ್ಯಕ್ತಿಯೊಬ್ಬನನ್ನು ನೇತು ಹಾಕಿ ಕಂದಹಾರ್ ಮೇಲೆ ಹಾರಾಡುತ್ತಿರುವ ವಿಡಿಯೊವೊಂದು ಸಾಮಾಜಿಕ  ಮಾಧ್ಯಮಗಳಲ್ಲಿ ಕಾಣಿಸಿಕೊಂಡಿದೆ. ಕಂದಹಾರ್ ಪ್ರಾಂತ್ಯದಲ್ಲಿ ಗಸ್ತು ತಿರುಗಲು ವಶಪಡಿಸಿಕೊಂಡಿರುವ ಅಮೆರಿಕದ ಮಿಲಿಟರಿ ಹೆಲಿಕಾಪ್ಟರ್‌ನಲ್ಲಿ ಕ್ರೂರ ತಾಲಿಬಾನ್‌ಗಳು ಒಬ್ಬ ವ್ಯಕ್ತಿಯನ್ನು ಕೊಂದು ನೇತು ಹಾಕಿದ್ದಾರೆ ಎಂದು ಹಲವಾರು ಪತ್ರಕರ್ತರು ಈ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಕಂದಹಾರ್ ಪ್ರಾಂತ್ಯದ ಮೇಲೆ ತಾಲಿಬಾನ್ ವಶದಲ್ಲಿರುವ ಅಮೆರಿಕದ ಮಿಲಿಟರಿ ಹೆಲಿಕಾಪ್ಟರ್​​ಗೆ ಹಗ್ಗ ಕಟ್ಟಿ ಅದರಲ್ಲಿ ಓರ್ವ ವ್ಯಕ್ತಿ ತೂಗಾಡುತ್ತಿರುವುದನ್ನು ಈ ದೃಶ್ಯಗಳು ವಿಡಿಯೊದಲ್ಲಿವೆ. ನೆಲದಿಂದ ಚಿತ್ರೀಕರಿಸಿದ ವಿಡಿಯೊದಲ್ಲಿ ಹೆಲಿಕಾಪ್ಟರ್​​ಗೆ ಕಟ್ಟಿದ ವ್ಯಕ್ತಿ ಬದುಕಿದ್ದಾನೆಯೇ ಇಲ್ಲವೇ ಎಂಬುದನ್ನು ಸ್ಪಷ್ಟವಾಗಿ ತೋರಿಸುವುದಿಲ್ಲ, ಆದರೆ ತಾಲಿಬಾನಿಗಳು ಅವರು ಕೊಂದ ವ್ಯಕ್ತಿಯ ದೇಹವನ್ನು ಕಟ್ಟಿರುವುದಾಗಿ ವರದಿಗಳು ಹೇಳಿವೆ.

ಆದಾಗ್ಯೂ ತಾಲಿಬಾನ್​​ನೊಂದಿಗೆ ಸಂಬಂಧ ಹೊಂದಿದೆಯೆಂದು ಹೇಳಿಕೊಳ್ಳುವ ಟ್ವಿಟರ್ ಖಾತೆಯಾದ ತಾಲಿಬ್ ಟೈಮ್ಸ್ ಈ ವಿಡಿಯೊ ಟ್ವೀಟ್ ಮಾಡಿ “ನಮ್ಮ ವಾಯುಪಡೆ! ಈ ಸಮಯದಲ್ಲಿ, ಇಸ್ಲಾಮಿಕ್ ಎಮಿರೇಟ್‌ನ ವಾಯುಪಡೆಯ ಹೆಲಿಕಾಪ್ಟರ್‌ಗಳು ಕಂದಹಾರ್ ನಗರದ ಮೇಲೆ ಹಾರುತ್ತಿವೆ ಮತ್ತು ನಗರದಲ್ಲಿ ಗಸ್ತು ತಿರುಗುತ್ತಿವೆ ಎಂದು ಬರೆದಿದೆ.

ಕಳೆದ ತಿಂಗಳು ಅಮೆರಿಕ ಅಫ್ಘಾನಿಸ್ತಾನಕ್ಕೆ ಕನಿಷ್ಠ 7 ಬ್ಲ್ಯಾಕ್ ಹಾಕ್ ಚಾಪರ್‌ಗಳನ್ನು ಪೂರೈಸಿದೆ ಎಂದು ಡೈಲಿ ಮೇಲ್ ಹೇಳಿದ.ಜೊತೆಗೆ 20 ವರ್ಷಗಳಲ್ಲಿ ನಿರ್ಮಿಸಿದ ದಾಸ್ತಾನು ಬೇರೆ ಇದೆ. ಅಫ್ಘಾನಿಸ್ತಾನದಲ್ಲಿ ಈಗ ಎಲ್ಲಾ ರಕ್ಷಣಾ ಸಾಧನಗಳನ್ನು ಕೈಬಿಡಲಾಗಿದೆ.

ಕಳೆದ ತಿಂಗಳು ಯುಎಸ್ ಅಫ್ಘಾನಿಸ್ತಾನಕ್ಕೆ ಕನಿಷ್ಠ 7 ಬ್ಲ್ಯಾಕ್ ಹಾಕ್ ಚಾಪರ್‌ಗಳನ್ನು ಪೂರೈಸಿದೆ ಎಂದು ಡೈಲಿ ಮೇಲ್ ಹೇಳಿದೆ, ಜೊತೆಗೆ 20 ವರ್ಷಗಳಲ್ಲಿ ನಿರ್ಮಿಸಿದ ದಾಸ್ತಾನು ಇದೆ. ಅಫ್ಘಾನಿಸ್ತಾನದಲ್ಲಿ ಈಗ ಎಲ್ಲಾ ರಕ್ಷಣಾ ಸಾಧನಗಳನ್ನು ಕೈಬಿಡಲಾಗಿದೆ.

ಮಂಗಳವಾರ ಆತುರದ ನಿರ್ಗಮನದ ನಂತರ ಅಮೆರಿಕ ಮಿಲಿಟರಿ ಅಂತಿಮ ವಿಮಾನವನ್ನು ಏರುವ ಮೊದಲು 73 ವಿಮಾನಗಳು, 27 ಹಮ್ವೀಗಳು, ಶಸ್ತ್ರಾಸ್ತ್ರ ವ್ಯವಸ್ಥೆಗಳು ಮತ್ತು ಇತರ ಹೈಟೆಕ್ ರಕ್ಷಣಾ ಸಾಧನಗಳನ್ನು ನಿಷ್ಕ್ರಿಯಗೊಳಿಸಿದೆ ಎಂದು ಹೇಳಿದೆ.

ಕಾಬೂಲ್ ವಿಮಾನ ನಿಲ್ದಾಣದಿಂದ ಅಮೆರಿಕ ಸೈನ್ಯವನ್ನು ಹಿಂತೆಗೆದುಕೊಂಡ ಕೆಲವೇ ಗಂಟೆಗಳಲ್ಲಿ, ತಾಲಿಬಾನ್ ಆವರಣವನ್ನು ಪ್ರವೇಶಿಸಿ ಚಿನೂಕ್ ಚಾಪರ್‌ಗಳು ಮತ್ತು ಅಮೆರಿಕ ಸೈನ್ಯವು ಬಿಟ್ಟುಹೋದ ಇತರ ರಕ್ಷಣಾ ಸಾಧನಗಳನ್ನು ಪರೀಕ್ಷಿಸಿತು. ಬದರಿ 313 ಬೆಟಾಲಿಯನ್ ಹೋರಾಟಗಾರರು ಹೆಲಿಕಾಪ್ಟರ್‌ಗಳನ್ನು ಪರೀಕ್ಷಿಸುತ್ತಿರುವುದು ವಿಡಿಯೊದಲ್ಲಿದೆ.

ನಂತರ ತಾಲಿಬಾನ್ ಹೋರಾಟಗಾರರು ಕಾಬೂಲ್ ವಿಮಾನ ನಿಲ್ದಾಣದ ಮೇಲೆ ಹಿಡಿತ ಸಾಧಿಸಿದ ನಂತರ, ಕಾಬೂಲ್ ವಿಮಾನ ನಿಲ್ದಾಣದ ರನ್ ವೇಯಲ್ಲಿ ತಾಲಿಬರು ಕಾರುಗಳು ಮತ್ತು ಇತರ ವಾಹನಗಳನ್ನು ರೇಸ್ ಮಾಡುವ ವಿಡಿಯೊಗಳು ಹೊರಹೊಮ್ಮಿದವು. ಅಫ್ಘಾನಿಸ್ತಾನದಲ್ಲಿ 20 ವರ್ಷಗಳ ಯುದ್ಧದ ನಂತರ ವಿಜಯವನ್ನು ಘೋಷಿಸಲು ತಾಲಿಬಾನ್ ನಾಯಕರು ಸಾಂಕೇತಿಕವಾಗಿ ರನ್ ವೇ ಮೇಲೆ ನಡೆದರು.

ಇದನ್ನೂ ಓದಿ: ‘ಅಫ್ಘಾನ್​ ಹಿಂದು-ಸಿಖ್ಖ​​ರು ಭಾರತಕ್ಕೆ ಹೋಗಿ-ಬರಲು ನಾವು ಅಡಚಣೆ ಮಾಡೋದಿಲ್ಲ’ -ತಾಲಿಬಾನ್​ ವಕ್ತಾರ

ಇದನ್ನೂ ಓದಿ: ತಾಲಿಬಾನ್ ಬಗ್ಗೆ ಭಯವಿಲ್ಲ, ಯಾಕೆ ಹೆದರಬೇಕು? ಎಂದ ಕಾಬೂಲ್ ಶಾಲಾ ವಿದ್ಯಾರ್ಥಿನಿ

(Taliban fly US Black Hawk helicopter with body hanging from rope Kandahar in Afghanistan)

Published On - 4:30 pm, Tue, 31 August 21

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು