AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಷರಿಯಾದಲ್ಲಿ ರಾಜಕೀಯ ಪಕ್ಷಗಳ ಪರಿಕಲ್ಪನೆ ಇಲ್ಲ: ಅಫ್ಘಾನಿಸ್ತಾನದಲ್ಲಿ ಪ್ರಜಾಪ್ರಭುತ್ವ ನಿಷೇಧಿಸಿದ ತಾಲಿಬಾನ್

ಕನಿಷ್ಠ 70 ಪ್ರಮುಖ ಮತ್ತು ಸಣ್ಣ ರಾಜಕೀಯ ಪಕ್ಷಗಳು 2021 ರವರೆಗೆ ಅಫ್ಘಾನಿಸ್ತಾನ ನ್ಯಾಯ ಸಚಿವಾಲಯದಲ್ಲಿ ಔಪಚಾರಿಕವಾಗಿ ನೋಂದಾಯಿಸಲ್ಪಟ್ಟವು. ಆದರೆ ತಾಲಿಬಾನ್ ಯುದ್ಧದಿಂದ ಧ್ವಂಸಗೊಂಡ ಅಫ್ಘಾನಿಸ್ತಾನದ ನಿಯಂತ್ರಣವನ್ನು ಮರಳಿ ಪಡೆದ ನಂತರ ಮತ್ತು ಅಮೆರಿಕ ತನ್ನ ಪಡೆಗಳನ್ನು ಹಿಂತೆಗೆದುಕೊಂಡ ನಂತರ, ರಾಷ್ಟ್ರದಲ್ಲಿನ ರಾಜಕೀಯ ವ್ಯವಸ್ಥೆಯು ಕುಸಿಯಿತು.

ಷರಿಯಾದಲ್ಲಿ ರಾಜಕೀಯ ಪಕ್ಷಗಳ ಪರಿಕಲ್ಪನೆ ಇಲ್ಲ: ಅಫ್ಘಾನಿಸ್ತಾನದಲ್ಲಿ ಪ್ರಜಾಪ್ರಭುತ್ವ ನಿಷೇಧಿಸಿದ ತಾಲಿಬಾನ್
ಅಬ್ದುಲ್ ಹಕೀಮ್ ಶೇರಿ
ರಶ್ಮಿ ಕಲ್ಲಕಟ್ಟ
|

Updated on: Aug 17, 2023 | 2:16 PM

Share

ಕಾಬೂಲ್: ಅಫ್ಘಾನಿಸ್ತಾನದ (Afghanistan) ತಾಲಿಬಾನ್ (Taliban) ಷರಿಯಾವನ್ನು (Sharia) ಉಲ್ಲೇಖಿಸಿ ರಾಷ್ಟ್ರದ ಎಲ್ಲಾ ರಾಜಕೀಯ ಪಕ್ಷಗಳನ್ನು ನಿಷೇಧಿಸಿದ್ದು, ಅಂತಹ ಚಟುವಟಿಕೆಗಳು ಇಸ್ಲಾಮಿಕ್ ಕಾನೂನಿಗೆ ವಿರುದ್ಧವಾಗಿದೆ ಎಂದು ಹೇಳಿದೆ. ತಾಲಿಬಾನ್ ಕಾಬೂಲ್ ಅನ್ನು ಸ್ವಾಧೀನಪಡಿಸಿಕೊಂಡ ಎರಡನೇ ವಾರ್ಷಿಕೋತ್ಸವವನ್ನು ಗುರುತಿಸಿದ ಒಂದು ದಿನದ ನಂತರ  ಈ ನಿರ್ಧಾರ ತೆಗೆದುಕೊಂಡಿದೆ. ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ನಿಷೇಧವನ್ನು ಘೋಷಿಸಲಾಯಿತು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತಾಲಿಬಾನ್ ನ್ಯಾಯ ಮಂತ್ರಿ ಅಬ್ದುಲ್ ಹಕೀಮ್ ಶೇರಿ, ಷರಿಯಾ  ಮುಸ್ಲಿಂ ಜನರ ದೈನಂದಿನ ಜೀವನವನ್ನು ನಿಯಂತ್ರಿಸುವ ಕಾನೂನುಗಳು ಮತ್ತು ನಿಯಮಗಳು ಆಗಿದ್ದು,  ಇದರಲ್ಲಿ ರಾಜಕೀಯ ಪಕ್ಷಗಳ ಪರಿಕಲ್ಪನೆ ಇಲ್ಲ ಎಂದಿದ್ದಾರೆ.

ರಾಜಕೀಯ ಪಕ್ಷಗಳು ದೇಶದಲ್ಲಿ ಕಾರ್ಯನಿರ್ವಹಿಸಲು ಷರಿಯಾ ಆಧಾರವಿಲ್ಲ. ಅವರು ರಾಷ್ಟ್ರೀಯ ಹಿತಾಸಕ್ತಿಗಳನ್ನು ಪೂರೈಸುವುದಿಲ್ಲ ಅಥವಾ ರಾಷ್ಟ್ರವು ಅವರನ್ನು ಮೆಚ್ಚುವುದಿಲ್ಲ ಎಂದು ಅವರು ಹೇಳಿದ್ದಾರೆ. ಸರ್ಕಾರದ ಉನ್ನತ ನಾಯಕತ್ವದ ಒಪ್ಪಿಗೆಯೊಂದಿಗೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬೆಳವಣಿಗೆಗಳ ಬಗ್ಗೆ ತಿಳಿದಿರುವ ಜನರು ಸಿಎನ್ಎನ್- ನ್ಯೂಸ್18ಗೆ ತಿಳಿಸಿದ್ದಾರೆ. ಶೇರಿ ಅವರು ಮುಲ್ಲಾ ಮೊಹಮ್ಮದ್ ಒಮರ್ ನೇತೃತ್ವದ ಕಂಧಾರಿ ಬಣಕ್ಕೆ ಸೇರಿದ್ದು, ಅಮೀರ್ ಖಾನ್ ಮುತ್ತಕಿ ಅವರಂತಹ ಹಿರಿಯ ನಾಯಕರನ್ನು ಸಹ ಒಳಗೊಂಡಿದ್ದಾರೆ

ಈ ಹೊಸ ಬೆಳವಣಿಗೆಯನ್ನು ಜಾಗತಿಕ ಸಮುದಾಯವು ಸ್ವೀಕರಿಸುವುದಿಲ್ಲವಾದ್ದರಿಂದ ಈಗ ವಿದೇಶಿ ಪರಿಹಾರ ಮತ್ತು ನೆರವು ಬರಲು ಕಷ್ಟವಾಗುತ್ತದೆ ಎಂದು ಮೂಲಗಳು ಹೇಳಿವೆ.

ಕನಿಷ್ಠ 70 ಪ್ರಮುಖ ಮತ್ತು ಸಣ್ಣ ರಾಜಕೀಯ ಪಕ್ಷಗಳು 2021 ರವರೆಗೆ ಅಫ್ಘಾನಿಸ್ತಾನ ನ್ಯಾಯ ಸಚಿವಾಲಯದಲ್ಲಿ ಔಪಚಾರಿಕವಾಗಿ ನೋಂದಾಯಿಸಲ್ಪಟ್ಟವು. ಆದರೆ ತಾಲಿಬಾನ್ ಯುದ್ಧದಿಂದ ಧ್ವಂಸಗೊಂಡ ಅಫ್ಘಾನಿಸ್ತಾನದ ನಿಯಂತ್ರಣವನ್ನು ಮರಳಿ ಪಡೆದ ನಂತರ ಮತ್ತು ಅಮೆರಿಕ ತನ್ನ ಪಡೆಗಳನ್ನು ಹಿಂತೆಗೆದುಕೊಂಡ ನಂತರ, ರಾಷ್ಟ್ರದಲ್ಲಿನ ರಾಜಕೀಯ ವ್ಯವಸ್ಥೆಯು ಕುಸಿಯಿತು.

ತಾಲಿಬಾನ್ ಸರ್ಕಾರದ ವಿರುದ್ಧ ಟೀಕೆಗಳನ್ನು ನಿಗ್ರಹಿಸಲು ಸಂಘ, ಸಭೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಿರ್ಬಂಧಿಸಿದೆ. ಆದರೆ ಅದರ ಬೆಂಬಲಿಗರಿಗೆ ಈ ಹಕ್ಕುಗಳನ್ನು ಆನಂದಿಸಲು ಅವಕಾಶ ನೀಡುತ್ತದೆ.

ಇದನ್ನೂ ಓದಿ:Sharia Law: ಅಫ್ಘಾನಿಸ್ತಾನದಲ್ಲಿ ಷರಿಯಾ ಆಡಳಿತ ಜಾರಿಗೆ ಸಿದ್ಧತೆ; ಷರಿಯಾ ಕಾನೂನು ಎಂದರೇನು?

ತಾಲಿಬಾನ್ ಅಧಿಕಾರವನ್ನು ವಶಪಡಿಸಿಕೊಂಡ ನಂತರ ಅಫ್ಘಾನಿಸ್ತಾನವನ್ನು ಆಳಲು ಷರಿಯಾ ಕಾನೂನು ವಿಧಿಸಿದ್ದು ಇದರ ಪ್ರಕಾರ ಆರನೇ ತರಗತಿಯ ನಂತರ ಹುಡುಗಿಯರು ಶಾಲೆಗೆ ಹೋಗುವುದನ್ನು ನಿಷೇಧಿಸಲಾಗಿದೆ. ಮಹಿಳೆಯರಿಗೆ ಕೆಲಸ ಮತ್ತು ಸಾರ್ವಜನಿಕ ಜೀವನ ನಿಷೇಧಿಸಲಾಗಿದೆ. ಸಲೂನ್‌ಗಳನ್ನು ಮುಚ್ಚಿರುವುದರಿಂದ ಸ್ವಯಂ-ಆರೈಕೆ ಮತ್ತು ಸೌಂದರ್ಯದ ವಿಷಯದಲ್ಲೂ ಮಹಿಳೆಯರು ಈಗ ನಿರ್ಬಂಧಗಳನ್ನು ಎದುರಿಸುತ್ತಿದ್ದಾರೆ.

ತಾಲಿಬಾನ್ ಆಳ್ವಿಕೆಯ ಎರಡು ವರ್ಷಗಳ ಅವಧಿಯಲ್ಲಿ ಪತ್ರಿಕಾ ಸ್ವಾತಂತ್ರ್ಯದ ಪರಿಕಲ್ಪನೆಯು ಸಹ ಸತ್ತುಹೋಯಿತು, ಭಯೋತ್ಪಾದಕರು ಹಲವಾರು ಸುದ್ದಿ ವಾಹಿನಿಗಳು ಮತ್ತು ಔಟ್‌ಲೆಟ್‌ಗಳನ್ನು ಮುಚ್ಚುವಂತೆ ಒತ್ತಾಯಿಸಿದ್ದು ನೂರಾರು ಪತ್ರಕರ್ತರು ಯುದ್ಧ ಪೀಡಿತ ರಾಷ್ಟ್ರವನ್ನು ತೊರೆಯುವಂತೆ ಒತ್ತಾಯಿಸಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ