AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದೊಂದಿಗೆ ಸಂಬಂಧ ಬೆಳೆಸುವ ಇಂಗಿತ ವ್ಯಕ್ತಪಡಿಸಿದ ತಾಲಿಬಾನ್​; ಮೊಹಮ್ಮದ್ ಅಬ್ಬಾಸ್ ಸ್ಟ್ಯಾನಿಕಜೈ ಹೇಳಿಕೆ

ಮೊಹಮ್ಮದ್ ಅಬ್ಬಾಸ್ ಸ್ಟ್ಯಾನಿಕಜೈ ಈ ಮೊದಲು ಭಾರತದ ಡೆಹ್ರಾಡೂನ್​ನಲ್ಲಿ ಇಂಡಿಯನ್ ಮಿಲಿಟರಿ ಅಕಾಡೆಮಿಯಲ್ಲಿ ತರಬೇತಿ ಪಡೆದಿದ್ದ ಎನ್ನುವುದು ಅತ್ಯಂತ ಗಮನಾರ್ಹ ವಿಚಾರವಾಗಿದೆ. ತರಬೇತಿ ಬಳಿಕ ಅಫ್ಘಾನಿಸ್ತಾನಕ್ಕೆ ಹೋಗಿದ್ದ ಮೊಹಮ್ಮದ್ ಅಬ್ಬಾಸ್ ಸ್ಟ್ಯಾನಿಕಜೈ ಅಫ್ಘನ್ ಮಿಲಿಟರಿ ಸೇರಿಕೊಳ್ಳುವ ಬದಲು ತಾಲಿಬಾನ್ ಕಡೆಗೆ ಒಲವು ವ್ಯಕ್ತಪಡಿಸಿ ಆ ಸಂಘಟನೆಗೆ ಸೇರ್ಪಡೆಯಾಗಿದ್ದಾನೆ.

ಭಾರತದೊಂದಿಗೆ ಸಂಬಂಧ ಬೆಳೆಸುವ ಇಂಗಿತ ವ್ಯಕ್ತಪಡಿಸಿದ ತಾಲಿಬಾನ್​; ಮೊಹಮ್ಮದ್ ಅಬ್ಬಾಸ್ ಸ್ಟ್ಯಾನಿಕಜೈ ಹೇಳಿಕೆ
ಮೊಹಮ್ಮದ್ ಅಬ್ಬಾಸ್ ಸ್ಟ್ಯಾನಿಕಜೈ
TV9 Web
| Edited By: |

Updated on:Aug 29, 2021 | 9:36 AM

Share

ಅಫ್ಘಾನಿಸ್ತಾನದಲ್ಲಿ ಪ್ರಜಾಪ್ರಭುತ್ವ ಸರ್ಕಾರವನ್ನು ಹತೋಟಿಗೆ ತೆಗೆದುಕೊಂಡು ತಮ್ಮದೇ ಸಾಮ್ರಾಜ್ಯ ಕಟ್ಟಿ ಆಳ್ವಿಕೆ ನಡೆಸಲು ಮುಂದಾಗಿರುವ ತಾಲಿಬಾನ್​ ಇದೀಗ ಭಾರತದೊಂದಿಗೆ ಸಂಬಂಧ ಬೆಳೆಸುವ ಇಂಗಿತ ವ್ಯಕ್ತಪಡಿಸಿದೆ. ತಾಲಿಬಾನ್ ನಾಯಕ ಮೊಹಮ್ಮದ್ ಅಬ್ಬಾಸ್ ಸ್ಟ್ಯಾನಿಕಜೈ ಈ ಕುರಿತು ಹೇಳಿಕೆ ನೀಡಿದ್ದು, ಅಫ್ಘಾನಿಸ್ತಾನದ ತಾಲಿಬಾನ್​ ಭಾರತದೊಂದಿಗೆ ಉತ್ತಮ ಬಾಂಧವ್ಯ ಹೊಂದಲು ಬಯಸುತ್ತದೆ ಎಂದು ಹೇಳಿಕೊಂಡಿದ್ದಾನೆ.

ಮೊಹಮ್ಮದ್ ಅಬ್ಬಾಸ್ ಸ್ಟ್ಯಾನಿಕಜೈ ಈ ಮೊದಲು ಭಾರತದ ಡೆಹ್ರಾಡೂನ್​ನಲ್ಲಿ ಇಂಡಿಯನ್ ಮಿಲಿಟರಿ ಅಕಾಡೆಮಿಯಲ್ಲಿ ತರಬೇತಿ ಪಡೆದಿದ್ದ ಎನ್ನುವುದು ಅತ್ಯಂತ ಗಮನಾರ್ಹ ವಿಚಾರವಾಗಿದೆ. ತರಬೇತಿ ಬಳಿಕ ಅಫ್ಘಾನಿಸ್ತಾನಕ್ಕೆ ಹೋಗಿದ್ದ ಮೊಹಮ್ಮದ್ ಅಬ್ಬಾಸ್ ಸ್ಟ್ಯಾನಿಕಜೈ ಅಫ್ಘನ್ ಮಿಲಿಟರಿ ಸೇರಿಕೊಳ್ಳುವ ಬದಲು ತಾಲಿಬಾನ್ ಕಡೆಗೆ ಒಲವು ವ್ಯಕ್ತಪಡಿಸಿ ಆ ಸಂಘಟನೆಗೆ ಸೇರ್ಪಡೆಯಾಗಿದ್ದಾನೆ. ಈಗ ಅಫ್ಘಾನಿಸ್ತಾನದ ಬಹುಭಾಗವನ್ನು ತಾಲಿಬಾನ್ ವಶಪಡಿಸಿಕೊಳ್ಳುತ್ತಿರುವ ಹೊತ್ತಿನಲ್ಲೇ, ಅಫ್ಘಾನಿಸ್ತಾನದ ತಾಲಿಬಾನ್ ಭಾರತದೊಂದಿಗೆ ಉತ್ತಮ ಬಾಂಧವ್ಯ ಹೊಂದಲು ಬಯಸುತ್ತದೆ ಎಂದು ಹೇಳಿದ್ದಾನೆ.

ಕೆಲ ದಿನಗಳ ಹಿಂದಷ್ಟೇ ಪಾಕಿಸ್ತಾನದಲ್ಲಿರುವ ಕುಖ್ಯಾತ ಭಯೋತ್ಪಾದಕ, ಜೈಷ್-ಎ-ಮೊಹಮದ್ ಉಗ್ರಗಾಮಿ ಸಂಘಟನೆಯ ನಾಯಕ ಮಸೂದ್ ಅಜರ್ ಅಫ್ಘಾನಿಸ್ತಾನದ ತಾಲಿಬಾನ್ ನಾಯಕರನ್ನು ಕಂದಹಾರ್ ನಗರದಲ್ಲಿ ಭೇಟಿಯಾಗಿ, ಕಾಶ್ಮೀರದ ಭಯೋತ್ಪಾದನಾ ಚಟುವಟಿಕೆಗಳಿಗೆ ಬೆಂಬಲ ಕೋರಿದ್ದಾನೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೆ ಜಾಲತಾಣ ವರದಿ ಮಾಡಿತ್ತು.

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತದ ಚುಕ್ಕಾಣಿ ಹಿಡಿದಿರುವ ಮುಲ್ಲಾ ಅಬ್ದುಲ್ ಘನಿ ಬಾರದಾರ್ ಸೇರಿದಂತೆ ಹಲವು ಪ್ರಮುಖರನ್ನು ಮಜೂದ್ ಅಜರ್ ಭೇಟಿಯಾಗಿದ್ದಾನೆ ಎನ್ನಲಾಗಿದೆ. ಮುಂಬೈ ಮೇಲೆ ಭಯೋತ್ಪಾದಕರ ದಾಳಿ (26/11) ಸೇರಿದಂತೆ ಹಲವು ಭಯೋತ್ಪಾದನಾ ಚಟುವಟಿಕೆಗಳಲ್ಲಿ ಮಸೂದ್ ಅಜರ್​ ಆರೋಪಿಯಾಗಿದ್ದಾನೆ.

ತಾಲಿಬಾನ್ ಉಗ್ರರು ಕಾಬೂಲ್ ವಶಪಡಿಸಿಕೊಳ್ಳುವ ಒಂದು ದಿನ ಮೊದಲಷ್ಟೇ ತಾಲಿಬಾನ್ ಉಗ್ರರನ್ನು ಮಜೂದ್ ಅಜರ್ ಶ್ಲಾಘಿಸಿ ಲೇಖನ ಬರೆದಿದ್ದ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಗೆಲುವನ್ನು ಸಂಭ್ರಮಿಸಿದ್ದ ಜೈಷ್-ಎ-ಮೊಹಮದ್ ಉಗ್ರರು ಪರಸ್ಪರ ಅಭಿನಂದನೆಯ ಮೆಸೇಜ್​ಗಳನ್ನು ವಿನಿಮಯ ಮಾಡಿಕೊಂಡಿದ್ದರು.

ಜೈಷ್​-ಎ-ಮೊಹಮದ್ ಮತ್ತು ತಾಲಿಬಾನ್ ಸಂಘಟನೆಗಳು ಸೈದ್ಧಾಂತಿಕವಾಗಿ ಸಹಮತ ಹೊಂದಿವೆ. ಇಸ್ಲಾಮಿಕ್ ಷರಿಯಾ ಕಾನೂನು ಪದ್ಧತಿಯನ್ನು ಡಿಯೊಬಂಡಿ ಸುನ್ನಿ ವಿಚಾರಧಾರೆಗೆ ಅನುಗುಣವಾಗಿ ಎರಡೂ ಸಂಘಟನೆಗಳು ವಿಶ್ಲೇಷಿಸುತ್ತವೆ. ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸುತ್ತವೆ ಎಂದು ಸಂದೇಶ ವಿನಿಮಯ ಮಾಡಿಕೊಂಡಿದ್ದರು.

ಕಠ್ಮಂಡುವಿನಿಂದ ಲಖನೌಗೆ ಬರುತ್ತಿದ್ದ ಇಂಡಿಯನ್ ಏರ್​ಲೈನ್ಸ್​ ವಿಮಾನವನ್ನು ಅಪಹರಿಸಿ ಕಂದಹಾರ್​​ಗೆ ಕೊಂಡೊಯ್ದಿದ್ದ ಪಾಕಿಸ್ತಾನದ ಉಗ್ರಗಾಮಿಗಳು ಪ್ರಯಾಣಿಕರನ್ನು ಒತ್ತೆಯಾಗಿ ಇರಿಸಿಕೊಂಡು ಮಸೂದ್​ ಅಜರ್​ನ ಬಿಡುಗಡೆಗೆ ಒತ್ತಾಯಿಸಿದ್ದರು. ಆಗ ಅಫ್ಘಾನಿಸ್ತಾನದಲ್ಲಿ ಆಡಳಿತ ನಡೆಸುತ್ತಿದ್ದ ತಾಲಿಬಾನಿಗಳು ವಿಮಾನದ ಸುತ್ತ ಕಾವಲುನಿಂತು ಭಯೋತ್ಪಾದಕರ ಉದ್ದೇಶ ಈಡೇರಿಸಿದ್ದರು. ಮಸೂದ್ ಅಜರ್ ಬಿಡುಗಡೆಯ ನಂತರ ಕಾಶ್ಮೀರದಲ್ಲಿ ಭಯೋತ್ಪಾದನಾ ಚಟುವಟಿಕೆ ಹೆಚ್ಚಾಗಿತ್ತು.

ಪಾಕಿಸ್ತಾನದ ಆಡಳಿತಾರೂಢ ಪಕ್ಷ ತೆಹ್ರೀಕ್-ಎ-ಇನ್​ಸಾಫ್ (ಪಿಟಿಐ) ನಾಯಕಿ ನೀಲೀಮ್ ಇರ್ಷಾದ್ ಶೇಖ್ ಸಹ ಜಮ್ಮು ಕಾಶ್ಮೀರದ ಹೋರಾಟಕ್ಕೆ ತಾಲಿಬಾನ್ ಬೆಂಬಲ ಸಿಗಲಿದೆ ಎಂದು ಹೇಳಿಕೊಂಡಿದ್ದರು. ಕಾಶ್ಮೀರದ ಹೋರಾಟದಲ್ಲಿ ಪಾಕಿಸ್ತಾನದ ಜೊತೆಗೆ ಇನ್ನು ಮುಂದೆ ಅಫ್ಘಾನಿಸ್ತಾನದ ನೆರವೂ ನಮಗೆ ಸಿಗಲಿ ಎಂದು ಲೈವ್ ಟಿವಿ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದರು.

(Taliban leader Mohammad Abbas Stanikzai wants to build good relationship with India)

ಇದನ್ನೂ ಓದಿ: ಶಸ್ತ್ರಾಸ್ತ್ರ, ಮದ್ದುಗುಂಡು, ಸೇನಾ ವಾಹನವನ್ನು ಹಸ್ತಾಂತರಿಸದಿದ್ದರೆ ಕಠಿಣ ಶಿಕ್ಷೆ ಕೊಡುತ್ತೇವೆ: ಆಫ್ಘನ್​ ಸೇನೆಗೆ ತಾಲಿಬಾನ್​ ಎಚ್ಚರಿಕೆ 

ತಾಲಿಬಾನ್ ನಾಯಕರನ್ನು ಭೇಟಿಯಾಗಿ ಕಾಶ್ಮೀರದ ಭಯೋತ್ಪಾದನಾ ಚಟುವಟಿಕೆಗಳಿಗೆ ಬೆಂಬಲ ಕೋರಿದ ಉಗ್ರ ಮಸೂದ್ ಅಜರ್

Published On - 9:24 am, Sun, 29 August 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ