AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದಲ್ಲಿ ಹೊಸ ಸರ್ಕಾರ ರಚನೆ ಸೇರಿದಂತೆ ಭದ್ರತೆ, ರಾಜಕೀಯ, ಸಾಮಾಜಿಕ ವಿಷಯಗಳ ಬಗ್ಗೆ ತಾಲಿಬಾನ್ ಚರ್ಚೆ

ತಾಲಿಬಾನ್ ಸುಪ್ರೀಂ ಲೀಡರ್ ಹಬೀತುಲ್ಲಾ ಅಖುಂದಾಜಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನೂತನ ಸರ್ಕಾರ ರಚನೆಯ ಪ್ರಸ್ತಾವನೆಯಾಗಿದ್ದು, ಶೀಘ್ರದಲ್ಲೇ ಹೊಸದೊಂದು ಬೆಳವಣಿಗೆಗೆ ಅಫ್ಘಾನಿಸ್ತಾನ ಸಾಕ್ಷಿಯಾಗಬಹುದು ಎಂದು ಅಂದಾಜಿಸಲಾಗಿದೆ.

ಅಫ್ಘಾನಿಸ್ತಾನದಲ್ಲಿ ಹೊಸ ಸರ್ಕಾರ ರಚನೆ ಸೇರಿದಂತೆ ಭದ್ರತೆ, ರಾಜಕೀಯ, ಸಾಮಾಜಿಕ ವಿಷಯಗಳ ಬಗ್ಗೆ ತಾಲಿಬಾನ್ ಚರ್ಚೆ
ತಾಲಿಬಾನ್ ಹೋರಾಟಗಾರರು (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Sep 01, 2021 | 8:22 AM

Share

ತಾಲಿಬಾನ್​ ಸುಪರ್ದಿಯಲ್ಲಿರುವ ಅಫ್ಘಾನಿಸ್ತಾನದ ಪ್ರಸಕ್ತ ಸ್ಥಿತಿಗತಿಗಳ ಬಗ್ಗೆ ತಾಲಿಬಾನ್ ನಾಯಕರು ನಡೆಸಿದ 3 ದಿನ‌ಗಳ ಸಭೆ ಮುಕ್ತಾಯಗೊಂಡಿದೆ. ಅಫ್ಘಾನಿಸ್ತಾನದಲ್ಲಿ ಹೊಸ ಸರ್ಕಾರ ರಚನೆ, ರಾಜಕೀಯ, ಭದ್ರತೆ, ಸಾಮಾಜಿಕ ವಿಷಯಗಳ ಕುರಿತು ಮಾತುಕತೆ ನಡೆದಿದ್ದು, ಆಫ್ಘನ್‌ನ ‌ಕಂದಹಾರ್‌ನಲ್ಲಿ ನಡೆದ ಸಭೆ ಕುರಿತು ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಯಿದ್ ಮಾಹಿತಿ ನೀಡಿದ್ದಾರೆ. ತಾಲಿಬಾನ್ ಸುಪ್ರೀಂ ಲೀಡರ್ ಹಬೀತುಲ್ಲಾ ಅಖುಂದಾಜಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನೂತನ ಸರ್ಕಾರ ರಚನೆಯ ಪ್ರಸ್ತಾವನೆಯಾಗಿದ್ದು, ಶೀಘ್ರದಲ್ಲೇ ಹೊಸದೊಂದು ಬೆಳವಣಿಗೆಗೆ ಅಫ್ಘಾನಿಸ್ತಾನ ಸಾಕ್ಷಿಯಾಗಬಹುದು ಎಂದು ಅಂದಾಜಿಸಲಾಗಿದೆ.

ಇನ್ನೊಂದೆಡೆ ಅಫ್ಘಾನಿಸ್ತಾನದಿಂದ ತಮ್ಮ ಸೇನೆಯನ್ನು ವಾಪಾಸ್ ಕರೆಸಿಕೊಂಡಿರುವ ಅಮೆರಿಕಾ ಅಧ್ಯಕ್ಷ ಜೋ ಬೈಡನ್​, ಆಫ್ಘನ್​ಗೆ ಮತ್ತೆ ಸೇನೆ ಕಳಿಸುವ ಯೋಚನೆ ಮಾಡಿಲ್ಲ ಎಂದು ಜೋ ಬೈಡನ್ ಪತ್ರಿಕಾ ಕಾರ್ಯದರ್ಶಿ ಜೆನ್ ಸಾಕಿ ಹೇಳಿಕೆ ನೀಡಿದ್ದಾರೆ. ಇನ್ನೇನಿದ್ದರೂ ನಮ್ಮ ಗಮನ ನಿರಾಶ್ರಿತರಿಗೆ ನೆಲೆ ಕಲ್ಪಿಸುವ ಬಗ್ಗೆ ಇರಲಿದೆ. ಹೀಗಾಗಿ ಸೇನೆಯನ್ನು ಮತ್ತೆ ಕಳುಹಿಸುವ ಚಿಂತನೆ ಇಲ್ಲ ಎಂದು ತಿಳಿಸಿದ್ದಾರೆ.

ಅಫ್ಘಾನಿಸ್ತಾನದಿಂದ ಸೇನೆ ಹಿಂತೆಗೆದುಕೊಂಡ ಬಗ್ಗೆ ಜೋ ಬೈಡನ್ ಕೂಡಾ ಸಮರ್ಥನೆ ಮಾಡಿಕೊಂಡಿದ್ದು, ಸೋಮವಾರ ಏರ್ ಲಿಪ್ಟ್ ಮುಗಿಯುವ ಮುನ್ನವೇ 5,500 ಅಮೆರಿಕನ್ನರು ಹೊರಬಂದಿದ್ದಾರೆ. ಉಳಿದ ಅಮೆರಿಕನ್ನರು ವಾಪಾಸ್ ಬರಲು ಬಯಸಿದರೆ ಸ್ಥಳಾಂತರಿಸುವ ವ್ಯವಸ್ಥೆ ಮಾಡಲಾಗುವುದು. ಅಫ್ಘಾನಿಸ್ತಾನದಿಂದ ಸೇನೆ ವಾಪಸ್ ಕರೆಸಿಕೊಂಡ ತೀರ್ಮಾನ ಸರಿಯಾದ ತೀರ್ಮಾನ, ಬುದ್ದಿವಂತಿಕೆಯ ತೀರ್ಮಾನ, ಅತ್ಯುತ್ತಮ ತೀರ್ಮಾನ ಎಂದು ಬೆನ್ನು ತಟ್ಟಿಕೊಂಡಿದ್ದಾರೆ.

ಭಯೋತ್ಪಾದನೆ ವಿರುದ್ಧದ ನಮ್ಮ ಸಮರ ಅಫ್ಘಾನಿಸ್ತಾನ ಸೇರಿದಂತೆ ಇತರೆ ದೇಶಗಳಲ್ಲಿ ಮುಂದುವರಿಯಲಿದೆ. ಐಸಿಎಸ್ ಖೊರಸನಾ ಜತೆಗಿನ ಹೋರಾಟ ಇನ್ನೂ ಮುಗಿದಿಲ್ಲ. ಇದು ಅಫ್ಘಾನಿಸ್ತಾನದಲ್ಲಿ ಯುದ್ಧ ಅಂತ್ಯದ ಕಾಲ ಆಗಿತ್ತು. ಈಗ ಭವಿಷ್ಯದ ಕಡೆ ನೋಡುವ ಸಮಯ, ಭೂತಕಾಲವನ್ನಲ್ಲ. ಯಾವುದೇ ಯುದ್ದಗಳಲ್ಲಿ ಕಡಿಮೆ ರಿಸ್ಕ್, ಕಡಿಮೆ ವೆಚ್ಚ, ಕಡಿಮೆ ಗ್ರೇಡ್ ಎಂಬುದು ಇಲ್ಲ ಎಂದು ಜೋ ಬೈಡನ್​ ಅಭಿಪ್ರಾಯಪಟ್ಟಿದ್ದಾರೆ.

ಆಫ್ಘನ್‌ನಿಂದ ನಮ್ಮ ಸೇನೆ ವಾಪಸ್‌ ಕರೆಸಿಕೊಂಡಿರುವ ಹೊಣೆ ಹೊರುತ್ತೇನೆ. 2 ದಶಕಗಳಲ್ಲಿ ಆಪ್ಘನ್‌ನಲ್ಲಿ ಸಾಕಷ್ಟು ಘಟನೆಗಳು ನಡೆದಿವೆ. 1,400 ಅಮೆರಿಕಾ ಯೋಧರು ಹುತಾತ್ಮರಾಗಿದ್ದಾರೆ, 44 ಸಾವಿರಕ್ಕೂ ಹೆಚ್ಚು ಸೈನಿಕರು ಗಾಯಗೊಂಡಿದ್ದಾರೆ. ಅಫ್ಘಾನಿಸ್ತಾನಕ್ಕಾಗಿಯೇ ಕೋಟ್ಯಂತರ ರೂಪಾಯಿ ಖರ್ಚು ಮಾಡಿದ್ದೇವೆ. ನಾವು ಮೊದಲು ಅಮೆರಿಕಾವನ್ನು ಸುರಕ್ಷಿತವಾಗಿಡಲು ಬಯಸುತ್ತೇವೆ ಎಂದು ಹೇಳುವ ಮೂಲಕ ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮೊದಲು ಅಮೆರಿಕಾವನ್ನು ಸುರಕ್ಷಿತವಾಗಿಡುತ್ತೇವೆ, ಆಫ್ಘನ್​ಗೆ ಈಗಾಗಲೇ ಕೋಟಿಗಟ್ಟಲೆ ಹಣ ಸುರಿದಾಗಿದೆ: ಜೋ ಬೈಡನ್​ 

ಅಫ್ಘಾನಿಸ್ತಾನದಲ್ಲಿ ಶಾಂತಿ, ಸೌಹಾರ್ದತೆ ನೆಲೆಸುವಂತೆ ಮಾಡುತ್ತೇವೆ ಅಂತ ಭರವಸೆ ನೀಡಿದ ತಾಲಿಬಾನ್ ನಾಯಕರು

(Taliban Leaders meeting over formation of new Government in Afghanistan)

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು