AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ಕಾರ್ಯಕರ್ತೆಯರನ್ನು ಹುಡುಕುತ್ತಿರುವ ತಾಲಿಬಾನ್​ ಉಗ್ರರು; ಜೀವ ತೆಗೆಯಲು ಸಿದ್ಧತೆ

ಅಫ್ಘಾನಿಸ್ತಾನದಲ್ಲಿ 1996ರಿಂದ 2001ರವರೆಗೆ ಆಡಳಿತ ನಡೆಸಿದ್ದ ತಾಲಿಬಾನ್​, ಆಗ ಕೂಡ ಹೀಗೇ ಮಾಡಿತ್ತು. ಲೈಂಗಿಕ ಕಾರ್ಯಕರ್ತೆಯರನ್ನು ಹುಡುಕಿ ಕೊಂದಿತ್ತು. ಇಲ್ಲವೇ, ತಮ್ಮ ಕಾಮತೃಷೆ ನೀಗಿಸಿಕೊಳ್ಳಲು ಉಗ್ರರು ಬಳಸಿಕೊಳ್ಳುತ್ತಿದ್ದರು.

ಲೈಂಗಿಕ ಕಾರ್ಯಕರ್ತೆಯರನ್ನು ಹುಡುಕುತ್ತಿರುವ ತಾಲಿಬಾನ್​ ಉಗ್ರರು; ಜೀವ ತೆಗೆಯಲು ಸಿದ್ಧತೆ
ತಾಲಿಬಾನ್​ ಉಗ್ರರು
TV9 Web
| Edited By: |

Updated on:Sep 04, 2021 | 11:20 AM

Share

ಅಫ್ಘಾನಿಸ್ತಾನದಿಂದ ಅಮೆರಿಕ ಸೇನೆ (US Army)ಯನ್ನು ಹಿಂಪಡೆದ ಬಳಿಕ ಸಂಪೂರ್ಣವಾಗಿ ಆ ದೇಶ ತಾಲಿಬಾನಿ (Taliban)ಗಳ ಕೈ ಸೇರಿದೆ. ಇದೀಗ ತಾಲಿಬಾನಿಗಳು ತಮ್ಮ ಕ್ರೂರ ನಿಯಮಗಳನ್ನು ಜಾರಿ ಮಾಡುತ್ತಿದ್ದಾರೆ. ಈ ಮಧ್ಯೆ ಇನ್ನೊಂದು ಆತಂಕಕಾರಿ ಸುದ್ದಿ ವರದಿಯಾಗಿದೆ. ತಾಲಿಬಾನ್​ ಉಗ್ರರು (Taliban Terrorists), ಲೈಂಗಿಕ ಕಾರ್ಯಕರ್ತೆ (Sex Workers)ಯರು, ವೇಶ್ಯಾವಾಟಿಕೆಯಲ್ಲಿ ತೊಡಗಿಕೊಂಡಿರುವವರ ಪಟ್ಟಿ ಮಾಡುತ್ತಿದ್ದು, ಅವರನ್ನೆಲ್ಲ ಕೊಲ್ಲಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ತಾಲಿಬಾನಿಗಳು ಮಹಿಳೆಯರ ವಿಷಯದಲ್ಲಿ ತುಂಬ ಕಟ್ಟುನಿಟ್ಟು. ಮಹಿಳೆಯರು ಮುಖ ಮುಚ್ಚಿಕೊಳ್ಳದೆ, ರಕ್ತಸಂಬಂಧಿ ಪುರುಷ ಅಥವಾ ಪತಿ ಇಲ್ಲದೆ ಮನೆ ಬಿಟ್ಟು ಹೊರಗೆ ಬರುವಂತೆಯೂ ಇಲ್ಲ ಎಂಬ ಕಾನೂನು ಅವರದ್ದು. ಇದೀಗ ಲೈಂಗಿಕ ಕೆಲಸ, ವೇಶ್ಯಾವಾಟಿಕೆ ನಡೆಸುತ್ತಿರುವ ಮಹಿಳೆಯ ಪಟ್ಟಿ ಮಾಡಿ, ಅವರಿಗೆ ಮರಣ ದಂಡನೆ ನೀಡುವ ಸಿದ್ಧತೆಯಲ್ಲಿ ಉಗ್ರರು ತೊಡಗಿದ್ದಾರೆ ಎನ್ನಲಾಗಿದೆ.  

ತಾಲಿಬಾನ್​ನಲ್ಲಿ ಒಂದು ಡೆತ್​ ಸ್ಕ್ವಾಡ್​​ ಇದೆ. ಅದೀಗ ಲೈಂಗಿಕ ಕಾರ್ಯಚಟುವಟಿಕೆಯಲ್ಲಿ ತೊಡಗಿಕೊಂಡಿರುವ ಮಹಿಳೆಯರನ್ನು ಹುಡುಕಲು ಪ್ರಾರಂಭಿಸಿದೆ. ಅಷ್ಟೇ ಅಲ್ಲ, ಅಶ್ಲೀಲ ವೆಬ್​ಸೈಟ್​​ಗಳನ್ನೂ ಜಾಲಾಡುತ್ತಿದೆ ಎಂದು ದಿ ಸನ್​ ವರದಿ ಮಾಡಿದೆ. ಈ ಕೆಲಸಕ್ಕೆಂದೇ ಡೆತ್ ಸ್ಕ್ವಾಡ್​ ಒಂದು ಅಭಿಯಾನವನ್ನೂ ಶುರು ಮಾಡಿದೆ ಎಂದೂ ಹೇಳಿದೆ.

ಈ ಹಿಂದೆಯೂ ಮಾಡಿತ್ತು ಅಫ್ಘಾನಿಸ್ತಾನದಲ್ಲಿ 1996ರಿಂದ 2001ರವರೆಗೆ ಆಡಳಿತ ನಡೆಸಿದ್ದ ತಾಲಿಬಾನ್​, ಆಗ ಕೂಡ ಹೀಗೇ ಮಾಡಿತ್ತು. ಲೈಂಗಿಕ ಕಾರ್ಯಕರ್ತೆಯರನ್ನು ಹುಡುಕಿ ಕೊಂದಿತ್ತು. ಇಲ್ಲವೇ, ತಮ್ಮ ಕಾಮತೃಷೆ ನೀಗಿಸಿಕೊಳ್ಳಲು ಉಗ್ರರು ಬಳಸಿಕೊಳ್ಳುತ್ತಿದ್ದರು.  ಅದಾದ ಬಳಿಕ ಅಫ್ಘಾನ್​ನಲ್ಲಿ ಅದರ ಆಡಳಿತ ಕೊನೆಗೊಂಡರೂ, ಈ 20ವರ್ಷದಲ್ಲೂ ಆ ಕೃತ್ಯವನ್ನು ಉಗ್ರರು ಮುಂದುವರಿಸಿದ್ದರು. ಅದೆಷ್ಟೋ  ಮಹಿಳೆಯರನ್ನು ಕೊಂದಿದ್ದಾರೆ. ಯುವತಿಯರನ್ನು ಅಪಹರಿಸಿ ತಮ್ಮ ಕಾಮಚಟಕ್ಕೆ ಬಳಸಿಕೊಂಡಿದ್ದಾರೆ.

ಇದನ್ನೂ ಓದಿ: ರೋಹಿಣಿ ಸಿಂಧೂರಿ ಆರೋಪಕ್ಕೆ ಮರುಜೀವ; ಸಾ.ರಾ ಮಹೇಶ್ ಒಡೆತನದ ಜಾಗಗಳ ಮರು ಸರ್ವೇ ಮಾಡಲು ಆದೇಶ

ಸದ್ಯ 1 ರಿಂದ 5ರವರೆಗೆ ಪ್ರಾಥಮಿಕ ಶಾಲೆಗಳ ಆರಂಭ ಇಲ್ಲ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

Published On - 11:18 am, Sat, 4 September 21

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು