ಲೈಂಗಿಕ ಕಾರ್ಯಕರ್ತೆಯರನ್ನು ಹುಡುಕುತ್ತಿರುವ ತಾಲಿಬಾನ್​ ಉಗ್ರರು; ಜೀವ ತೆಗೆಯಲು ಸಿದ್ಧತೆ

ಅಫ್ಘಾನಿಸ್ತಾನದಲ್ಲಿ 1996ರಿಂದ 2001ರವರೆಗೆ ಆಡಳಿತ ನಡೆಸಿದ್ದ ತಾಲಿಬಾನ್​, ಆಗ ಕೂಡ ಹೀಗೇ ಮಾಡಿತ್ತು. ಲೈಂಗಿಕ ಕಾರ್ಯಕರ್ತೆಯರನ್ನು ಹುಡುಕಿ ಕೊಂದಿತ್ತು. ಇಲ್ಲವೇ, ತಮ್ಮ ಕಾಮತೃಷೆ ನೀಗಿಸಿಕೊಳ್ಳಲು ಉಗ್ರರು ಬಳಸಿಕೊಳ್ಳುತ್ತಿದ್ದರು.

ಲೈಂಗಿಕ ಕಾರ್ಯಕರ್ತೆಯರನ್ನು ಹುಡುಕುತ್ತಿರುವ ತಾಲಿಬಾನ್​ ಉಗ್ರರು; ಜೀವ ತೆಗೆಯಲು ಸಿದ್ಧತೆ
ತಾಲಿಬಾನ್​ ಉಗ್ರರು
Follow us
| Updated By: Lakshmi Hegde

Updated on:Sep 04, 2021 | 11:20 AM

ಅಫ್ಘಾನಿಸ್ತಾನದಿಂದ ಅಮೆರಿಕ ಸೇನೆ (US Army)ಯನ್ನು ಹಿಂಪಡೆದ ಬಳಿಕ ಸಂಪೂರ್ಣವಾಗಿ ಆ ದೇಶ ತಾಲಿಬಾನಿ (Taliban)ಗಳ ಕೈ ಸೇರಿದೆ. ಇದೀಗ ತಾಲಿಬಾನಿಗಳು ತಮ್ಮ ಕ್ರೂರ ನಿಯಮಗಳನ್ನು ಜಾರಿ ಮಾಡುತ್ತಿದ್ದಾರೆ. ಈ ಮಧ್ಯೆ ಇನ್ನೊಂದು ಆತಂಕಕಾರಿ ಸುದ್ದಿ ವರದಿಯಾಗಿದೆ. ತಾಲಿಬಾನ್​ ಉಗ್ರರು (Taliban Terrorists), ಲೈಂಗಿಕ ಕಾರ್ಯಕರ್ತೆ (Sex Workers)ಯರು, ವೇಶ್ಯಾವಾಟಿಕೆಯಲ್ಲಿ ತೊಡಗಿಕೊಂಡಿರುವವರ ಪಟ್ಟಿ ಮಾಡುತ್ತಿದ್ದು, ಅವರನ್ನೆಲ್ಲ ಕೊಲ್ಲಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ತಾಲಿಬಾನಿಗಳು ಮಹಿಳೆಯರ ವಿಷಯದಲ್ಲಿ ತುಂಬ ಕಟ್ಟುನಿಟ್ಟು. ಮಹಿಳೆಯರು ಮುಖ ಮುಚ್ಚಿಕೊಳ್ಳದೆ, ರಕ್ತಸಂಬಂಧಿ ಪುರುಷ ಅಥವಾ ಪತಿ ಇಲ್ಲದೆ ಮನೆ ಬಿಟ್ಟು ಹೊರಗೆ ಬರುವಂತೆಯೂ ಇಲ್ಲ ಎಂಬ ಕಾನೂನು ಅವರದ್ದು. ಇದೀಗ ಲೈಂಗಿಕ ಕೆಲಸ, ವೇಶ್ಯಾವಾಟಿಕೆ ನಡೆಸುತ್ತಿರುವ ಮಹಿಳೆಯ ಪಟ್ಟಿ ಮಾಡಿ, ಅವರಿಗೆ ಮರಣ ದಂಡನೆ ನೀಡುವ ಸಿದ್ಧತೆಯಲ್ಲಿ ಉಗ್ರರು ತೊಡಗಿದ್ದಾರೆ ಎನ್ನಲಾಗಿದೆ.  

ತಾಲಿಬಾನ್​ನಲ್ಲಿ ಒಂದು ಡೆತ್​ ಸ್ಕ್ವಾಡ್​​ ಇದೆ. ಅದೀಗ ಲೈಂಗಿಕ ಕಾರ್ಯಚಟುವಟಿಕೆಯಲ್ಲಿ ತೊಡಗಿಕೊಂಡಿರುವ ಮಹಿಳೆಯರನ್ನು ಹುಡುಕಲು ಪ್ರಾರಂಭಿಸಿದೆ. ಅಷ್ಟೇ ಅಲ್ಲ, ಅಶ್ಲೀಲ ವೆಬ್​ಸೈಟ್​​ಗಳನ್ನೂ ಜಾಲಾಡುತ್ತಿದೆ ಎಂದು ದಿ ಸನ್​ ವರದಿ ಮಾಡಿದೆ. ಈ ಕೆಲಸಕ್ಕೆಂದೇ ಡೆತ್ ಸ್ಕ್ವಾಡ್​ ಒಂದು ಅಭಿಯಾನವನ್ನೂ ಶುರು ಮಾಡಿದೆ ಎಂದೂ ಹೇಳಿದೆ.

ಈ ಹಿಂದೆಯೂ ಮಾಡಿತ್ತು ಅಫ್ಘಾನಿಸ್ತಾನದಲ್ಲಿ 1996ರಿಂದ 2001ರವರೆಗೆ ಆಡಳಿತ ನಡೆಸಿದ್ದ ತಾಲಿಬಾನ್​, ಆಗ ಕೂಡ ಹೀಗೇ ಮಾಡಿತ್ತು. ಲೈಂಗಿಕ ಕಾರ್ಯಕರ್ತೆಯರನ್ನು ಹುಡುಕಿ ಕೊಂದಿತ್ತು. ಇಲ್ಲವೇ, ತಮ್ಮ ಕಾಮತೃಷೆ ನೀಗಿಸಿಕೊಳ್ಳಲು ಉಗ್ರರು ಬಳಸಿಕೊಳ್ಳುತ್ತಿದ್ದರು.  ಅದಾದ ಬಳಿಕ ಅಫ್ಘಾನ್​ನಲ್ಲಿ ಅದರ ಆಡಳಿತ ಕೊನೆಗೊಂಡರೂ, ಈ 20ವರ್ಷದಲ್ಲೂ ಆ ಕೃತ್ಯವನ್ನು ಉಗ್ರರು ಮುಂದುವರಿಸಿದ್ದರು. ಅದೆಷ್ಟೋ  ಮಹಿಳೆಯರನ್ನು ಕೊಂದಿದ್ದಾರೆ. ಯುವತಿಯರನ್ನು ಅಪಹರಿಸಿ ತಮ್ಮ ಕಾಮಚಟಕ್ಕೆ ಬಳಸಿಕೊಂಡಿದ್ದಾರೆ.

ಇದನ್ನೂ ಓದಿ: ರೋಹಿಣಿ ಸಿಂಧೂರಿ ಆರೋಪಕ್ಕೆ ಮರುಜೀವ; ಸಾ.ರಾ ಮಹೇಶ್ ಒಡೆತನದ ಜಾಗಗಳ ಮರು ಸರ್ವೇ ಮಾಡಲು ಆದೇಶ

ಸದ್ಯ 1 ರಿಂದ 5ರವರೆಗೆ ಪ್ರಾಥಮಿಕ ಶಾಲೆಗಳ ಆರಂಭ ಇಲ್ಲ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

Published On - 11:18 am, Sat, 4 September 21

ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ