AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಬೂಲ್​ನಲ್ಲಿ ಭಾರತದ ವೀಸಾ, ಅಫ್ಘಾನಿಸ್ತಾನ ನಾಗರಿಕರ ಪಾಸ್ ಪೋರ್ಟ್ ಕಳವು!

ಈಗಾಗಲೇ ಅಫ್ಘಾನಿಸ್ತಾನದ ನಾಗರಿಕರು ಭಾರತದ ಇ- ವೀಸಾ ಕೋರಿ ಸುಮಾರು 15 ಸಾವಿರ ಅರ್ಜಿ ಸಲ್ಲಿಸಿದ್ದರು. ಸದ್ಯ ಹೊಸದಾಗಿ ಇ- ವೀಸಾ ಪಡೆಯಲು ಅಫ್ಘಾನಿಸ್ತಾನದ ನಾಗರಿಕರಿಗೆ ಸೂಚನೆ ನೀಡಲಾಗಿದೆ.

ಕಾಬೂಲ್​ನಲ್ಲಿ ಭಾರತದ ವೀಸಾ, ಅಫ್ಘಾನಿಸ್ತಾನ ನಾಗರಿಕರ ಪಾಸ್ ಪೋರ್ಟ್ ಕಳವು!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 26, 2021 | 9:07 AM

Share

ತಾಲಿಬಾನ್ (Taliban) ಉಗ್ರರು ಅಫ್ಘಾನಿಸ್ತಾನವನ್ನು (Afghanistan) ವಶಕ್ಕೆ ಪಡೆದ ದಿನದಿಂದ ಅಲ್ಲಿನ ಪರಿಸ್ಥಿತಿ ಕ್ಷಣಕ್ಷಣಕ್ಕೂ ಬಿಗಡಾಯಿಸುತ್ತಿದೆ. ದೇಶ ಬಿಟ್ಟು ಹೋಗಲು ಅಲ್ಲಿನ ಜನರು ಹರಸಾಹಸ ಪಡುತ್ತಿದ್ದಾರೆ. ಈ ನಡುವೆ ಭಾರತದ ವೀಸಾ, ಅಫ್ಘಾನಿಸ್ತಾನ ನಾಗರಿಕರ ಪಾಸ್ ಪೋರ್ಟ್ ಕಳುವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾಬೂಲ್ನಲ್ಲಿ ಪಾಸ್ ಪೋರ್ಟ್ ಕಳ್ಳತನವಾಗಿದೆ ಎಂದು ಹೇಳಲಾಗುತ್ತಿದೆ. ಖಾಸಗಿ ಟ್ರಾವೆಲ್ ಏಜೆನ್ಸಿ ಮೇಲೆ ದಾಳಿ ನಡೆಸಿ ತಾಲಿಬಾನಿಗಳು ಪಾಸ್ ಪೋರ್ಟ್ನ ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆಗಸ್ಟ್ 15 ಮತ್ತು 16 ರಂದು ಭಾರತದ ವೀಸಾ ಕಳ್ಳತನವಾಗಿದ್ದು, ಈ ಬಗ್ಗೆ ಮಾಹಿತಿ ತಡವಾಗಿ ತಿಳಿದುಬಂದಿದೆ. ಕಳ್ಳತನವಾಗಿರುವ ಭಾರತದ ವೀಸಾವನ್ನು ಪಾಕ್ ಉಗ್ರರು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದ್ದ ಕಾರಣ ಕೇಂದ್ರದ ಗೃಹ ಇಲಾಖೆ ನೀಡಿದ್ದ ವೀಸಾವನ್ನು ರದ್ದುಪಡಿಸಿದೆ.

ಈಗಾಗಲೇ ಅಫ್ಘಾನಿಸ್ತಾನದ ನಾಗರಿಕರು ಭಾರತದ ಇ- ವೀಸಾ ಕೋರಿ ಸುಮಾರು 15 ಸಾವಿರ ಅರ್ಜಿ ಸಲ್ಲಿಸಿದ್ದರು. ಸದ್ಯ ಹೊಸದಾಗಿ ಇ- ವೀಸಾ ಪಡೆಯಲು ಅಫ್ಘಾನಿಸ್ತಾನದ ನಾಗರಿಕರಿಗೆ ಸೂಚನೆ ನೀಡಲಾಗಿದೆ.

ಹಣ ದಂಧೆ ಅಫ್ಘಾನಿಸ್ತಾನ ತಾಲಿಬಾನ್ ಉಗ್ರ ಸಂಘಟನೆಯ ವಶವಾದ ಹಿನ್ನೆಲೆ ಅಫ್ಘಾನಿಸ್ತಾನದಿಂದ ವಿದೇಶಗಳಿಗೆ ಹೋಗಲು ಜನರು ಹರಸಾಹಸ ಪಡುತ್ತಿದ್ದಾರೆ. ಈ ಪರಿಸ್ಥಿತಿಯ ನಡುವೆ ಹಣ ದಂಧೆ ಮಾಡಲು ಅಮೆರಿಕದ ಡಿಫೆನ್ಸ್ ಕಂಟ್ರಾಕ್ಟರ್ ಮುಂದಾಗಿದ್ದಾರೆ. ಆಮೆರಿಕಾದ ಡಿಫೆನ್ಸ್ ಕಂಟ್ರಾಕ್ಟರ್ನ ಚಾರ್ಟೆಡ್ ವಿಮಾನದಲ್ಲಿ ಪ್ರಯಾಣಕ್ಕೆ 6,500 ಡಾಲರ್ ಹಣ ನಿಗದಿ ಮಾಡಿದ್ದಾರೆ. ರೂಪಾಯಿ ಲೆಕ್ಕದಲ್ಲಿ ಹೇಳುವುದಾದರೆ 4,81,000 ರೂ. ವಿಮಾನ ಟಿಕೆಟ್ ದರ ನಿಗದಿ ಮಾಡಿದ್ದಾರೆ.

ಒಂದೆಡೆ ತಾಲಿಬಾನ್ ಆಳ್ವಿಕೆಗೆ ಹೆದರಿ ದೇಶ ಬಿಡಲು ಜನರು ಒದ್ದಾಡುತ್ತಿದ್ದಾರೆ. ಮತ್ತೊಂದೆಡೆ ಕೆಲವರಿಗೆ ಮಾನವೀಯತೆಯ ಬಿಕ್ಕಟ್ಟಿನ ಸಮಯದಲ್ಲೂ ಹಣವೇ ಮುಖ್ಯವಾಗಿದೆ. ಹೆಚ್ಚಿನ ಹಣ ಕೊಟ್ಟರೆ ಚಾರ್ಟೆಡ್ ವಿಮಾನದಲ್ಲಿ ವಿದೇಶಕ್ಕೆ ಸ್ಥಳಾಂತರ ಮಾಡುತ್ತಾರೆ. ಹಣ ಇಲ್ಲದಿದ್ದರೆ ಕಾಬೂಲ್ ಏರ್ ಪೋರ್ಟ್ ಹೊರಗೆ ಜನರು ಪರದಾಟ ಪಡುವುದು ಖಚಿತವಾಗಿದೆ.

ಇದನ್ನೂ ಓದಿ ಅಫ್ಘಾನಿಸ್ತಾನದ ಪಂಜ್​ಶಿರ್ ಪ್ರಾಂತ್ಯಕ್ಕೆ ತಾಲಿಬಾನ್ ಮುತ್ತಿಗೆ: ಆಹಾರ, ಇಂಧನ ಸ್ಥಗಿತ ಅಫ್ಘಾನಿಸ್ತಾನ ಸರ್ಕಾರದ ಮಾಧ್ಯಮ-ಮಾಹಿತಿ ಕೇಂದ್ರದ ಉನ್ನತಾಧಿಕಾರಿಯನ್ನು ಹತ್ಯೆಗೈದ ತಾಲಿಬಾನ್ ಉಗ್ರರು..

(theft of Indias visa and passport Afghan citizens in kabul)

Follow Us
Web contact
Web contact

TV9 Kannada

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ