AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಬೂಲ್‌ನಿಂದ ಉಕ್ರೇನ್ ವಿಮಾನ ಹೈಜಾಕ್ ಆಗಿಲ್ಲ; ಇಂಧನ ಖಾಲಿಯಾಗಿ ವಿಮಾನ ಬಂದಿತ್ತು ಎಂದ ಇರಾನ್

ಅಫ್ಘಾನಿಸ್ತಾನದಿಂದ ಭಾನುವಾರ ಜನರನ್ನು  ಸ್ಥಳಾಂತರಿಸುತ್ತಿದ್ದ ಉಕ್ರೇನಿಯನ್ ವಿಮಾನವನ್ನು ಸಶಸ್ತ್ರ ಅಪಹರಣಕಾರರು ಅಪಹರಿಸಿದ್ದಾರೆ. ಇದನ್ನು ಇರಾನ್‌ಗೆ ಹಾರಾಟ ನಡೆಸಿದ್ದಾರೆ ಎಂದು ಉಕ್ರೇನ್‌ನ ಉಪ ವಿದೇಶಾಂಗ ಸಚಿವ ಯೆವ್ಗೆನಿ ಯೆನಿನ್ ಆರೋಪಿಸಿದ್ದರು.

ಕಾಬೂಲ್‌ನಿಂದ ಉಕ್ರೇನ್ ವಿಮಾನ ಹೈಜಾಕ್ ಆಗಿಲ್ಲ; ಇಂಧನ ಖಾಲಿಯಾಗಿ ವಿಮಾನ ಬಂದಿತ್ತು ಎಂದ ಇರಾನ್
ಉಕ್ರೇನ್ ವಿಮಾನ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Aug 24, 2021 | 2:22 PM

Share

ಕಾಬೂಲ್:  ಕಾಬೂಲ್‌ನಿಂದ ಉಕ್ರೇನ್ ವಿಮಾನ ಹೈಜಾಕ್ ಆಗಿಲ್ಲ ಎಂದು ಇರಾನ್ ಹೇಳಿದೆ.  ಇಂಧನ ಖಾಲಿಯಾಗಿರುವ ಹಿನ್ನೆಲೆಯಲ್ಲಿ  ಉಕ್ರೇನ್ ವಿಮಾನ ಇರಾನ್‌ಗೆ ಬಂದಿತ್ತು. ಅದು  ಇಂಧನ ತುಂಬಿಸಿಕೊಂಡು ಉಕ್ರೇನ್‌ನತ್ತ ಹೋಗಿದೆ.  ಉಕ್ರೇನ್ ವಿಮಾನ ನಿನ್ನೆ ರಾತ್ರಿ 9.50ಕ್ಕೆ ಕೀವ್ ಏರ್‌ಪೋರ್ಟ್‌ ಗೆ ತಲುಪಿದೆ ಎಂದು ಇರಾನ್  ಹೇಳಿದೆ. 

ಅಫ್ಘಾನಿಸ್ತಾನದಿಂದ ಭಾನುವಾರ ಜನರನ್ನು  ಸ್ಥಳಾಂತರಿಸುತ್ತಿದ್ದ ಉಕ್ರೇನಿಯನ್ ವಿಮಾನವನ್ನು ಸಶಸ್ತ್ರ ಅಪಹರಣಕಾರರು ಅಪಹರಿಸಿದ್ದಾರೆ. ಇದನ್ನು ಇರಾನ್‌ಗೆ ಹಾರಾಟ ನಡೆಸಿದ್ದಾರೆ ಎಂದು ಉಕ್ರೇನ್‌ನ ಉಪ ವಿದೇಶಾಂಗ ಸಚಿವ ಯೆವ್ಗೆನಿ ಯೆನಿನ್ ಮಂಗಳವಾರ ರಷ್ಯಾದ ಟಿಎಎಸ್ಎಸ್  ಮಾಧ್ಯಮಕ್ಕೆ ತಿಳಿಸಿದ್ದರು. ಉಕ್ರೇನ್ ವಿಮಾನ ಹೈಜಾಕ್  ಆಗಿದೆ ಎಂಬ ಸುದ್ದಿ ಹಬ್ಬುತ್ತಲೇ  ವಿಮಾನ ಹೈಜಾಕ್ ಆಗಿಲ್ಲ ಎಂದು ಇರಾನ್ ಹೇಳಿದೆ.

“ಇದು ನಿನ್ನೆ 22:00 ಸ್ಥಳೀಯ ಸಮಯಕ್ಕೆ  ಸಂಭವಿಸಿದೆ, ವಿಮಾನವು” ಇಂಧನ ತುಂಬುವುದಕ್ಕಾಗಿ “ಮಶ್ಹಾದ್‌ಗೆ ಬಂದಿಳಿಯಿತು ಮತ್ತು ತಕ್ಷಣವೇ ಕೀವ್‌ಗೆ ಹೊರಟಿತು . ನಾವು ಉಕ್ರೇನಿಯನ್ ವಾದವನ್ನು  ನಿರಾಕರಿಸುತ್ತೇವೆ” ಎಂದು ಇರಾನಿನ ನಾಗರಿಕ ವಿಮಾನಯಾನ ಸಂಸ್ಥೆಯ ವಕ್ತಾರ ಮೊಹಮ್ಮದ್ ಹಸನ್ ಜಿಬಕ್ಷ್ ಐಎನ್ಎನ್ಎ (ILNA) ಸಂಸ್ಥೆಗೆ ತಿಳಿಸಿದರು.

ಕಳೆದ ಭಾನುವಾರ, ನಮ್ಮ ವಿಮಾನವನ್ನು ಇತರ ಜನರು ಅಪಹರಿಸಿದರು. ಮಂಗಳವಾರ ವಿಮಾನವು ಪ್ರಾಯೋಗಿಕವಾಗಿ ನಮ್ಮಿಂದ ಕದಿಯಲ್ಪಟ್ಟಿತು. ಇದು ಉಕ್ರೇನಿಯನ್ನರನ್ನು ಏರ್ ಲಿಫ್ಟಿಂಗ್ ಮಾಡುವ ಬದಲು ಅಪರಿಚಿತ ಪ್ರಯಾಣಿಕರ ಗುಂಪಿನೊಂದಿಗೆ ಇರಾನ್‌ಗೆ ಹಾರಿತು. ನಮ್ಮ ಮುಂದಿನ ಮೂರು ಸ್ಥಳಾಂತರಿಸುವ ಪ್ರಯತ್ನಗಳು ಯಶಸ್ವಿಯಾಗಲಿಲ್ಲ. ಏಕೆಂದರೆ ನಮ್ಮ ಜನರು ವಿಮಾನ ನಿಲ್ದಾಣಕ್ಕೆ ಪ್ರವೇಶಿಸಲು ಸಾಧ್ಯವಾಗಲಿಲ್ಲ ಎಂದು ಉಕ್ರೇನ್‌ನ ಉಪ ವಿದೇಶಾಂಗ ಸಚಿವ ಯೆವ್ಗೆನಿ ಯೆನಿನ್ ಮಂಗಳವಾರ ರಷ್ಯಾದ ಟಿಎಎಸ್ಎಸ್ (TASS)  ಮಾಧ್ಯಮ ಸಂಸ್ಥೆಗೆ ತಿಳಿಸಿದ್ದಾರೆ.

ಯೆವ್ಗೆನಿ ಯೆನಿನ್ ಪ್ರಕಾರ ಅಪಹರಣಕಾರರು ಶಸ್ತ್ರಸಜ್ಜಿತರಾಗಿದ್ದರು. ಆದಾಗ್ಯೂ, ಸಚಿವರು  ವಿಮಾನಕ್ಕೆ ಏನಾಯಿತು ಅಥವಾ ಉಕ್ರೇನ್ ಅದನ್ನು ಮರಳಿ ಪಡೆಯಲು ಪ್ರಯತ್ನಿಸುತ್ತಿದೆಯೇ  ಅಥವಾ ಉಕ್ರೇನಿಯನ್ ನಾಗರಿಕರು ಕಾಬೂಲ್‌ನಿಂದ ಹೇಗೆ ಮರಳಿದರು ಎಂಬುದನ್ನು ಹೇಳಿಲ್ಲ. ವಿದೇಶಾಂಗ ಸಚಿವ ಡಿಮಿಟ್ರಿ ಕುಲೆಬಾ ನೇತೃತ್ವದ ಇಡೀ ರಾಜತಾಂತ್ರಿಕ ಸೇವೆಯು ಇಡೀ ವಾರ “ಕ್ರ್ಯಾಶ್ ಟೆಸ್ಟ್ ಮೋಡ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ” ಎಂದು ಯೆನಿನ್ ಒತ್ತಿ ಹೇಳಿದರು.

ಇದನ್ನೂ ಓದಿ:  Ukraine Plane Hijacked ಉಕ್ರೇನ್ ವಿಮಾನ ಕಾಬೂಲ್​​ನಿಂದ ಹೈಜಾಕ್?

(Ukraine’s Deputy Foreign Minister has alleges Plane Hijacked and Flown to Iran Tehran Denies the claim)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ