ಉರ್ದು ಮಾತನಾಡುವ ವ್ಯಕ್ತಿಗಳಿಂದ ಕಾಬೂಲ್ ಕಚೇರಿ ಮೇಲೆ ದಾಳಿ; ಭಾರತೀಯ ವೀಸಾ, ಅಫ್ಘಾನ್ ಪಾಸ್​ಪೋರ್ಟ್ ವಶಪಡಿಸಿದ ದುಷ್ಕರ್ಮಿಗಳು

ಭವಿಷ್ಯದಲ್ಲಿ ಭಯೋತ್ಪಾದಕರಿಗೆ ನಕಲಿ ಪಾಸ್‌ಪೋರ್ಟ್‌ಗಳನ್ನು  ಮಾಡಲು ಈ ದಾಖಲೆಗಳನ್ನು ಬಳಸಬಹುದೆಂಬ ಗಂಭೀರ ಕಾಳಜಿಯಿರುವುದರಿಂದ ಭಾರತೀಯ ವಲಸೆಯ ಏಜೆನ್ಸಿಗಳು ಭಾರತೀಯ ವೀಸಾಗಳೊಂದಿಗೆ ಅಫ್ಘಾನ್ ಪಾಸ್‌ಪೋರ್ಟ್‌ಗಳನ್ನು ವಶಪಡಿಸಿಕೊಂಡಿವೆ.

ಉರ್ದು ಮಾತನಾಡುವ ವ್ಯಕ್ತಿಗಳಿಂದ ಕಾಬೂಲ್ ಕಚೇರಿ ಮೇಲೆ ದಾಳಿ; ಭಾರತೀಯ ವೀಸಾ, ಅಫ್ಘಾನ್ ಪಾಸ್​ಪೋರ್ಟ್ ವಶಪಡಿಸಿದ ದುಷ್ಕರ್ಮಿಗಳು
ತಾಲಿಬಾನ್ ಹೋರಾಟಗಾರರು
Follow us
| Updated By: ರಶ್ಮಿ ಕಲ್ಲಕಟ್ಟ

Updated on: Aug 25, 2021 | 3:44 PM

ಕಾಬೂಲ್:  ಉರ್ದು ಮಾತನಾಡುವ ಜನರ ಗುಂಪೊಂದು ಕಾಬೂಲ್ ನಲ್ಲಿರುವ ಕಚೇರಿಗಳಿಗೆ ನುಗ್ಗಿ ಮುದ್ರೆಯೊತ್ತಲಾದ ಭಾರತೀಯ ವೀಸಾಗಳೊಂದಿಗೆ ಹಲವಾರು ಸಂಖ್ಯೆಯ ಅಫಘಾನ್ ಪಾಸ್‌ಪೋರ್ಟ್‌ಗಳನ್ನು ವಶಪಡಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನದಲ್ಲಿ ಭಾರತೀಯ ಮಿಷನ್‌ಗಳ ಪರವಾಗಿ ಕಾಬೂಲ್‌ನಲ್ಲಿ ಭಾರತೀಯ ವಲಸೆ ಕಾರ್ಯಗಳನ್ನು ನಿರ್ವಹಿಸುವ ಭಾರತೀಯ ಭದ್ರತಾ ಏಜೆನ್ಸಿಗಳಲ್ಲಿ ಎಚ್ಚರಿಕೆ ಸೂಚನೆ ನೀಡಲಾಗಿದೆ.  ತಾಲಿಬಾನ್ ಕಾಬೂಲ್ ಅನ್ನು ವಶಪಡಿಸಿಕೊಂಡ ದಿನ ಅಂದರೆ ಆಗಸ್ಟ್ 15 ರಂದು ಈ ಘಟನೆ ಸಂಭವಿಸಿದೆ. ಈ ಬೆಳವಣಿಗೆಯ ಬಗ್ಗೆ ತಿಳಿದಿರುವ ವ್ಯಕ್ತಿಗಳ ಪ್ರಕಾರ  ಭವಿಷ್ಯದಲ್ಲಿ ಭಯೋತ್ಪಾದಕರಿಗೆ ನಕಲಿ ಪಾಸ್‌ಪೋರ್ಟ್‌ಗಳನ್ನು  ಮಾಡಲು ಈ ದಾಖಲೆಗಳನ್ನು ಬಳಸಬಹುದೆಂಬ ಗಂಭೀರ ಕಾಳಜಿಯಿರುವುದರಿಂದ ಭಾರತೀಯ ವಲಸೆಯ ಏಜೆನ್ಸಿಗಳು ಭಾರತೀಯ ವೀಸಾಗಳೊಂದಿಗೆ ಅಫ್ಘಾನ್ ಪಾಸ್‌ಪೋರ್ಟ್‌ಗಳನ್ನು ವಶಪಡಿಸಿಕೊಂಡಿವೆ. ಕಾಬೂಲ್‌ನಲ್ಲಿ ಭಾರತೀಯ ವೀಸಾ ಹೊರಗುತ್ತಿಗೆ ಏಜೆನ್ಸಿಯ ಮೇಲೆ ನಡೆದ ದಾಳಿಯಲ್ಲಿ ಯಾವ ಗುಂಪು ಭಾಗಿಯಾಗಿರಬಹುದು ಎಂಬುದು ಸ್ಪಷ್ಟವಾಗಿಲ್ಲವಾದರೂ, ಉರ್ದು ಮಾತನಾಡುವವರು ಪಾಕಿಸ್ತಾನದತ್ತ ಅನುಮಾನದ ಬೆರಳು ತೋರಿಸಿದರು ಎಂದು ಹಿಂದೂಸ್ತಾನ್  ಟೈಮ್ಸ್ ವರದಿ ಮಾಡಿದೆ.

“ಭಾರತೀಯ ವೀಸಾ ಹೊಂದಿರುವ ಅಫ್ಘಾನ್ ಪಾಸ್‌ಪೋರ್ಟ್‌ಗಳನ್ನು ಭಯೋತ್ಪಾದಕರು ಪಾಸ್‌ಪೋರ್ಟ್‌ಗಳನ್ನು ನಕಲಿ ಮಾಡಲು ಬಳಸಲಾಗುತ್ತದೆ ಎಂಬ  ಬಲವಾದ ಸಾಧ್ಯತೆಯಿದೆ. ರೈಸಿನಾ ಹಿಲ್ ಮತ್ತು ಭದ್ರತಾ ಏಜೆನ್ಸಿಗಳು ಘಟನೆಯ ಬಗ್ಗೆ ಏನೂ ಹೇಳಿಲ್ಲ.

ಕಾಬೂಲ್ ವೀಕ್ಷಕರ ಪ್ರಕಾರ, ಕಾಬೂಲ್ ಅನ್ನು ತಾಲಿಬಾನ್ ವಶಪಡಿಸಿಕೊಂಡ ಒಂದು ವಾರದ ನಂತರ, ಹಲವಾರು ಗುಂಪುಗಳು ಈಗ ರಾಜಧಾನಿ ಅಫ್ಘಾನಿಸ್ತಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಅವುಗಳಿಗಾಗಿ ದೊಡ್ಡ ಪ್ರಮಾಣದ ಹುಡುಕಾಟ ನಡೆಸಲಾಗುತ್ತಿದೆ. ಕಾಬೂಲ್‌ನಲ್ಲಿ ಟ್ರಾವೆಲ್ ಏಜೆನ್ಸಿಗಳು ಮತ್ತು ಅವುಗಳ ಮಾಲೀಕರ ಹುಡುಕಾಟದಲ್ಲಿ ಈ ಗುಂಪುಗಳು ಪಾಸ್‌ಪೋರ್ಟ್‌ಗಳು ಮತ್ತು ಇತರ ಪ್ರಯಾಣ ದಾಖಲೆಗಳನ್ನು ವಶಪಡಿಸಿಕೊಳ್ಳುತ್ತಿವೆ ಎಂದು ತಿಳಿದುಬಂದಿದೆ.

ಆಗಸ್ಟ್ 16 ರಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ರಾಷ್ಟ್ರೀಯ ಭದ್ರತಾ ತಂಡಗಳು ಸ್ಥಳಾಂತರ ಕಾರ್ಯವನ್ನು ಆರಂಭಿಸಿದಾಗ ಪ್ರತಿಯೊಬ್ಬ ಪ್ರಯಾಣಿಕನು ತನ್ನ ಹಿಂದಿನ ಮತ್ತು ಪ್ರಯಾಣದ ದಾಖಲೆಗಳನ್ನು ಪರೀಕ್ಷಿಸಬೇಕೆಂದು ಭಾರತೀಯ ಗೃಹ ಸಚಿವಾಲಯವು ಎಚ್ಚರಿಕೆ ನೀಡಿತ್ತು. ಕಾಬೂಲ್‌ನಲ್ಲಿರುವ ಭಾರತೀಯ ಮಿಷನ್ ಭಾರತೀಯ ವೀಸಾಗಳನ್ನು ನೀಡಿದ ಆಫ್ಘನ್ನರ ಹೆಸರನ್ನು ಮತ್ತು ವಿತರಣೆಗಾಗಿ ಹೊರಗುತ್ತಿಗೆ ಸಂಸ್ಥೆಗೆ ನೀಡಿರುವ ತನ್ನ ಡೇಟಾವನ್ನು ಹುಡುಕುತ್ತಿದೆ. ಡೇಟಾವನ್ನು ಹುಡುಕಲಾಗುತ್ತಿದೆ ಮತ್ತು ಹೆಸರುಗಳನ್ನು ಗುರುತಿಸಲಾಗುತ್ತಿದೆ ಇದರಿಂದ ಆ ಭಾರತೀಯ ವೀಸಾಗಳನ್ನು ರದ್ದುಗೊಳಿಸಬಹುದು ಎಂದು ಪ್ರಸ್ತುತ ಏಜೆನ್ಸಿ ಹೇಳಿದೆ.

ಇದನ್ನೂ ಓದಿ: ಅಫ್ಘಾನಿಸ್ತಾನದ ಮಾಜಿ ಸಚಿವ ಸಯ್ಯದ್ ಸಾದತ್​ ಈಗ ಜರ್ಮನಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್

ಇದನ್ನೂ ಓದಿ:  ಕಾಬೂಲ್​ನಿಂದ ಒಂದೇ ದಿನದಲ್ಲಿ 21,600 ಜನರನ್ನು ಸ್ಥಳಾಂತರಿಸಿದ ಅಮೆರಿಕ

(Urdu speaking persons attack Kabul office seize Afghan passports with Indian visas on August 15)

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ