AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ಕೊನೆಯ ಸೈನಿಕ ಅಫ್ಘಾನ್ ನೆಲದಲ್ಲಿ ಇರುವವರೆಗೂ ಸರ್ಕಾರ ರಚಿಸುವುದಿಲ್ಲ: ತಾಲಿಬಾನ್

ವಿದೇಶಿ ಪ್ರಜೆಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆಯ ಉಸ್ತುವಾರಿ ನೋಡಿಕೊಳ್ಳಲು ಅಮೆರಿಕ ಸೇರಿದಂತೆ ಹಲವು ದೇಶಗಳು ಮತ್ತೆ ಸೇನೆಯನ್ನು ಕಳುಹಿಸಿಕೊಟ್ಟಿವೆ.

ಅಮೆರಿಕದ ಕೊನೆಯ ಸೈನಿಕ ಅಫ್ಘಾನ್ ನೆಲದಲ್ಲಿ ಇರುವವರೆಗೂ ಸರ್ಕಾರ ರಚಿಸುವುದಿಲ್ಲ: ತಾಲಿಬಾನ್
ಕಾಬೂಲ್ ವಿಮಾನ ನಿಲ್ದಾಣದಲ್ಲಿ ಅಮೆರಿಕ ಯೋಧ
TV9 Web
| Edited By: |

Updated on: Aug 23, 2021 | 11:01 PM

Share

ಕಾಬೂಲ್: ಅಫ್ಘಾನಿಸ್ತಾನದಿಂದ ಅಮೆರಿಕ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳುವ ಅವಧಿಯನ್ನು ವಿಸ್ತರಿಸಬೇಕು ಎಂಬ ಪ್ರಸ್ತಾವವನ್ನು ತಾಲಿಬಾನ್ ಸಾರಾಸಗಟಾಗಿ ತಿರಸ್ಕರಿಸಿದೆ. ಈ ನಡುವೆ ಕಾಬೂಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೇಶ ಬಿಟ್ಟು ಹೊರಗೆ ಹೋಗಲು ಬಯಸುವವರು ಕಿಕ್ಕಿರಿದು ತುಂಬಿದ್ದಾರೆ. ಹೇಗಾದರೂ ಸರಿ ತಾಲಿಬಾನ್ ಆಡಳಿತದಿಂದ ತಪ್ಪಿಸಿಕೊಳ್ಳಬೇಕು ಎಂದು ಸಾವಿರಾರು ಜನರು ಹಾತೊರೆಯುತ್ತಿದ್ದಾರೆ. ವಿದೇಶಿ ಪ್ರಜೆಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆಯ ಉಸ್ತುವಾರಿ ನೋಡಿಕೊಳ್ಳಲು ಅಮೆರಿಕ ಸೇರಿದಂತೆ ಹಲವು ದೇಶಗಳು ಮತ್ತೆ ಸೇನೆಯನ್ನು ಕಳುಹಿಸಿಕೊಟ್ಟಿವೆ. ಅಮೆರಿಕ ಯೋಧರು ನೆಲೆ ನಿಲ್ಲುವ ಅವಧಿಯನ್ನು ಆಗಸ್ಟ್​ 31ರವರೆಗೂ ವಿಸ್ತರಿಸಬೇಕು ಎಂಬ ಒತ್ತಾಯವೂ ಪ್ರಬಲವಾಗುತ್ತಿದೆ.

ಆದರೆ ತಾಲಿಬಾನ್ ಈ ಪ್ರಸ್ತಾವವನ್ನು ಸಾರಾಸಗಟಾಗಿ ತಿರಸ್ಕರಿಸಿದೆ. ಈ ಕುರಿತು ಸ್ಕೈ ನ್ಯೂಸ್ ಸುದ್ದಿವಾಹಿನಿಗೆ ಪ್ರತಿಕ್ರಿಯಿಸಿರುವ ತಾಲಿಬಾನ್ ವಕ್ತಾರ ಸುಹೈಲ್ ಶಾಹೀನ್, ಒಪ್ಪಿತ ಅವಧಿಯಿಂದಾಚೆಗೂ ಅಫ್ಘಾನಿಸ್ತಾನದ ನೆಲದಲ್ಲಿ ಉಳಿಯುವುದನ್ನು ಸಹಿಸಲು ಆಗುವುದಿಲ್ಲ. ಇದು ಆಕ್ರಮಣವನ್ನು ಮುಂದುವರಿಸಿದಂತೆ ಎಂದು ಹೇಳಿದ್ದಾರೆ. ಜನರನ್ನು ಸ್ಥಳಾಂತರಿಸಲು ಅಮೆರಿಕ ಅಥವಾ ಬ್ರಿಟನ್​ಗೆ ಹೆಚ್ಚುವರಿ ಸಮಯ ಬೇಕು ಎಂದಾದರೆ ನಮ್ಮ ಉತ್ತರ ಇಲ್ಲ ಎಂದಾಗಿರುತ್ತದೆ. ನಿಗದಿತ ಅವಧಿಗಿಂತಲೂ ಹೆಚ್ಚು ಸಮಯ ಅವರು ಇಲ್ಲಿ ಉಳಿದರೆ ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ತಾಲಿಬಾನ್ ಎಚ್ಚರಿಸಿದೆ.

ಅಮೆರಿಕದ ಕಟ್ಟಕಡೆಯ ಯೋಧ ಅಫ್ಘಾನಿಸ್ತಾನ ನೆಲದಿಂದ ಹೊರಗೆ ಹೋಗುವವರೆಗೂ ಹೊಸ ಸರ್ಕಾರದ ರೂಪುರೇಷೆಯನ್ನಾಗಲಿ, ಸಚಿವ ಸಂಪುಟವನ್ನಾಗಲಿ ರೂಪಿಸುವುದಿಲ್ಲ ಎಂದು ತಾಲಿಬಾನ್ ಮೂಲಗಳನ್ನು ಉಲ್ಲೇಖಿಸಿ ಎಎಫ್​ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.

ಕಾಬೂಲ್ ವಿಮಾನ ನಿಲ್ದಾಣದ ಅಘಾತಕಾರಿ ದೃಶ್ಯಗಳು ಅಫ್ಘಾನಿಸ್ತಾನದಿಂದ ಹೊರಹೋಗಲು ನೂಕುನುಗ್ಗಲು ಉಂಟಾಗಿದ್ದು, ವಿಮಾನ ನಿಲ್ದಾಣದಲ್ಲಿ ಭಯಾನಕ ದೃಶ್ಯಗಳು ಕಾಣಿಸುತ್ತಿವೆ. ಈವರೆಗೆ ವಿಮಾನ ನಿಲ್ದಾಣದಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದಾರೆ. ಕಾಲ್ತುಳಿತಕ್ಕೆ ಸಿಲುಕಿ ಕೆಲವರು ಮೃತಪಟ್ಟಿದ್ದಾರೆ. ಇಬ್ಬರು ವಿಮಾನದಿಂದ ಬಿದ್ದು ಸತ್ತಿದ್ದಾರೆ.

ಸ್ಥಳೀಯ ಗಾರ್ಡ್​ಗಳು ಮತ್ತು ಅಪರಿಚಿತ ದುಷ್ಕರ್ಮಿಗಳೊಂದಿಗೆ ಸೋಮವಾರವೂ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಒಬ್ಬ ಅಫ್ಘಾನ್ ಪುರುಷ ಸಾವನ್ನಪ್ಪಿದ್ದಾನೆ ಎಂದು ಜರ್ಮನ್ ರಕ್ಷಣಾ ಇಲಾಖೆ ಹೇಳಿದೆ. ಜರ್ಮನ್ ಮತ್ತು ಅಮೆರಿಕ ಪಡೆಗಳು ಸಹ ಗುಂಡಿನ ಚಕಮಕಿಯಲ್ಲಿ ಪಾಲ್ಗೊಂಡಿದ್ದವು ಎಂದು ಹೇಳಿಕೆ ತಿಳಿಸಿದೆ.

1996ರಿಂದ 2001ರ ಅವಧಿಯಲ್ಲಿ ಆಡಳಿತ ನಡೆಸಿದ್ದ ತಾಲಿಬಾನ್ ಷರಿಯಾ ಕಾನೂನನ್ನು ಕಠಿಣ ರೀತಿಯಲ್ಲಿ ಜಾರಿಗೊಳಿಸಿತ್ತು. ಆ ಕರಾಳ ನೆನಪಿನಿಂದ ಇಂದಿಗೂ ವಿಶ್ವ ಹೊರ ಬಂದಿಲ್ಲ. ಹೀಗಾಗಿಯೇ ಜನರು ಅಫ್ಘಾನಿಸ್ತಾನದಿಂದ ಹೊರಗೆ ಹೋಗಲು ಹಾತೊರೆಯುತ್ತಿದ್ದಾರೆ. ಈ ಬಾರಿ ಕಾಬೂಲ್ ವಶಪಡಿಸಿಕೊಂಡ ನಂತರ ಹೇಳಿಕೆ ಬಿಡುಗಡೆ ಮಾಡಿದ್ದ ತಾಲಿಬಾನ್ ಸರ್ಕಾರಿ ಪಡೆಗಳು ಮತ್ತು ಅಧಿಕಾರಿಗಳಿಗೆ ಕ್ಷಮೆ ನೀಡಿರುವುದಾಗಿ ಹೇಳಿತ್ತು. ಮಹಿಳೆಯರಿಗೆ ಕೆಲಸ ಮಾಡಲು ಅವಕಾಶ ನೀಡುವ ಭರವಸೆಯನ್ನೂ ನೀಡಿತ್ತು.

(We will not form until Amerias Last Soldier in Afghanistan says Taliban)

ಇದನ್ನೂ ಓದಿ: ತಾಲಿಬಾನ್​ಗೆ ಪಂಜ್​ಶಿರ್ ಪ್ರಾಂತ್ಯದ ಸವಾಲು: ಫಲಿತಾಂಶದ ಬಗ್ಗೆ ವಿಶ್ವ ಸಮುದಾಯದಲ್ಲಿ ಕುತೂಹಲ

ಇದನ್ನೂ ಓದಿ: Panjshir: ತಾಲಿಬಾನ್ ಪಾಲಿಗೆ ಈವರೆಗೆ ಸವಾಲಾಗಿಯೇ ಉಳಿದಿರುವ ಅಫ್ಘಾನಿಸ್ತಾನದ ಪ್ರತಿರೋಧದ ಕಣಿವೆ ಪಂಜ್​ಶೀರ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್