AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಕ್ತಪಾತ ತಡೆಯಲು ಅಫ್ಘಾನಿಸ್ತಾನ ತೊರೆದೆ’ – ಅಶ್ರಫ್ ಘನಿ ಹೇಳಿಕೆ

Ashraf Ghani: ಇಂದಿನಿಂದ ಅಫ್ಘಾನಿಸ್ತಾನದ ಜನರ ರಕ್ಷಣೆ, ಗೌರವದ ಹೊಣೆಯನ್ನು ತಾಲಿಬಾನ್ ಹೊರಲಿದೆ ಎಂದು ಫೇಸ್ಬುಕ್ ಪೋಸ್ಟ್ ಮಾಡಿದ ಅಶ್ರಫ್ ಘನಿ ಹೇಳಿದ್ದಾರೆ.

‘ರಕ್ತಪಾತ ತಡೆಯಲು ಅಫ್ಘಾನಿಸ್ತಾನ ತೊರೆದೆ’ – ಅಶ್ರಫ್ ಘನಿ ಹೇಳಿಕೆ
ಅಶ್ರಫ್​ ಘನಿ
TV9 Web
| Updated By: shruti hegde|

Updated on:Aug 16, 2021 | 10:32 AM

Share

ಅಫ್ಘಾನಿಸ್ತಾನ (Afghanistan) ಅಧ್ಯಕ್ಷರ ಪ್ಯಾಲೆಸ್​ಗೆ ಉಗ್ರರು ದಾಳಿ ನಡೆಸಿ ಕಾಬೂಲ್ ತಾಲಿಬಾನ್(Taliban)  ವಶಕ್ಕೆ ಪಡೆದಿದ್ದರಿಂದ ರಕ್ತಪಾತವನ್ನು ತಡೆಯಲು ದೇಶವನ್ನು ತೊರೆದೆ ಎಂದು ಅಧ್ಯಕ್ಷ ಅಶ್ರಫ್ ಘನಿ (Ashraf Ghani) ಹೇಳಿಕೆ ನೀಡಿದ್ದಾರೆ. ಇಂದಿನಿಂದ ಅಫ್ಘಾನಿಸ್ತಾನದ ಜನರ ರಕ್ಷಣೆ, ಗೌರವದ ಹೊಣೆಯನ್ನು ತಾಲಿಬಾನ್ ಹೊರಲಿದೆ ಎಂದು ಫೇಸ್ಬುಕ್ ಪೋಸ್ಟ್ ಮಾಡಿದ ಅಶ್ರಫ್ ಘನಿ ಹೇಳಿದ್ದಾರೆ.

ನಾನು ಕಠಿಣವಾದ ಆಯ್ಕೆಯನ್ನು ಎದುರಿಸಬೇಕಾಯಿತು. ಕಳೆದ 20 ವರ್ಷಗಳಿಂದ ನನ್ನ ಜೀವನವನ್ನು ತ್ಯಜಿಸಿದ ದೇಶದ ಜನರನ್ನು ತೊರೆಯುವುದು ನನಗೆ ಕಷ್ಟವಾಯಿತು. 6 ಮಿಲಿಯನ್ ಜನರಿರುವ ನಗರದಲ್ಲಿ ರಕ್ತಪಾತ ನಡೆಯುವುದನ್ನು ತಡೆಯಲು ನಾನು ದೇಶವನ್ನು ತೊರೆಯಬೇಕಿತ್ತು. ದೇಶವನ್ನು ತೊರೆಯದಿದ್ದರೆ ಅನೇಕ ದೇಶಭಕ್ತರು ಪ್ರಾಣ ಕಳೆದುಕೊಳ್ಳಬೇಕಿತ್ತು. ಕಾಬೂಲ್ ನಗರವೇ ನಾಶವಾಗುತ್ತಿತ್ತು ಎಂದು ಹೇಳಿದ್ದಾರೆ.

ಅನೇಕ ಜನರು ಭಯದಲ್ಲಿದ್ದಾರೆ. ತಾಲಿಬಾನ್ ಅಫ್ಘಾನಿಸ್ತಾನದ ಎಲ್ಲಾ ಜನರು, ರಾಷ್ಟ್ರಗಳು, ವಿವಿಧ ವಲಯಗಳು, ಸಹೋದರಿಯರು ಮತ್ತು ಮಹಿಳೆಯರಿಗೆ ಕಾನೂನು ಬದ್ಧತೆ ಮತ್ತು ಜನರ ಹೃದಯ ಗೆಲ್ಲಲು ಭರವಸೆ ನೀಡುವುದು ಅಗತ್ಯವಾಗಿದೆ. ಸ್ಪಷ್ಟ ಯೋಜನೆಯನ್ನು ಮಾಡಿ ಮತ್ತು ಅದನ್ನು ಸಾರ್ವಜನಿಕರೊಂದಿಗೆ ಹಂಚಿಕೊಳ್ಳಿ. ನಾನು ಯಾವಾಗಲೂ ಬೌದ್ಧಿಕ ಕ್ಷಣ ಮತ್ತು ಅಭಿವೃದ್ಧಿಯ ಯೋಜನೆಗಳೊಂದಿಗೆ ರಾಷ್ಟ್ರ ಸೇವೆಯನ್ನು ಮುಂದುವರೆಸುತ್ತೇನೆ ಎಂದು ಅಶ್ರಫ್ ಘನಿ ಹೇಳಿದ್ದಾರೆ.

ಇದನ್ನೂ ಓದಿ:

ಭದ್ರತಾ ಪಡೆಯನ್ನು ಮತ್ತೆ ಸಜ್ಜುಗೊಳಿಸುವುದು ನಮ್ಮ ಆದ್ಯತೆ ಎಂದ ಅಫ್ಘಾನ್​ ಅಧ್ಯಕ್ಷ ಅಶ್ರಫ್​ ಘನಿ; ರಾಜೀನಾಮೆ ಮಾತಿಲ್ಲ

Published On - 10:29 am, Mon, 16 August 21

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?