AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

40 ನಿಮಿಷ ಕಾದರೂ ಬಾರದ ಪುಟಿನ್; ತಾಳ್ಮೆಗೆಟ್ಟು ರಷ್ಯಾ ಅಧ್ಯಕ್ಷರ ರೂಂಗೇ ನುಗ್ಗಿದ ಪಾಕ್ ಪ್ರಧಾನಿ

ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಲು 40 ನಿಮಿಷ ಕಾದರೂ ಪುಟಿನ್ ಬರಲಿಲ್ಲ. ಇದರಿಂದ ತಾಳ್ಮೆ ಕಳೆದುಕೊಂಡ ಅವರು ಆಹ್ವಾನ ಇಲ್ಲದಿದ್ದರೂ ಪುಟಿನ್ ಅವರ ಮೀಟಿಂಗ್ ನಡೆಯುತ್ತಿದ್ದ ಕೊಠಡಿಯೊಳಗೆ ನುಗ್ಗಿದ್ದಾರೆ. ಬಳಿಕ 10 ನಿಮಿಷ ಪುಟಿನ್ ಜೊತೆ ಮಾತುಕತೆ ನಡೆಸಿ ಅಲ್ಲಿಂದ ವಾಪಾಸ್ ಬಂದಿದ್ದಾರೆ. ಹಾಗಂತ, ಪುಟಿನ್ ಪಾಕ್ ಪ್ರಧಾನಿಯನ್ನು ನಿರ್ಲಕ್ಷ್ಯ ಮಾಡುತ್ತಿರುವುದು ಇದೇ ಮೊದಲೇನಲ್ಲ.

40 ನಿಮಿಷ ಕಾದರೂ ಬಾರದ ಪುಟಿನ್; ತಾಳ್ಮೆಗೆಟ್ಟು ರಷ್ಯಾ ಅಧ್ಯಕ್ಷರ ರೂಂಗೇ ನುಗ್ಗಿದ ಪಾಕ್ ಪ್ರಧಾನಿ
Pakistan Pm With Putin
ಸುಷ್ಮಾ ಚಕ್ರೆ
|

Updated on: Dec 12, 2025 | 10:09 PM

Share

ನವದೆಹಲಿ, ಡಿಸೆಂಬರ್ 12: ಟುರ್ಕಮೆನಿಸ್ತಾನದಲ್ಲಿ ನಡೆದ ಅಂತಾರಾಷ್ಟ್ರೀಯ ಸಮಾರಂಭದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Russia President Putin) ಅವರೊಂದಿಗಿನ ಸಭೆಗಾಗಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ 40 ನಿಮಿಷಗಳ ಕಾಲ ಕಾಯುತ್ತಾ ಕುಳಿತಿದ್ದರು. ಆದರೂ ಪುಟಿನ್ ತಮ್ಮ ಮೀಟಿಂಗ್ ಕೊಠಡಿಯಿಂದ ಹೊರಗೆ ಬರಲಿಲ್ಲ, ಪಾಕ್ ಪ್ರಧಾನಿಗೂ ಒಳಗೆ ಬರಲು ಸೂಚಿಸಲಿಲ್ಲ. ಚಡಪಡಿಕೆಯಿಂದ ಕುಳಿತಿದ್ದ ಪಾಕಿಸ್ತಾನದ ಪ್ರಧಾನಿ ಕೊನೆಗೆ ತಾಳ್ಮೆಗೆಟ್ಟು ತಾವೇ ಖುದ್ದಾಗಿ ಎದ್ದು ರಷ್ಯಾ ಅಧ್ಯಕ್ಷ ಪುಟಿನ್ ಅವರಿದ್ದ ರೂಂನೊಳಗೆ ಹೋಗಿದ್ದಾರೆ.

ಹಿಂದಿನ ಸೋವಿಯತ್ ರಾಷ್ಟ್ರದ ತಟಸ್ಥತೆಯ ಘೋಷಣೆಯ 30ನೇ ವಾರ್ಷಿಕೋತ್ಸವದ ಗೌರವಾರ್ಥವಾಗಿ ಈ ಕಾರ್ಯಕ್ರಮವನ್ನು ನಡೆಸಲಾಗಿತ್ತು. ಇದರಲ್ಲಿ ಭಾಗವಹಿಸಲು ರಷ್ಯಾ, ಟರ್ಕಿ, ಇರಾನ್ ಮತ್ತು ಪಾಕಿಸ್ತಾನದ ನಾಯಕರನ್ನು ಆಹ್ವಾನಿಸಲಾಗಿತ್ತು. ಈ ವೇಳೆ ರಷ್ಯಾ ಅಧ್ಯಕ್ಷ ಪುಟಿನ್ ಅವರ ಜೊತೆ ಮಾತನಾಡಲು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಕಾಯುತ್ತಿದ್ದರು. ಪುಟಿನ್ ಅವರೊಂದಿಗಿನ ನಿಗದಿತ ಮಾತುಕತೆಗೆ ಮುಂಚಿತವಾಗಿ ಪಕ್ಕದ ಕೋಣೆಯಲ್ಲಿ ಶೆಹಬಾಜ್ ಶರೀಫ್ ಅಸಹನೆಯಿಂದ ಕಾಯುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಇದನ್ನೂ ಓದಿ: ಪ್ರಧಾನಿ ಮೋದಿಯಿಂದ ಪುಟಿನ್​ಗೆ ಚಹಾ, ಬೆಳ್ಳಿ ಕುಸುರಿ, ಕಾಶ್ಮೀರಿ ಕೇಸರಿ, ಭಗವದ್ಗೀತೆ ಉಡುಗೊರೆ

ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಅವರೊಂದಿಗೆ ಸುಮಾರು 40 ನಿಮಿಷಗಳ ಕಾಲ ಕಾಯುತ್ತಿದ್ದ ಶೆಹಬಾಜ್ ಷರೀಫ್ ತಾಳ್ಮೆ ಕಳೆದುಕೊಂಡು ಪುಟಿನ್ ಅವರ ಮೀಟಿಂಗ್ ನಡೆಯುತ್ತಿದ್ದ ರೂಂನೊಳಗೆ ಹೋಗಲು ನಿರ್ಧರಿಸಿದರು. ಒಳಗೆ ಹೋದ ಅವರು 10 ನಿಮಿಷಗಳ ನಂತರ ಆ ರೂಂನಿಂದ ವಾಪಾಸ್ ಬಂದಿದ್ದಾರೆ.

ಈ ವೈರಲ್ ವಿಡಿಯೋ ಆನ್‌ಲೈನ್‌ನಲ್ಲಿ ಅಪಹಾಸ್ಯಕ್ಕೆ ಗುರಿಯಾಗಿದೆ. ಸಾಮಾಜಿಕ ಮಾಧ್ಯಮ ಬಳಕೆದಾರರು ಇದನ್ನು ಪಾಕಿಸ್ತಾನಕ್ಕಾದ ರಾಜತಾಂತ್ರಿಕ ಮುಜುಗರ ಎಂದು ಲೇವಡಿ ಮಾಡಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್