AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕದನ ವಿರಾಮ ಒಪ್ಪಂದದ ಬಳಿಕ ಗಾಜಾ ಪಟ್ಟಿಯ ಮೇಲೆ ವೈಮಾನಿಕ ದಾಳಿ ನಡೆಸಿದ ಇಸ್ರೇಲ್​

ಕೆಲವು ದಿನಗಳ ಹಿಂದಷ್ಟೇ 12 ವರ್ಷಗಳ ಬೆಂಜಮಿನ್​ ನೆತನ್ಯಾಹು ಅವರ ಅಧಿಕಾರ ಕೊನೆಗೊಂಡಿತು. ಇಸ್ರೇಲ್​ನಲ್ಲಿ ನೆತನ್ಯಾಹು ಸರಕಾರದ ಬಳಿಕ ಹೊಸ ಸರ್ಕಾರ ಬಂದ ಕೂಡಲೇ ಈ ದಾಳಿ ನಡೆದಿದೆ.

ಕದನ ವಿರಾಮ ಒಪ್ಪಂದದ ಬಳಿಕ ಗಾಜಾ ಪಟ್ಟಿಯ ಮೇಲೆ ವೈಮಾನಿಕ ದಾಳಿ ನಡೆಸಿದ ಇಸ್ರೇಲ್​
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 16, 2021 | 10:40 AM

Share

ಜೆರುಸಲೆಂ: ಗಾಜಾದಲ್ಲಿ ಪ್ಯಾಲೆಸ್ತೀನಿಯರು ಬೆಂಕಿ ಹಚ್ಚುವ ಆಕಾಶಬುಟ್ಟಿಗಳನ್ನು ಹಾರಿಸಿದ ಬಳಿಕ ಇಸ್ರೇಲ್​ ವಾಯುಪಡೆ ಬುಧವಾರ ಗಾಜಾ ಪ್ರದೇಶದಲ್ಲಿ ವೈಮಾನಿಕ ದಾಳಿ ನಡೆಸಿದೆ. ಮೇ 21ರಂದು ನಡೆದ ಕದಮ ವಿರಾಮದ ಒಪ್ಪಂದದ ಬಳಿಕ ಮೊದಲ ದಾಳಿ ಇದಾಗಿದೆ. ಕಳೆದ ಮೇ ತಿಂಗಳಿನಲ್ಲಿ ಇಸ್ರೇಲ್​ ಮತ್ತು ಪ್ಯಾಲೆಸ್ತೀನಿಯರ ನಡುವೆ 11 ದಿನಗಳ ಕಾಲ ಸಮರ ನಡೆದಿತ್ತು. ಕಾಳಗದಲ್ಲಿ ಇಸ್ರೇಲ್​ನ 13 ಮಂದಿ ಹಾಗೂ ಪ್ಯಾಲೆಸ್ತೀನಿಯರು 260 ಮಂದಿ ಸಾವಿಗೀಡಾಗಿದ್ದರು.

ಇಂದು ನಡೆದ ಕಾಳಗದಲ್ಲಿ ಇಸ್ರೇನ್​ನ ವಾಯುಪಡೆ ಗಾಜಾ ನಗರವಾದ ಖಾನ್​ ಯೂನೆಸ್​ನ ಪೂರ್ವ ಭಾಗವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ದಾಳಿಯಲ್ಲಿ, 66 ಮಕ್ಕಳು ಸೇರಿದಂತೆ 253 ಜನ ಪ್ಯಾಲೆಸ್ತೀನಿಯರು ಹಾಗೂ 5 ವರ್ಷದ ಬಾಲಕ ಮತ್ತು ಸೈನಿಕರು ಸೇರಿದಂತೆ 13 ಜನ ಇಸ್ರೇಲಿಯನ್ನರು ಸಾವಿಗೀಡಾಗಿದ್ದಾರೆ.

ಖಾನ್​ ಯೂನೆಸ್​ನಲ್ಲಿನ ಭಯೋತ್ಪಾದಕರಿಗೆ ಸೌಲಭ್ಯಗಳನ್ನು ಒದಗಿಸುವ ಜತೆಗೆ ಸಭೆಗಳು ನಡೆಯುತ್ತಿದ್ದ ಸ್ಥಳವನ್ನು ಗುರುಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ಕೆಲವು ದಿನಗಳ ಹಿಂದಷ್ಟೇ 12 ವರ್ಷಗಳ ಬೆಂಜಮಿನ್​ ನೆತನ್ಯಾಹು ಅವರ ಅಧಿಕಾರ ಕೊನೆಗೊಂಡಿತು. ಇಸ್ರೇಲ್​ನಲ್ಲಿ ನೆತನ್ಯಾಹು ಸರಕಾರದ ಬಳಿಕ ಹೊಸ ಸರ್ಕಾರ ಬಂದ ಕೂಡಲೇ ಈ ದಾಳಿ ನಡೆದಿದೆ.

ಇದನ್ನೂ ಓದಿ:

ಇಸ್ರೇಲ್: ರಾಜಕೀಯದ ಗೊಂದಲಕ್ಕೆ ಮೈತ್ರಿಯ ಮುಲಾಮು, ಸರ್ಕಾರದ ಭಾಗವಾದ ಅರಬ್ ಪಕ್ಷ

ಇಸ್ರೇಲ್​ ನೂತನ ಪ್ರಧಾನಿ ನಫ್ತಾಲಿ ಬೆನೆಟ್​​ರಿಗೆ ಅಭಿನಂದನೆ, ಮಾಜಿ ಪ್ರಧಾನಿ ಬೆಂಜಮಿನ್​ ನೆತನ್ಯಾಹೂರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ ಮೋದಿ

Published On - 10:38 am, Wed, 16 June 21

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್