AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ukraine-Russia War: ಹಿಟ್ಲರ್ ಆಕ್ರಮಣದ​ ಬಳಿಕ ಇದೇ ಮೊದಲ ಬಾರಿ ಭೀಕರ ಬಾಂಬ್​ ದಾಳಿಗೆ ತುತ್ತಾದ ಕೀವ್​, ಕಾರ್ಖಿವ್​ ನಗರಗಳು

ವರದಿಯ ಪ್ರಕಾರ ಹಿಟ್ಲರ್ ದಾಳಿಯ​ ಬಳಿಕ ಇದೇ ಮೊದಲ ಬಾರಿಗೆ ಉಕ್ರೇನ್​ ಪಟ್ಟಗಳ ಮೇಲೆ ಬಾಂಬ್​ ದಾಳಿ ನಡೆಸಲಾಗಿದೆ. ಇಂದು ನಡೆದ ಬಾಂಬ್​ ದಾಳಿಯಲ್ಲಿ ಕರ್ನಾಟಕದ ವಿದ್ಯಾರ್ಥಿ ಸೇರಿ 17 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Ukraine-Russia War: ಹಿಟ್ಲರ್ ಆಕ್ರಮಣದ​ ಬಳಿಕ ಇದೇ ಮೊದಲ ಬಾರಿ ಭೀಕರ ಬಾಂಬ್​ ದಾಳಿಗೆ ತುತ್ತಾದ ಕೀವ್​, ಕಾರ್ಖಿವ್​ ನಗರಗಳು
ಹಿಟ್ಲರ್ ​(ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Mar 01, 2022 | 4:47 PM

Share

ಉಕ್ರೇನ್​ನಲ್ಲಿ ಯುದ್ಧದ (Ukraine War) ವಾತಾವರಣ ಮುಂದುವರೆದಿದೆ. ಸತತ 6ನೇ ದಿನ ರಷ್ಯಾ(Russia) ಉಕ್ರೇನ್​ ಮೇಲೆ ಆಕ್ರಮಣ ಮುಂದುವರೆಸಿದೆ. ಇಂದೂ ಕೂಡ ಏಲ್​, ಬಾಂಬ್​ ದಾಳಿ ಮುಂದುವರೆದಿದೆ. ರಷ್ಯಾ ಪಡೆಯ ದಾಳಿಯಿಂದ ಉಕ್ರೇನ್ ​ನಗರದ ಅತಿದೊಡ್ಡ ನಗರಗಳಾಗ ಕೀವ್(Kyiv)​ ಮತ್ತು ಖಾರ್ಕಿವ್(Kharkiv)​ನಲ್ಲಿ ಇಡೀ ದಿನ ಬಾಂಬ್​ ಸ್ಫೋಟಗಳದ್ದೇ ಸದ್ದಾಗಿದೆ. ಇಂಡಿಯ ಟುಡೆ ವರದಿಯ ಪ್ರಕಾರ ಹಿಟ್ಲರ್​ ಬಳಿಕ ಇದೇ ಮೊದಲ ಬಾರಿಗೆ ಉಕ್ರೇನ್​ ಪಟ್ಟಣಗಳ ಮೇಲೆ ಬಾಂಬ್​ ದಾಳಿ ನಡೆಸಲಾಗಿದೆ. ಇಂದು ನಡೆದ ಬಾಂಬ್​ ದಾಳಿಯಲ್ಲಿ ಕರ್ನಾಟಕದ ವಿದ್ಯಾರ್ಥಿ ಸೇರಿ 17 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇಂದು ಕಾರ್ಖಿವ್​ನಲ್ಲಿರುವ ಸರ್ಕಾರದ ಕಚೇರಿಯ ಮೇಲೆ ಶೆಲ್​ ದಾಳಿ ನಡೆಸಲಾಗಿದೆ. 20 ನೇ ಶತಮಾನದ ಮಧ್ಯಭಾಗದಲ್ಲಿ ಅಡಾಲ್ಫ್ ಹಿಟ್ಲರ್ ಯುರೋಪ್‌ನಲ್ಲಿ ಎರಡನೇ ಮಹಾಯುದ್ಧವನ್ನು ಪ್ರಾರಂಭಿಸಿದಾಗ ಕೈವ್ ಮತ್ತು ಕಾರ್ಖಿವ್ ನಗರಗಳು ಕೊನೆಯ ಬಾರಿಗೆ ಬಾಂಬ್‌ ದಾಳಿಗೆ ಒಳಗಾಗಿ ಕಂಗೆಟ್ಟಿದ್ದವು. ಅದಾದ ಬಳಿಕ ಈಗ ರಷ್ಯಾ ದಾಳಿಗೆ ನಗರಗಳು ಬೆಚ್ಚಿಬಿದ್ದಿವೆ. ಜನ ಜೀವನ ಬೀದಿಗೆ ಬಂದು, ಕ್ಷಣಕ್ಷಣಕ್ಕೂ ನಾಗರಿಕರು ಆತಂಕದಲ್ಲಿ ಬದುಕುವಂತೆ ಮಾಡಿದೆ. ಕಾರ್ಖಿವ್​ನತ್ತ ರಷ್ಯಾ ಪಡೆ ಧಾವಿಸುತ್ತಿರುವ ಸಾಟಲೈಟ್​ ದೃಶ್ಯಗಳು  ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.

ಅಕ್ಟೋಬರ್ 1941 ರಲ್ಲಿ ಕಾರ್ಖಿವ್ ನಗರಕ್ಕಾಗಿ ಜರ್ಮನಿ ಮತ್ತು ಸೋವಿಯತ್ ಒಕ್ಕೂಟದ ನಡುವೆ ನಡೆಯಿತು. ಜರ್ಮನ್ ಸೇನೆಯು ತನ್ನ ಗಡಿಯನ್ನು ತಲುಪಿದ ನಾಲ್ಕು ದಿನಗಳಲ್ಲಿ ನಗರವನ್ನು ವಶಪಡಿಸಿಕೊಂಡಿತ್ತು, ಈ ವೇಳೆ 30 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಇದೀಗ  2ನೇ ಮಹಾಯುದ್ಧದ ಸಂದರ್ಭದಲ್ಲಿ ಕಂಡಿದ್ದ ಆಕ್ರಮಣದ ಭೀಕರತೆಯನ್ನು ಉಕ್ರೇನ್​ ನಗರಗಳು ರಷ್ಯಾ ದಾಳಿಯಿಂದ ಕಂಡಿವೆ ಎಂದು ವರದಿಯಾಗಿದೆ.

ಇದನ್ನೂ ಓದಿ:

ರಷ್ಯಾ ದಾಳಿಗೆ ಚೂರು ಚೂರಾದ ಉಕ್ರೇನ್​ ಜನರ ಜೀವನ: ಇಲ್ಲಿದೆ ಯುದ್ಧನಾಡಿನ ಫೋಟೋಗಳು

Published On - 4:41 pm, Tue, 1 March 22

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ