AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ukraine-Russia War: ಹಿಟ್ಲರ್ ಆಕ್ರಮಣದ​ ಬಳಿಕ ಇದೇ ಮೊದಲ ಬಾರಿ ಭೀಕರ ಬಾಂಬ್​ ದಾಳಿಗೆ ತುತ್ತಾದ ಕೀವ್​, ಕಾರ್ಖಿವ್​ ನಗರಗಳು

ವರದಿಯ ಪ್ರಕಾರ ಹಿಟ್ಲರ್ ದಾಳಿಯ​ ಬಳಿಕ ಇದೇ ಮೊದಲ ಬಾರಿಗೆ ಉಕ್ರೇನ್​ ಪಟ್ಟಗಳ ಮೇಲೆ ಬಾಂಬ್​ ದಾಳಿ ನಡೆಸಲಾಗಿದೆ. ಇಂದು ನಡೆದ ಬಾಂಬ್​ ದಾಳಿಯಲ್ಲಿ ಕರ್ನಾಟಕದ ವಿದ್ಯಾರ್ಥಿ ಸೇರಿ 17 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Ukraine-Russia War: ಹಿಟ್ಲರ್ ಆಕ್ರಮಣದ​ ಬಳಿಕ ಇದೇ ಮೊದಲ ಬಾರಿ ಭೀಕರ ಬಾಂಬ್​ ದಾಳಿಗೆ ತುತ್ತಾದ ಕೀವ್​, ಕಾರ್ಖಿವ್​ ನಗರಗಳು
ಹಿಟ್ಲರ್ ​(ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: Pavitra Bhat Jigalemane

Updated on:Mar 01, 2022 | 4:47 PM

ಉಕ್ರೇನ್​ನಲ್ಲಿ ಯುದ್ಧದ (Ukraine War) ವಾತಾವರಣ ಮುಂದುವರೆದಿದೆ. ಸತತ 6ನೇ ದಿನ ರಷ್ಯಾ(Russia) ಉಕ್ರೇನ್​ ಮೇಲೆ ಆಕ್ರಮಣ ಮುಂದುವರೆಸಿದೆ. ಇಂದೂ ಕೂಡ ಏಲ್​, ಬಾಂಬ್​ ದಾಳಿ ಮುಂದುವರೆದಿದೆ. ರಷ್ಯಾ ಪಡೆಯ ದಾಳಿಯಿಂದ ಉಕ್ರೇನ್ ​ನಗರದ ಅತಿದೊಡ್ಡ ನಗರಗಳಾಗ ಕೀವ್(Kyiv)​ ಮತ್ತು ಖಾರ್ಕಿವ್(Kharkiv)​ನಲ್ಲಿ ಇಡೀ ದಿನ ಬಾಂಬ್​ ಸ್ಫೋಟಗಳದ್ದೇ ಸದ್ದಾಗಿದೆ. ಇಂಡಿಯ ಟುಡೆ ವರದಿಯ ಪ್ರಕಾರ ಹಿಟ್ಲರ್​ ಬಳಿಕ ಇದೇ ಮೊದಲ ಬಾರಿಗೆ ಉಕ್ರೇನ್​ ಪಟ್ಟಣಗಳ ಮೇಲೆ ಬಾಂಬ್​ ದಾಳಿ ನಡೆಸಲಾಗಿದೆ. ಇಂದು ನಡೆದ ಬಾಂಬ್​ ದಾಳಿಯಲ್ಲಿ ಕರ್ನಾಟಕದ ವಿದ್ಯಾರ್ಥಿ ಸೇರಿ 17 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇಂದು ಕಾರ್ಖಿವ್​ನಲ್ಲಿರುವ ಸರ್ಕಾರದ ಕಚೇರಿಯ ಮೇಲೆ ಶೆಲ್​ ದಾಳಿ ನಡೆಸಲಾಗಿದೆ. 20 ನೇ ಶತಮಾನದ ಮಧ್ಯಭಾಗದಲ್ಲಿ ಅಡಾಲ್ಫ್ ಹಿಟ್ಲರ್ ಯುರೋಪ್‌ನಲ್ಲಿ ಎರಡನೇ ಮಹಾಯುದ್ಧವನ್ನು ಪ್ರಾರಂಭಿಸಿದಾಗ ಕೈವ್ ಮತ್ತು ಕಾರ್ಖಿವ್ ನಗರಗಳು ಕೊನೆಯ ಬಾರಿಗೆ ಬಾಂಬ್‌ ದಾಳಿಗೆ ಒಳಗಾಗಿ ಕಂಗೆಟ್ಟಿದ್ದವು. ಅದಾದ ಬಳಿಕ ಈಗ ರಷ್ಯಾ ದಾಳಿಗೆ ನಗರಗಳು ಬೆಚ್ಚಿಬಿದ್ದಿವೆ. ಜನ ಜೀವನ ಬೀದಿಗೆ ಬಂದು, ಕ್ಷಣಕ್ಷಣಕ್ಕೂ ನಾಗರಿಕರು ಆತಂಕದಲ್ಲಿ ಬದುಕುವಂತೆ ಮಾಡಿದೆ. ಕಾರ್ಖಿವ್​ನತ್ತ ರಷ್ಯಾ ಪಡೆ ಧಾವಿಸುತ್ತಿರುವ ಸಾಟಲೈಟ್​ ದೃಶ್ಯಗಳು  ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.

ಅಕ್ಟೋಬರ್ 1941 ರಲ್ಲಿ ಕಾರ್ಖಿವ್ ನಗರಕ್ಕಾಗಿ ಜರ್ಮನಿ ಮತ್ತು ಸೋವಿಯತ್ ಒಕ್ಕೂಟದ ನಡುವೆ ನಡೆಯಿತು. ಜರ್ಮನ್ ಸೇನೆಯು ತನ್ನ ಗಡಿಯನ್ನು ತಲುಪಿದ ನಾಲ್ಕು ದಿನಗಳಲ್ಲಿ ನಗರವನ್ನು ವಶಪಡಿಸಿಕೊಂಡಿತ್ತು, ಈ ವೇಳೆ 30 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಇದೀಗ  2ನೇ ಮಹಾಯುದ್ಧದ ಸಂದರ್ಭದಲ್ಲಿ ಕಂಡಿದ್ದ ಆಕ್ರಮಣದ ಭೀಕರತೆಯನ್ನು ಉಕ್ರೇನ್​ ನಗರಗಳು ರಷ್ಯಾ ದಾಳಿಯಿಂದ ಕಂಡಿವೆ ಎಂದು ವರದಿಯಾಗಿದೆ.

ಇದನ್ನೂ ಓದಿ:

ರಷ್ಯಾ ದಾಳಿಗೆ ಚೂರು ಚೂರಾದ ಉಕ್ರೇನ್​ ಜನರ ಜೀವನ: ಇಲ್ಲಿದೆ ಯುದ್ಧನಾಡಿನ ಫೋಟೋಗಳು

Published On - 4:41 pm, Tue, 1 March 22

ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!