AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಿಮೆಯಾಗುತ್ತಾ ಭಾರತ-ಪಾಕಿಸ್ತಾನ ನಡುವಿನ ಉದ್ವಿಗ್ನತೆ; ಎರಡೂ ದೇಶಗಳ ನಿಲುವೇನು?

ಪಾಕಿಸ್ತಾನ ಮತ್ತು ಭಾರತ ಇಂದು ಪರಸ್ಪರ ಮಿಲಿಟರಿ ಸ್ಥಾಪನೆಗಳ ವಿರುದ್ಧ ದಾಳಿ ಮತ್ತು ಪ್ರತಿದಾಳಿಗಳನ್ನು ಪ್ರಾರಂಭಿಸಿವೆ. ಪರಮಾಣು ಶಸ್ತ್ರಸಜ್ಜಿತ ಅಕ್ಕಪಕ್ಕದ ದೇಶಗಳು ಶಾಂತಿ ಮಾತುಕತೆಗಳನ್ನು ಪ್ರಾರಂಭಿಸಲು ಮತ್ತು 1999ರ ಬಳಿಕ ನಡೆಯುತ್ತಿರುವ ಅತ್ಯಂತ ತೀವ್ರವಾದ ಸಂಘರ್ಷವನ್ನು ತಗ್ಗಿಸಲು ಅಮೆರಿಕ ಕರೆ ನೀಡಿದೆ. ಪಾಕಿಸ್ತಾನ ಮಿಲಿಟರಿ ತನ್ನ ಪರಮಾಣು ಶಸ್ತ್ರಾಸ್ತ್ರಗಳ ಮೇಲ್ವಿಚಾರಣೆಯ ಉನ್ನತ ಮಿಲಿಟರಿಯನ್ನು ಭೇಟಿಯಾಗಲಿದೆ ಎಂದು ಹೇಳಿದಾಗ ದೇಶಗಳ ಪರಮಾಣು ಶಸ್ತ್ರಾಗಾರಗಳು ಕಾರ್ಯರೂಪಕ್ಕೆ ಬರಬಹುದೆಂಬ ಭಯ ಹೆಚ್ಚಾಯಿತು. ಆದರೆ ಪಾಕಿಸ್ತಾನದ ರಕ್ಷಣಾ ಸಚಿವರು ನಂತರ ಅಂತಹ ಯಾವುದೇ ಸಭೆಯನ್ನು ನಿಗದಿಪಡಿಸಲಾಗಿಲ್ಲ ಎಂದು ಹೇಳಿದರು.

ಕಡಿಮೆಯಾಗುತ್ತಾ ಭಾರತ-ಪಾಕಿಸ್ತಾನ ನಡುವಿನ ಉದ್ವಿಗ್ನತೆ; ಎರಡೂ ದೇಶಗಳ ನಿಲುವೇನು?
Minister Jaishankar With Pakistan Pm
Follow us
ಸುಷ್ಮಾ ಚಕ್ರೆ
|

Updated on: May 10, 2025 | 5:15 PM

ಇಸ್ಲಾಮಾಬಾದ್, ಮೇ 10: ಭಾರತದ ಪ್ರತೀಕಾರವನ್ನು ಎದುರಿಸುತ್ತಿರುವ ಪಾಕಿಸ್ತಾನ ಆಪರೇಷನ್ ಸಿಂಧೂರ್ (Operation Sindoor) ನಂತರದ ಮೊದಲ ಬಾರಿಗೆ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿದೆ ಎನ್ನಲಾಗಿದೆ. ಪಾಕಿಸ್ತಾನದೊಳಗಿನ ಪರಿಸ್ಥಿತಿ ಬಹಳ ಕೆಟ್ಟದಾಗಿದ್ದು, ಇದೇ ಕಾರಣಕ್ಕೆ ಪಾಕಿಸ್ತಾನ ಭಾರತದೊಂದಿಗೆ ಸಂಪರ್ಕ ಸಾಧಿಸಲು ಪ್ರಯತ್ನಿಸಲಾಗುತ್ತಿದೆ, ಅದಕ್ಕಾಗಿ ಬೇರೆ ದೇಶಗಳನ್ನು ಮಧ್ಯಸ್ಥಿಕೆ ವಹಿಸಲು ಒತ್ತಾಯಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಎರಡು ದಿನಗಳಿಂದ ಪರಸ್ಪರ ವೈಮಾನಿಕ ದಾಳಿ ನಡೆಸಿಕೊಳ್ಳುತ್ತಿದ್ದ ಭಾರತ ಮತ್ತು ಪಾಕಿಸ್ತಾನ ಇದೀಗ ದಾಳಿಯಿಂದ ಹೆಜ್ಜೆ ಹಿಂದಿಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಪಾಕಿಸ್ತಾನದ ವಿದೇಶಾಂಗ ಸಚಿವ ಮೊಹಮ್ಮದ್ ಇಶಾಕ್ ದಾರ್ ಈ ಬಗ್ಗೆ ಸ್ಥಳೀಯ ದೂರದರ್ಶನಕ್ಕೆ ತಿಳಿಸಿದ್ದು, ಭಾರತ ಇಲ್ಲಿಗೇ ನಿಲ್ಲಿಸಿದರೆ ನಾವು ಕೂಡ ಈ ದಾಳಿಯನ್ನು ಇಲ್ಲಿಗೇ ನಿಲ್ಲಿಸಲು ಯೋಚಿಸುತ್ತೇವೆ ಎಂದು ಹೇಳಿದ್ದಾರೆ. ಪಾಕಿಸ್ತಾನದ ಮಿಲಿಟರಿ ದಾಳಿಗಳ ಬಗ್ಗೆ ಭಾರತೀಯ ಸೇನೆ ಇಂದು ಸುದ್ದಿಗೋಷ್ಠಿ ನಡೆಸಿ, “ಎಲ್ಲಾ ಪ್ರತಿಕೂಲ ಕ್ರಮಗಳನ್ನು ಪರಿಣಾಮಕಾರಿಯಾಗಿ ಎದುರಿಸಲಾಗಿದೆ ಮತ್ತು ಸೂಕ್ತವಾಗಿ ಪ್ರತಿಕ್ರಿಯಿಸಲಾಗಿದೆ” ಎಂದು ಹೇಳಿದೆ.

ಇದನ್ನೂ ಓದಿ: Shastra Puja: ಭಾರತೀಯ ಸೇನೆಯು ಪ್ರತಿ ವರ್ಷ ಆಚರಿಸುವ ಆಯುಧ ಪೂಜೆಯ ಬಗ್ಗೆ ಇಲ್ಲಿದೆ ಮಾಹಿತಿ

ಇದನ್ನೂ ಓದಿ
Image
ಸೂಕ್ಷ್ಮ ಸಂದರ್ಭದಲ್ಲಿ ಏನೋನೋ ಮಾತನಾಡಿದ್ರೆ ಏನೇನು ಅವಾಂತರವಾಗುತ್ತೆ ನೋಡಿ
Image
ಭಾರತ-ಪಾಕ್​ ಉದ್ವಿಗ್ನತೆ ಶಮನಕ್ಕೆ ಜೈಶಂಕರ್ ಜತೆ ಮಾತುಕತೆ
Image
ಪಾಕಿಸ್ತಾನದ ಸುಳ್ಳಿನ ಸರಮಾಲೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಭಾರತ
Image
ಪಾಕಿಸ್ತಾನದ ನಾಲ್ಕು ವಾಯುನೆಲೆಗಳ ಮೇಲೆ ದಾಳಿ ನಡೆಸಿದ ಭಾರತ

ವಿಶ್ವದ ಅತ್ಯಂತ ಅಪಾಯಕಾರಿ ಮತ್ತು ಹೆಚ್ಚು ಜನಸಂಖ್ಯೆ ಹೊಂದಿರುವ ಪರಮಾಣು ಸ್ಫೋಟ ಪ್ರದೇಶಗಳಲ್ಲಿ ಒಂದಾದ ಪರಮಾಣು ಶಸ್ತ್ರಾಸ್ತ್ರಗಳ ಬಳಕೆಗೆ ಪ್ರತಿಸ್ಪರ್ಧಿಗಳ ನಡುವಿನ ಸಂಘರ್ಷವು ಕಾರಣವಾಗಬಹುದು ಎಂದು ವಿಶ್ಲೇಷಕರು ಮತ್ತು ರಾಜತಾಂತ್ರಿಕರು ಬಹಳ ಹಿಂದಿನಿಂದಲೂ ಭಯಪಡುತ್ತಿದ್ದಾರೆ. ಆದರೆ, ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್, “ಯಾವುದೇ ತಕ್ಷಣದ ಪರಮಾಣು ಬೆದರಿಕೆಯನ್ನು ತಳ್ಳಿಹಾಕಿದ್ದಾರೆ. ಅದು ಕೊನೆಯ ಸಾಧ್ಯತೆ. ಆ ಬಗ್ಗೆ ಈಗೇನೂ ಯೋಚಿಸಿಲ್ಲ. ನಾವು ಆ ಹಂತಕ್ಕೆ ಹೋಗುವ ಮೊದಲು ಉದ್ವಿಗ್ನತೆ ಕಡಿಮೆಯಾಗುತ್ತದೆ ಎಂದು ಭಾವಿಸಿದ್ದೇನೆ. ರಾಷ್ಟ್ರೀಯ ಕಮಾಂಡ್ ಪ್ರಾಧಿಕಾರದ ಯಾವುದೇ ಸಭೆ ನಡೆದಿಲ್ಲ, ಅಥವಾ ಅಂತಹ ಯಾವುದೇ ಸಭೆಯನ್ನು ನಿಗದಿಪಡಿಸಲಾಗಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಿಮ್ಮ ಮುಂದಿನ ದಾಳಿಯನ್ನು ಯುದ್ಧದ ಕೃತ್ಯವೆಂದು ಪರಿಗಣಿಸುತ್ತೇವೆ; ಪಾಕಿಸ್ತಾನಕ್ಕೆ ಭಾರತ ಖಡಕ್ ಎಚ್ಚರಿಕೆ

ದಾಳಿ ನಿಲ್ಲಿಸುವ ಬಗ್ಗೆ ಭಾರತ ಅಥವಾ ಪಾಕಿಸ್ತಾನ ಸರ್ಕಾರಗಳಿಂದ ಯಾವುದೇ ಅಧಿಕೃತ ದೃಢೀಕರಣ ಬಂದಿಲ್ಲವಾದರೂ, ಪಾಕಿಸ್ತಾನದ ನಿಲುವಿನಲ್ಲಿ ಸಂಭಾವ್ಯ ಬದಲಾವಣೆಯನ್ನು ಮೂಲಗಳು ಸೂಚಿಸಿವೆ. ಬಹುಶಃ ನಡೆಯುತ್ತಿರುವ ಬಿಕ್ಕಟ್ಟಿನ ತೀವ್ರತೆಯನ್ನು ಒಪ್ಪಿಕೊಂಡು ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನ ರಾಜತಾಂತ್ರಿಕ ಮಾರ್ಗವನ್ನು ಹುಡುಕುತ್ತಿವೆ. ಇದಕ್ಕೂ ಮೊದಲು, ಉನ್ನತ ಗುಪ್ತಚರ ಮೂಲಗಳು ಭಾರತವು ಅಂತಾರಾಷ್ಟ್ರೀಯ ಗಡಿ ಮತ್ತು ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ತಾನದ ಮಿಲಿಟರಿ ಮೂಲಸೌಕರ್ಯದ ಮೇಲೆ ಗಣನೀಯ ಹಾನಿಯನ್ನುಂಟುಮಾಡಿದೆ ಎಂದು ತಿಳಿಸಿವೆ. ಗುರುವಾರ ರಾತ್ರಿ ಪಾಕಿಸ್ತಾನದ ಅಪ್ರಚೋದಿತ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ