AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತವು ರಷ್ಯಾ-ಉಕ್ರೇನ್ ಯುದ್ಧವನ್ನು ತಡೆಯಬಹುದು, ಮೋದಿ ಮೇಲೆ ವಿಶ್ವಾಸ ವ್ಯಕ್ತಪಡಿಸಿದ ಮೆಲೋನಿ

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಂತರ ಇದೀಗ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಕೂಡ ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವಲ್ಲಿ ಭಾರತ ಪ್ರಮುಖ ಪಾತ್ರ ವಹಿಸಬಹುದು ಎಂದು ಹೇಳಿದ್ದಾರೆ. ಫೆಬ್ರವರಿ 2022 ರಿಂದ ರಷ್ಯಾ ಮತ್ತು ಉಕ್ರೇನ್ ಯುದ್ಧದಲ್ಲಿ ತೊಡಗಿವೆ.

ಭಾರತವು ರಷ್ಯಾ-ಉಕ್ರೇನ್ ಯುದ್ಧವನ್ನು ತಡೆಯಬಹುದು, ಮೋದಿ ಮೇಲೆ ವಿಶ್ವಾಸ ವ್ಯಕ್ತಪಡಿಸಿದ ಮೆಲೋನಿ
ನರೇಂದ್ರ ಮೋದಿImage Credit source: Moneycontrol
ನಯನಾ ರಾಜೀವ್
|

Updated on: Sep 08, 2024 | 9:01 AM

Share

ಉಕ್ರೇನ್-ರಷ್ಯಾ ಸಂಘರ್ಷವನ್ನು ಭಾರತ ಕೊನೆಗೊಳಿಸಬಹುದು ಎಂದು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಉಕ್ರೇನ್‌ನಲ್ಲಿನ ಸಂಘರ್ಷವನ್ನು ಪರಿಹರಿಸುವಲ್ಲಿ ಭಾರತ ಮತ್ತು ಚೀನಾದಂತಹ ದೇಶಗಳು ಪ್ರಮುಖ ಪಾತ್ರ ವಹಿಸಬಹುದು ಎಂದಿದ್ದಾರೆ.

ಉತ್ತರ ಇಟಲಿಯ ಸೆರ್ನೊಬಿಯೊ ನಗರದ ಅಂಬ್ರೊಸೆಟ್ಟಿ ಫೋರಮ್‌ನಲ್ಲಿ ಶನಿವಾರ ಮೆಲೋನಿ ಈ ಹೇಳಿಕೆಯನ್ನು ನೀಡಿದ್ದಾರೆ. ಅವರು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಸಭೆ ನಡೆಸಿದರು.

ಇದಕ್ಕೂ ಮುನ್ನ, ಈ ಪ್ರದೇಶದಲ್ಲಿ ನಡೆಯುತ್ತಿರುವ ಬಿಕ್ಕಟ್ಟನ್ನು ಪರಿಹರಿಸುವಲ್ಲಿ ಭಾರತದ ಪ್ರಯತ್ನಗಳ ಬಗ್ಗೆ ರಷ್ಯಾ ಅಧ್ಯಕ್ಷ ಪುಟಿನ್ ಪ್ರತಿಕ್ರಿಯಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ರಷ್ಯಾ ಮತ್ತು ಉಕ್ರೇನ್ ಪ್ರವಾಸದ ನಂತರ ಇದೀಗ ಇಡೀ ವಿಶ್ವದ ಕಣ್ಣು ಭಾರತ ಹಾಗೂ ಪ್ರಧಾನಿ ಮೋದಿಯತ್ತ ನೆಟ್ಟಿದೆ.

ಈ ಯುದ್ಧವು ಕೊನೆಗೊಳ್ಳುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಲಾಗುತ್ತಿದೆ. ನಿನ್ನೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕೂಡ ಈ ಯುದ್ಧದಲ್ಲಿ ಮಧ್ಯಸ್ಥಿಕೆ ವಹಿಸುವ ದೇಶಗಳ ಬಗ್ಗೆ ಮಾತನಾಡಿದ್ದರು. ಪುಟಿನ್ ಭಾರತ ಮಾತ್ರವಲ್ಲದೆ ಚೀನಾ ಮತ್ತು ಬ್ರೆಜಿಲ್ ಕೂಡ ಮಧ್ಯಸ್ಥಿಕೆ ವಹಿಸುವಂತೆ ಕೇಳಿಕೊಂಡಿದ್ದಾರೆ.

ಮತ್ತಷ್ಟು ಓದಿ: PM Modi: ಕೈ ಮುಗಿದು ನಮಸ್ಕರಿಸಿ ಮೋದಿಯನ್ನು ಶೃಂಗಸಭೆಗೆ ಬರಮಾಡಿಕೊಂಡ ಇಟಲಿ ಪ್ರಧಾನಿ ಮೆಲೋನಿ

ಆದರೆ ಇಡೀ ಜಗತ್ತೇ ಭಾರತ ಮತ್ತು ಪ್ರಧಾನಿ ಮೋದಿಯತ್ತ ನೋಡುತ್ತಿದ್ದು ಅವರಿಂದ ಮಾತ್ರ ಈ ಯುದ್ಧವನ್ನು ನಿಲ್ಲಿಸಲು ಸಾಧ್ಯ ಎಂದು ಹೇಳುತ್ತಿದ್ದಾರೆ. ಪುಟಿನ್ ಉಕ್ರೇನ್ ಜೊತೆಗಿನ ಮಾತುಕತೆಯ ಬಗ್ಗೆ ಬಹಿರಂಗವಾಗಿ ಏನನ್ನೂ ಹೇಳಿರಲಿಲ್ಲ. ಆದರೆ ಈಗ ಉಕ್ರೇನ್ ಜೊತೆ ಮಾತುಕತೆಗೆ ಸಿದ್ಧ ಎಂದು ಪುಟಿನ್ ಹೇಳಿದ್ದಾರೆ.

ರಷ್ಯಾ-ಉಕ್ರೇನ್ ಯುದ್ಧವನ್ನು ನಿಲ್ಲಿಸಲು, ಭಾರತವು ಎರಡೂ ದೇಶಗಳಿಂದ ಶಾಂತಿಗಾಗಿ ನಿರಂತರವಾಗಿ ಮನವಿ ಮಾಡುತ್ತಿದೆ. ಜಗತ್ತಿನಲ್ಲಿ ಹೆಚ್ಚುತ್ತಿರುವ ಶಕ್ತಿಯಿಂದಾಗಿ, ಭಾರತಕ್ಕೆ ಈ ಯುದ್ಧವನ್ನು ನಿಲ್ಲಿಸುವ ಸಾಮರ್ಥ್ಯವಿದೆ ಎಂದು ಎಲ್ಲರೂ ಭಾವಿಸುತ್ತಾರೆ. ರಷ್ಯಾ ಬಿಟ್ಟರೆ ಭಾರತವೂ ಅಮೆರಿಕದೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ, ಇದರಿಂದಾಗಿ ಅಮೆರಿಕ ಕೂಡ ಭಾರತದ ಪ್ರಸ್ತಾವನೆಗೆ ಪ್ರಾಮುಖ್ಯತೆ ನೀಡಲಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್