Sign In

By signing in or creating an account, you agree with Associated Broadcasting Company's Terms & Conditions and Privacy Policy.

Dalai Lama: ತನ್ನ ನಾಲಿಗೆ ಚೀಪು ಎಂದಿದ್ದ ವಿಚಾರ: ಬಾಲಕ ಹಾಗೂ ಕುಟುಂಬದ ಬಳಿ ಕ್ಷಮೆ ಯಾಚಿಸಿದ ದಲೈ ಲಾಮ

ಬಾಲಕನೊಬ್ಬನಿಗೆ ಮುತ್ತು ಕೊಟ್ಟು ತನ್ನ ನಾಲಿಗೆಯನ್ನು ಚೀಪು ಎಂದಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಾಲಕ ಹಾಗೂ ಕುಟುಂಬದ ಬಳಿ ಟಿಬೆಟಿಯನ್ ಧರ್ಮಗುರು ದಲೈಲಾಮ ಕ್ಷಮೆಯಾಚಿಸಿದ್ದಾರೆ. ಟಿಬೆಟಿಯನ್ ಧರ್ಮಗುರು ದಲೈಲಾಮಾ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.

Dalai Lama: ತನ್ನ ನಾಲಿಗೆ ಚೀಪು ಎಂದಿದ್ದ ವಿಚಾರ: ಬಾಲಕ ಹಾಗೂ ಕುಟುಂಬದ ಬಳಿ ಕ್ಷಮೆ ಯಾಚಿಸಿದ ದಲೈ ಲಾಮ
ದಲೈ ಲಾಮಾImage Credit source: NDTV
Follow us
ನಯನಾ ರಾಜೀವ್
|

Updated on: Apr 10, 2023 | 12:39 PM

ಬಾಲಕನೊಬ್ಬನಿಗೆ ಮುತ್ತು ಕೊಟ್ಟು ತನ್ನ ನಾಲಿಗೆಯನ್ನು ಚೀಪು ಎಂದಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಾಲಕ ಹಾಗೂ ಕುಟುಂಬದ ಬಳಿ ಟಿಬೆಟಿಯನ್ ಧರ್ಮಗುರು ದಲೈ ಲಾಮ(Dalai Lama) ಕ್ಷಮೆಯಾಚಿಸಿದ್ದಾರೆ. ಟಿಬೆಟಿಯನ್ ಧರ್ಮಗುರು ದಲೈಲಾಮಾ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಬಾಲಕೊಬ್ಬನ ಬಾಯಿಗೆ ಮುತ್ತಿಟ್ಟು ತನ್ನ ನಾಲಿಗೆಯನ್ನು ಚೀಪುವಂತೆ ಹೇಳಿದ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ತೀವ್ರ ವಿರೋಧ ವ್ಯಕ್ತವಾಗಿದೆ. ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆ ಬಂದಿದ್ದ ಭಾರತೀಯ ಬಾಲಕನಿಗೆ ಮುತ್ತಿಟ್ಟು ನೀನು ನನ್ನ ನಾಲಿಗೆ ಚೀಪುವೆಯಾ ಎಂದು ದಲೈಲಾಮಾ ಕೇಳಿದ್ದರು.

ತಾನು ಭೇಟಿಯಾಗುವ ಜನರ ಬಳಿ ಆಗಾಗ ತಮಾಷೆ ಮಾಡುತ್ತಾ ಕೀಟಲೆ ಮಾಡುತ್ತಿರುತ್ತೇನೆ ಆದರೆ ಅದನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದಿದ್ದಾರೆ.

ಈ ವಿಡಿಯೋವನ್ನು ಜೂಸ್ಟ್​ ಬ್ರೋಕರ್ ಎಂಬ ಟ್ವಿಟ್ಟರ್ ಬಳಕೆದಾರ ಹಂಚಿಕೊಂಡಿದ್ದು, ದಲೈಲಾಮಾರ ಈ ವರ್ತನೆಗೆ ಹಿಂದಿನ ಉದ್ದೇಶವೇನೆಂದು ಎಲ್ಲರೂ ಪ್ರಶ್ನಿಸಿದ್ದಾರೆ. ಅನೇಕರು ಈ ವರ್ತನೆಯನ್ನು ಕಟುವಾಗಿ ಟೀಕಿಸಿದ್ದಾರೆ.

ಮತ್ತಷ್ಟು ಓದಿ: Dalai Lama Video: ಬಾಲಕನಿಗೆ ಮುತ್ತಿಟ್ಟು, ತಮ್ಮ ನಾಲಿಗೆ ಚೀಪುವಂತೆ ಹೇಳಿದ ದಲೈ ಲಾಮಾ: ನೆಟ್ಟಿಗರು ಗರಂ

ಬೌದ್ಧರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಗುವೊಂದು ದಲೈಲಾಮಾ ಅವರನ್ನು ಅಪ್ಪಿಕೊಳ್ಳುವ ಇಚ್ಛೆಯನ್ನು ವ್ಯಕ್ತಪಡಿಸಿತ್ತು ಎಂದು ಹೇಳಲಾಗಿದೆ. ನಂತರ ದಲೈಲಾಮಾ ಮಗುವನ್ನು ಕರೆದರು. ಮಗುವಿನೊಂದಿಗೆ ಮಾತನಾಡುವಾಗ, ದಲೈ ಲಾಮಾ ಮೊದಲು ಅವನ ತುಟಿಗಳನ್ನು ಚುಂಬಿಸಿದರು ಮತ್ತು ನಂತರ ಅವರ ನಾಲಿಗೆಯನ್ನು ಹೊರತೆಗೆದು ನನ್ನ ನಾಲಿಗೆಯನ್ನು ನೆಕ್ಕುವಂತೆ ಹೇಳಿದ್ದರು.

ದೇಶದಲ್ಲಿ ಮಕ್ಕಳ ಕೆನ್ನೆಗೆ ಮುತ್ತು ಕೊಡುವುದು ಆಕ್ಷೇಪಾರ್ಹವಲ್ಲ ಆದರೆ ಭಾರತೀಯ ಸಂಪ್ರದಾಯವಾದಿಗಳು ಸಾರ್ವಜನಿಕವಾಗಿ ಚುಂಬಿಸುವುದನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಪಾಶ್ಚಿಮಾತ್ಯ ದೇಶಗಳಲ್ಲಿ ಇದು ಸಾಮಾನ್ಯವೇ ಆಗಿರಬಹುದು. ಆದರೆ ಅಲ್ಲಿಯೂ ಕೂಡ ಹಿರಿಯರಿಗೆ ಸೀಮಿತವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ