AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ ಅಧ್ಯಕ್ಷ ಜೋ ಬೈಡನ್ ಪತ್ನಿ ಜಿಲ್​ಗೆ ಕೊರೊನಾ ಸೋಂಕು, ಬೈಡನ್ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದು ಅನುಮಾನ

ಅಮೆರಿಕ ಅಧ್ಯಕ್ಷ ಜೋ ಬೈಡನ್ ಪತ್ನಿ ಜಿಲ್​ಗೆ ಕೊರೊನಾ ಸೋಂಕು ತಗುಲಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಆದರೆ ಜೋ ಬೈಡನ್​ ಅವರ ದೇಹದಲ್ಲಿ ಸೋಂಕು ಪತ್ತೆಯಾಗಿಲ್ಲ. ಜಿಲ್ ಬೈಡನ್​ಗೆ ಕಳೆದ ವರ್ಷದ ಆಗಸ್ಟ್​ನಲ್ಲಿ ಕೊರೊನಾ ಸೋಂಕು ತಗುಲಿತ್ತು. ಇನ್ನು ಜೋ ಬೈಡನ್​ನ್​ಗೆ 2022ರ ಜುಲೈ ತಿಂಗಳಲ್ಲಿ ಸೋಂಕು ತಗುಲಿತ್ತು.

ಅಮೆರಿಕ ಅಧ್ಯಕ್ಷ ಜೋ ಬೈಡನ್ ಪತ್ನಿ ಜಿಲ್​ಗೆ ಕೊರೊನಾ ಸೋಂಕು, ಬೈಡನ್ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದು ಅನುಮಾನ
ಜೋ ಬೈಡನ್Image Credit source: India.com
ನಯನಾ ರಾಜೀವ್
|

Updated on: Sep 05, 2023 | 8:13 AM

Share

ಅಮೆರಿಕ ಅಧ್ಯಕ್ಷ ಜೋ ಬೈಡನ್(Joe Biden) ಪತ್ನಿ ಜಿಲ್​ಗೆ ಕೊರೊನಾ ಸೋಂಕು ತಗುಲಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಆದರೆ ಜೋ ಬೈಡನ್​ ಅವರ ದೇಹದಲ್ಲಿ ಸೋಂಕು ಪತ್ತೆಯಾಗಿಲ್ಲ. ಜಿಲ್ ಬೈಡನ್​ಗೆ ಕಳೆದ ವರ್ಷದ ಆಗಸ್ಟ್​ನಲ್ಲಿ ಕೊರೊನಾ ಸೋಂಕು ತಗುಲಿತ್ತು. ಇನ್ನು ಜೋ ಬೈಡನ್​ನ್​ಗೆ 2022ರ ಜುಲೈ ತಿಂಗಳಲ್ಲಿ ಸೋಂಕು ತಗುಲಿತ್ತು. ಜಿಲ್ ಬೈಡನ್ ಡೆಲವೇರ್‌ನ ರೆಹೋಬೋತ್ ಬೀಚ್‌ನಲ್ಲಿರುವ ಅವರ ಮನೆಯಲ್ಲಿ ಇರಲಿದ್ದಾರೆ. ಜಿಲ್​ಗೆ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿವೆ. ಅಧ್ಯಕ್ಷ ಜೋ ಬೈಡನ್​ಗೂ ಕೊರೊನಾ ಪರೀಕ್ಷೆ ನಡೆಸಲಾಯಿತು, ರೋಗ ಲಕ್ಷಣಗಳ ಮೇಲ್ವಿಚಾರಣೆ ಮಾಡಲಿದ್ದಾರೆ.

ವಿಶ್ವದ 43 ದೇಶಗಳ ಪ್ರತಿನಿಧಿಗಳು ಭಾರತದಲ್ಲಿ ಉಪಸ್ಥಿತರಿರುತ್ತಾರೆ 43 ದೇಶಗಳ ಮುಖ್ಯಸ್ಥರು, ಸಂಸ್ಥೆಗಳು ಮತ್ತು ಪ್ರಪಂಚದಾದ್ಯಂತದ ಅವರ ನಿಯೋಗಗಳು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. G20 ರಾಷ್ಟ್ರಗಳಲ್ಲದೆ, 9 ಇತರ ದೇಶಗಳ ಮುಖ್ಯಸ್ಥರು ಮತ್ತು 14 ಅಂತಾರಾರಾಷ್ಟ್ರೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಶೃಂಗಸಭೆಯಲ್ಲಿ ಅತಿಥಿಗಳಾಗಿ ಭಾಗವಹಿಸಲು ಆಹ್ವಾನಿಸಲಾಗಿದೆ.

ಸೆಪ್ಟೆಂಬರ್ 7ಕ್ಕೆ ದೆಹಲಿ ತಲುಪಲಿದ್ದಾರೆ ಜೋ ಬೈಡನ್ ಜಿ 20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಮೆರಿಕ ಅಧ್ಯಕ್ಷ ಜೋ ಬೈಡನ್ ಸೆ..7ರಂದು ದೆಹಲಿ ತಲುಪಲಿದ್ದಾರೆ. ಅಧ್ಯಕ್ಷರಾದ ಬಳಿಕ ಜೋ ಬೈಡನ್ ಭಾರತಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡುತ್ತಿದ್ದಾರೆ. ಜಿ20 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬೈಡನ್ ದ್ವಿಪಕ್ಷೀಯ ಸಭೆಯನ್ನು ನಡೆಸಲಿದ್ದಾರೆ.

ಮತ್ತಷ್ಟು ಓದಿ: ಜಿ20 ಶೃಂಗಸಭೆ: ದೆಹಲಿಯ ಈ ಪ್ರಸಿದ್ಧ ಹೋಟೆಲ್​ಗಳಲ್ಲಿ ಉಳಿಯಲಿದ್ದಾರೆ ಜೋ ಬೈಡನ್ ಸೇರಿದಂತೆ ಇತರೆ ವಿಶ್ವ ನಾಯಕರು

ಇದಾದ ಬಳಿಕ ಜೋ ಬೈಡನ್ ಸೆ.9 ಹಾಗೂ 10ರಂದು ನಡೆಯಲಿರುವ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬೈಡನ್​ ಐಟಿಸಿ ಮೌರ್ಯ ಹೋಟೆಲ್​ನಲ್ಲಿ ತಂಗಲಿದ್ದಾರೆ, ಐಟಿಸಿ ಮೌರ್ಯ ಹೋಟೆಲ್​ನ 14ನೇ ಮಹಡಿಯಲ್ಲಿ ಬೈಡನ್ ಉಳಿದುಕೊಳ್ಳಲಿದ್ದಾರೆ, ಸುಮಾರು 4,600 ಚದರಡಿ ವಿಸ್ತೀರ್ಣದ ರೂಂ ಅದಾಗಿದೆ.

ಇನ್ನು ಸೆಪ್ಟೆಂಬರ್ 9-10ರಂದು ದೆಹಲಿಯಲ್ಲಿ ಜಿ20 ಶೃಂಗಸಭೆ ನಡೆಯಲಿದ್ದು, ಅಮೆರಿಕ ಅಧ್ಯಕ್ಷ ಜೋ ಬೈಡನ್ ಸೇರಿದಂತೆ ವಿಶ್ವದ ಅನೇಕ ನಾಯಕರನ್ನು ಆಹ್ವಾನಿಸಲಾಗಿದೆ. ಈಗಾಗಲೇ ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್ ಭಾರತಕ್ಕೆ ಬರುತ್ತಿಲ್ಲ ಎಂದು ಖಚಿತವಾಗಿದೆ. ಇನ್ನು ಜೋ ಬೈಡನ್ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ