AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Abu Dhabi: ಅಪಘಾತಕ್ಕೀಡಾದ ಏರ್​ ಆಂಬುಲೆನ್ಸ್​; ಇಬ್ಬರು ಪೈಲಟ್​ ಸೇರಿ ನಾಲ್ವರ ದುರ್ಮರಣ

ಘಟನೆ ನಡೆದದ್ದು ಎಲ್ಲಿ? ಅಪಘಾತಕ್ಕೆ ಕಾರಣವೇನು ಎಂಬ ಬಗ್ಗೆ ಅಬುಧಾಬಿ ಪೊಲೀಸರು ಇನ್ನೂ ಸ್ಪಷ್ಟವಾದ ಮಾಹಿತಿ ನೀಡಿಲ್ಲ. ಟ್ವೀಟ್​ ಮೂಲಕ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.

Abu Dhabi: ಅಪಘಾತಕ್ಕೀಡಾದ ಏರ್​ ಆಂಬುಲೆನ್ಸ್​; ಇಬ್ಬರು ಪೈಲಟ್​ ಸೇರಿ ನಾಲ್ವರ ದುರ್ಮರಣ
ಏರ್​ ಆಂಬುಲೆನ್ಸ್​ ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on: Oct 02, 2021 | 4:47 PM

Share

ಅಬುಧಾಬಿ: ಏರ್​ ಆಂಬುಲೆನ್ಸ್ (UAE Air Ambulance Crash)​ವೊಂದು ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟ ದುರ್ಘಟನೆ ಯುನೈಟೆಡ್ ಅರಬ್​​​ ಎಮಿರೇಟ್ಸ್​​ನ ರಾಜಧಾನಿ ಅಬುಧಾಬಿಯಲ್ಲಿ ನಡೆದಿದೆ. ಎಮಿರೇಟ್​ ಪೊಲೀಸರೇ ಈ ಏರ್​ ಆಂಬುಲೆನ್ಸ್​​ನ್ನು ಹಾರಿಸಿದ್ದರು. ಅಂದರೆ ಅವರ ಸೂಚನೆ ಮೇರೆಗೇ ಈ ಆಂಬುಲೆನ್ಸ್​ ಪ್ರಯಾಣ ಮಾಡುತ್ತಿತ್ತು. ಶನಿವಾರ ದುರಂತ ನಡೆದಿದ್ದು, ಇದರಲ್ಲಿದ್ದ ಇಬ್ಬರು ಪೈಲಟ್​ಗಳು, ಒಬ್ಬ ವೈದ್ಯ ಮತ್ತು ಒಬ್ಬ ನರ್ಸ್​ ಸಾವನ್ನಪ್ಪಿದ್ದಾರೆ. ಆದರೆ ಘಟನೆ ನಡೆದದ್ದು ಎಲ್ಲಿ? ಅಪಘಾತಕ್ಕೆ ಕಾರಣವೇನು ಎಂಬ ಬಗ್ಗೆ ಪೊಲೀಸರು ಇನ್ನೂ ಮಾಹಿತಿ ನೀಡಿಲ್ಲ.

ಏರ್​ ಆಂಬುಲೆನ್ಸ್ ಅಪಘಾತದ ಬಗ್ಗೆ ಅರೇಬಿಕ್ ಭಾಷೆಯಲ್ಲಿ ಟ್ವೀಟ್ ಮಾಡಿರುವ ಅಬುಧಾಬಿ ಪೊಲೀಸರು, ದುರಂತದಲ್ಲಿ ಇಬ್ಬರು ಪೈಲಟ್​ಗಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಮೃತರನ್ನು ಖಮಿಸ್ ಸಯೀದ್ ಅಲ್-ಹೋಲಿ, ಮೊಹಮ್ಮದ್ ಅಲ್-ರಶೀದಿ, ಶಾಹಿದ್ ಫಾರೂಕ್ ಘೋಲಂ ಮತ್ತು ಜೋಯೆಲ್ ಕ್ಯುಯಿ ಸಕರ್ ಮಿಂಟೊ ಎಂದು ಗುರುತಿಸಲಾಗಿದೆ ಎಂದು ಹೇಳಿದ್ದಾರೆ. ಆದರೆ ಘಟನೆಯ ಬಗ್ಗೆ ಸ್ಪಷ್ಟ ಮಾಹಿತಿ ಇನ್ನೂ ಹೊರಬಿದ್ದಿಲ್ಲ. ಏರ್​ ಆಂಬುಲೆನ್ಸ್ ಪತನವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಎಮಿರೇಟ್ಸ್​ ಪೊಲೀಸರು, ದಟ್ಟವಾದ ಮಂಜು ಇರುವ ಕಾರಣ ಯುನೈಟೆಡ್​ ಅರಬ್ ಎಮಿರೇಟ್ಸ್​​ನಾದ್ಯಂತ ಹೆಚ್ಚಿನ ವೇಗವನ್ನು ನಿಷೇಧಿಸಿದ್ದಾರೆ. ದುರಂತದಲ್ಲಿ ಮೃತರಾದವರ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಹಾಗೇ, ಮೃತರಾದ ಎಲ್ಲರೂ ತಮ್ಮ ಸಹೋದ್ಯೋಗಿಗಳೇ ಆಗಿದ್ದು, ಕರ್ತವ್ಯದಲ್ಲಿ ಇದ್ದರು ಎಂದೂ ತಿಳಿಸಿದ್ದಾರೆ. ಅಬುಧಾಬಿಯಲ್ಲಿ ಮರಳು ಬಿರುಗಾಳಿಯಿಂದಾಗಿ ಪದೇಪದೆ ಇಂಥ ದುರಂತಗಳು ನಡೆಯುತ್ತಿರುತ್ತವೆ.

ಇದನ್ನೂ ಓದಿ: ನಾಲ್ಕು ವ್ಯಕ್ತಿಗಳು, 20 ಜಾನುವಾರುಗಳನ್ನು ಕೊಂದ ನರಭಕ್ಷಕ ಹುಲಿಯ ಬೇಟೆಗೆ ಅರಣ್ಯ ಇಲಾಖೆ ಆದೇಶ

2 ವರ್ಷಗಳಲ್ಲಿ, 1.2 ಲಕ್ಷ ಹಳ್ಳಿಗಳ 5 ಕೋಟಿ ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕ; ಜಲ ಜೀವನ್​ ಮಿಷನ್​ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್