AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Abu Dhabi: ಅಪಘಾತಕ್ಕೀಡಾದ ಏರ್​ ಆಂಬುಲೆನ್ಸ್​; ಇಬ್ಬರು ಪೈಲಟ್​ ಸೇರಿ ನಾಲ್ವರ ದುರ್ಮರಣ

ಘಟನೆ ನಡೆದದ್ದು ಎಲ್ಲಿ? ಅಪಘಾತಕ್ಕೆ ಕಾರಣವೇನು ಎಂಬ ಬಗ್ಗೆ ಅಬುಧಾಬಿ ಪೊಲೀಸರು ಇನ್ನೂ ಸ್ಪಷ್ಟವಾದ ಮಾಹಿತಿ ನೀಡಿಲ್ಲ. ಟ್ವೀಟ್​ ಮೂಲಕ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.

Abu Dhabi: ಅಪಘಾತಕ್ಕೀಡಾದ ಏರ್​ ಆಂಬುಲೆನ್ಸ್​; ಇಬ್ಬರು ಪೈಲಟ್​ ಸೇರಿ ನಾಲ್ವರ ದುರ್ಮರಣ
ಏರ್​ ಆಂಬುಲೆನ್ಸ್​ ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 02, 2021 | 4:47 PM

Share

ಅಬುಧಾಬಿ: ಏರ್​ ಆಂಬುಲೆನ್ಸ್ (UAE Air Ambulance Crash)​ವೊಂದು ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟ ದುರ್ಘಟನೆ ಯುನೈಟೆಡ್ ಅರಬ್​​​ ಎಮಿರೇಟ್ಸ್​​ನ ರಾಜಧಾನಿ ಅಬುಧಾಬಿಯಲ್ಲಿ ನಡೆದಿದೆ. ಎಮಿರೇಟ್​ ಪೊಲೀಸರೇ ಈ ಏರ್​ ಆಂಬುಲೆನ್ಸ್​​ನ್ನು ಹಾರಿಸಿದ್ದರು. ಅಂದರೆ ಅವರ ಸೂಚನೆ ಮೇರೆಗೇ ಈ ಆಂಬುಲೆನ್ಸ್​ ಪ್ರಯಾಣ ಮಾಡುತ್ತಿತ್ತು. ಶನಿವಾರ ದುರಂತ ನಡೆದಿದ್ದು, ಇದರಲ್ಲಿದ್ದ ಇಬ್ಬರು ಪೈಲಟ್​ಗಳು, ಒಬ್ಬ ವೈದ್ಯ ಮತ್ತು ಒಬ್ಬ ನರ್ಸ್​ ಸಾವನ್ನಪ್ಪಿದ್ದಾರೆ. ಆದರೆ ಘಟನೆ ನಡೆದದ್ದು ಎಲ್ಲಿ? ಅಪಘಾತಕ್ಕೆ ಕಾರಣವೇನು ಎಂಬ ಬಗ್ಗೆ ಪೊಲೀಸರು ಇನ್ನೂ ಮಾಹಿತಿ ನೀಡಿಲ್ಲ.

ಏರ್​ ಆಂಬುಲೆನ್ಸ್ ಅಪಘಾತದ ಬಗ್ಗೆ ಅರೇಬಿಕ್ ಭಾಷೆಯಲ್ಲಿ ಟ್ವೀಟ್ ಮಾಡಿರುವ ಅಬುಧಾಬಿ ಪೊಲೀಸರು, ದುರಂತದಲ್ಲಿ ಇಬ್ಬರು ಪೈಲಟ್​ಗಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಮೃತರನ್ನು ಖಮಿಸ್ ಸಯೀದ್ ಅಲ್-ಹೋಲಿ, ಮೊಹಮ್ಮದ್ ಅಲ್-ರಶೀದಿ, ಶಾಹಿದ್ ಫಾರೂಕ್ ಘೋಲಂ ಮತ್ತು ಜೋಯೆಲ್ ಕ್ಯುಯಿ ಸಕರ್ ಮಿಂಟೊ ಎಂದು ಗುರುತಿಸಲಾಗಿದೆ ಎಂದು ಹೇಳಿದ್ದಾರೆ. ಆದರೆ ಘಟನೆಯ ಬಗ್ಗೆ ಸ್ಪಷ್ಟ ಮಾಹಿತಿ ಇನ್ನೂ ಹೊರಬಿದ್ದಿಲ್ಲ. ಏರ್​ ಆಂಬುಲೆನ್ಸ್ ಪತನವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಎಮಿರೇಟ್ಸ್​ ಪೊಲೀಸರು, ದಟ್ಟವಾದ ಮಂಜು ಇರುವ ಕಾರಣ ಯುನೈಟೆಡ್​ ಅರಬ್ ಎಮಿರೇಟ್ಸ್​​ನಾದ್ಯಂತ ಹೆಚ್ಚಿನ ವೇಗವನ್ನು ನಿಷೇಧಿಸಿದ್ದಾರೆ. ದುರಂತದಲ್ಲಿ ಮೃತರಾದವರ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಹಾಗೇ, ಮೃತರಾದ ಎಲ್ಲರೂ ತಮ್ಮ ಸಹೋದ್ಯೋಗಿಗಳೇ ಆಗಿದ್ದು, ಕರ್ತವ್ಯದಲ್ಲಿ ಇದ್ದರು ಎಂದೂ ತಿಳಿಸಿದ್ದಾರೆ. ಅಬುಧಾಬಿಯಲ್ಲಿ ಮರಳು ಬಿರುಗಾಳಿಯಿಂದಾಗಿ ಪದೇಪದೆ ಇಂಥ ದುರಂತಗಳು ನಡೆಯುತ್ತಿರುತ್ತವೆ.

ಇದನ್ನೂ ಓದಿ: ನಾಲ್ಕು ವ್ಯಕ್ತಿಗಳು, 20 ಜಾನುವಾರುಗಳನ್ನು ಕೊಂದ ನರಭಕ್ಷಕ ಹುಲಿಯ ಬೇಟೆಗೆ ಅರಣ್ಯ ಇಲಾಖೆ ಆದೇಶ

2 ವರ್ಷಗಳಲ್ಲಿ, 1.2 ಲಕ್ಷ ಹಳ್ಳಿಗಳ 5 ಕೋಟಿ ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕ; ಜಲ ಜೀವನ್​ ಮಿಷನ್​ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್