AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India: ಅಮೆರಿಕಕ್ಕೆ ಮತ್ತೊಂದು ವಿಮಾನದಲ್ಲಿ ಹೊರಟ ರಷ್ಯಾದಲ್ಲಿ ಸಿಲುಕಿದ್ದ ಪ್ರಯಾಣಿಕರು

ರಷ್ಯಾದಲ್ಲಿ ಸಿಲುಕಿದ್ದ ಪ್ರಯಾಣಿಕರು ವಿಶೇಷ ವಿಮಾನದ ಮೂಲಕ ಅಮೆರಿಕಕ್ಕೆ ತೆರಳುತ್ತಿದ್ದಾರೆ. ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ರಷ್ಯಾದ ಮಗದನ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು.

Air India: ಅಮೆರಿಕಕ್ಕೆ ಮತ್ತೊಂದು ವಿಮಾನದಲ್ಲಿ ಹೊರಟ ರಷ್ಯಾದಲ್ಲಿ ಸಿಲುಕಿದ್ದ ಪ್ರಯಾಣಿಕರು
ಏರ್ ಇಂಡಿಯಾImage Credit source: Aljazeera
ನಯನಾ ರಾಜೀವ್
|

Updated on: Jun 08, 2023 | 8:16 AM

Share

ರಷ್ಯಾದಲ್ಲಿ ಸಿಲುಕಿದ್ದ ಪ್ರಯಾಣಿಕರು ವಿಶೇಷ ವಿಮಾನದ ಮೂಲಕ ಅಮೆರಿಕಕ್ಕೆ ತೆರಳುತ್ತಿದ್ದಾರೆ. ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ರಷ್ಯಾದ ಮಗದನ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು. ಇಂಜಿನ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ 216 ಪ್ರಯಾಣಿಕರು ಮತ್ತು 16 ಸಿಬ್ಬಂದಿಯಿದ್ದ ವಿಮಾನವನ್ನು ರಷ್ಯಾದ ಮಗದನ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು ಎಂದು ಟಾಟಾ ಗ್ರೂಪ್ ಒಡೆತನದ ಖಾಸಗಿ ವಾಹಕ ಹೇಳಿಕೆಯಲ್ಲಿ ತಿಳಿಸಿದೆ. ಏರ್ ಇಂಡಿಯಾ ಪ್ರಯಾಣಿಕರನ್ನು ಸ್ಯಾನ್ ಫ್ರಾನ್ಸಿಸ್ಕೋಗೆ ಕರೆದೊಯ್ಯಲು ಮತ್ತೊಂದು ವಿಮಾನವು ಮುಂಬೈನಿಂದ ಮಧ್ಯಾಹ್ನ 1 ಗಂಟೆಗೆ ರಷ್ಯಾದ ಮಗದನ್‌ಗೆ ಬಂದಿದೆ.

ರಷ್ಯಾದ ರಾಜಧಾನಿ ಮಾಸ್ಕೋದಿಂದ 10,000 ಕಿಮೀ ದೂರದಲ್ಲಿರುವ ದೂರದ ಮಗದನ್‍ನಲ್ಲಿ ಸಿಲುಕಿರುವ ಹಲವಾರು ಏರ್ ಇಂಡಿಯಾ ಪ್ರಯಾಣಿಕರನ್ನು ವಸತಿ ನಿಲಯಗಳಲ್ಲಿ ಇರಿಸಲಾಗಿದೆ. ಏಕೆಂದರೆ ಆ ಪ್ರದೇಶದ ಹೋಟೆಲ್‍ಗಳು ವಿಮಾನದಲ್ಲಿ ಎಲ್ಲರಿಗೂ ಅವಕಾಶ ಕಲ್ಪಿಸಲು ಸಾಧ್ಯವಾಗುತ್ತಿಲ್ಲ.

ಮತ್ತಷ್ಟು ಓದಿ: Air India: ಸ್ಯಾನ್ ಫ್ರಾನ್ಸಿಸ್ಕೋಗೆ ಬದಲು ರಷ್ಯಾದಲ್ಲಿ ಇಳಿದ ವಿಮಾನ, ಭಾರತೀಯ ಪ್ರಯಾಣಿಕರಿಗಾಗಿ ವಿಶೇಷ ವಿಮಾನ ವ್ಯವಸ್ಥೆ

ವಿಮಾನವನ್ನು ತಪಾಸಣೆಗೆ ಒಳಪಡಿಸಲಾಗಿದೆ. ಪ್ರಯಾಣಿಕರಿಗೆ ಅಗತ್ಯ ಸೌಲಭ್ಯ ಒದಗಿಸಲಾಗಿದೆ. ರಷ್ಯಾದ ಮಗದನ್ ವಿಮಾನ ನಿಲ್ದಾಣದಿಂದ ತನ್ನ ಪ್ರಯಾಣಿಕರನ್ನು ಕರೆದೊಯ್ಯಲು ಪರ್ಯಾಯ ವಿಮಾನ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲಿಯವರೆಗೆ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಮಗದನ್‌ನ ಸ್ಥಳೀಯ ಹೋಟೆಲ್‌ಗಳಲ್ಲಿ ವಸತಿ ಕಲ್ಪಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಅಮೆರಿಕ, ಯುನೈಟೆಡ್ ಸ್ಟೇಟ್ಸ್ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಸ್ಟೇಟ್ ಡಿಪಾರ್ಟ್‌ಮೆಂಟ್ ಉಪ ವಕ್ತಾರ ವೇದಾಂತ್ ಪಟೇಲ್, ಯುಎಸ್‌ಗೆ ತೆರಳುವ ವಿಮಾನವು ರಷ್ಯಾದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಆ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ