AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್-ಹಮಾಸ್ ಸಂಘರ್ಷ: ನವೆಂಬರ್​ 30ರವರೆಗೆ ಟೆಲ್ ಅವೀವ್​ಗೆ ವಿಮಾನ ಸೇವೆಯನ್ನು ಸ್ಥಗಿತಗೊಳಿಸಿದ ಏರ್​ ಇಂಡಿಯಾ

ಇಸ್ರೇಲ್ ಮತ್ತು ಉಗ್ರಗಾಮಿ ಗುಂಪು ಹಮಾಸ್ ನಡುವಿನ ಉದ್ವಿಗ್ನತೆಯ ಹೆಚ್ಚಿದ್ದು ಏರ್ ಇಂಡಿಯಾ ನವೆಂಬರ್ 30 ರವರೆಗೆ ಟೆಲ್ ಅವೀವ್‌ಗೆ ವಿಮಾನಗಳ ಸೇವೆಯನ್ನು ಸ್ಥಗಿತಗೊಳಿಸಿದೆ. ಅಕ್ಟೋಬರ್ 7 ರಿಂದ ಟೆಲ್ ಅವೀವ್‌ಗೆ ಮತ್ತು ಅಲ್ಲಿಂದ ಯಾವುದೇ ಭಾಗಕ್ಕೂ ವಿಮಾನ ಹಾರಾಟ ಇಲ್ಲ ಎಂದು ಏರ್ ಇಂಡಿಯಾ ಸ್ಪಷ್ಟಪಡಿಸಿದೆ.

ಇಸ್ರೇಲ್-ಹಮಾಸ್ ಸಂಘರ್ಷ: ನವೆಂಬರ್​ 30ರವರೆಗೆ ಟೆಲ್ ಅವೀವ್​ಗೆ ವಿಮಾನ ಸೇವೆಯನ್ನು ಸ್ಥಗಿತಗೊಳಿಸಿದ ಏರ್​ ಇಂಡಿಯಾ
ಏರ್ ಇಂಡಿಯಾImage Credit source: Times Of India
ನಯನಾ ರಾಜೀವ್
|

Updated on: Nov 06, 2023 | 11:06 AM

Share

ಇಸ್ರೇಲ್(Israel) ಮತ್ತು ಉಗ್ರಗಾಮಿ ಗುಂಪು ಹಮಾಸ್ ನಡುವಿನ ಉದ್ವಿಗ್ನತೆಯ ಹೆಚ್ಚಿದ್ದು ಏರ್ ಇಂಡಿಯಾ(Air India) ನವೆಂಬರ್ 30 ರವರೆಗೆ ಟೆಲ್ ಅವೀವ್‌ಗೆ ವಿಮಾನಗಳ ಸೇವೆಯನ್ನು ಸ್ಥಗಿತಗೊಳಿಸಿದೆ. ಅಕ್ಟೋಬರ್ 7 ರಿಂದ ಟೆಲ್ ಅವೀವ್‌ಗೆ ಮತ್ತು ಅಲ್ಲಿಂದ ಯಾವುದೇ ಭಾಗಕ್ಕೂ ವಿಮಾನ ಹಾರಾಟ ಇಲ್ಲ ಎಂದು ಏರ್ ಇಂಡಿಯಾ ಸ್ಪಷ್ಟಪಡಿಸಿದೆ.

ನವೆಂಬರ್ 30 ರವರೆಗೆ ಟೆಲ್ ಅವಿವ್‌ಗೆ ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಏರ್‌ಲೈನ್ ವಕ್ತಾರರು ಭಾನುವಾರ ತಿಳಿಸಿದ್ದಾರೆ. ಸಾಮಾನ್ಯವಾಗಿ, ವಿಮಾನ ಸೋಮವಾರ, ಮಂಗಳವಾರ, ಗುರುವಾರ, ಶನಿವಾರ ಮತ್ತು ಭಾನುವಾರ ರಾಷ್ಟ್ರೀಯ ರಾಜಧಾನಿಯಿಂದ ಟೆಲ್ ಅವೀವ್‌ಗೆ ಐದು ಏರ್ ಇಂಡಿಯಾ ವಿಮಾನಗಳು ಕಾರ್ಯಾಚರಿಸುತ್ತಿವೆ.

ಕಳೆದ ತಿಂಗಳು, ಘರ್ಷಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಸ್ರೇಲ್‌ನಿಂದ ಹಿಂತಿರುಗಲು ಇಚ್ಛಿಸುವ ಭಾರತೀಯರನ್ನು ಮರಳಿ ಕರೆತರಲು ಸರ್ಕಾರದ ಆಪರೇಷನ್ ಅಜಯ್ ಅಡಿಯಲ್ಲಿ ವಿಮಾನಯಾನವು ರಾಷ್ಟ್ರೀಯ ರಾಜಧಾನಿಯಿಂದ ಟೆಲ್ ಅವೀವ್‌ಗೆ ಕೆಲವು ಚಾರ್ಟರ್ಡ್ ವಿಮಾನಗಳನ್ನು ಕಳುಹಿಸಿತ್ತು.

ಮತ್ತಷ್ಟು ಓದಿ: ಗಾಜಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 7 ಮಂದಿ ಒತ್ತೆಯಾಳುಗಳು ಸಾವು

ಅಕ್ಟೋಬರ್ 7 ರಂದು ಹಮಾಸ್ ಉಗ್ರರು ಇಸ್ರೇಲ್ ಮೇಲೆ 5 ಸಾವಿರ ರಾಕೆಟ್​ಗಳಿಂದ ದಾಳಿ ನಡೆಸಿದರು, ಘಟನೆಯಲ್ಲಿ 1,400ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಅದಾದ ಬಳಿಕ ಇಸ್ರೇಲ್ ಪ್ರತಿಯಾಗಿ ಗಾಜಾದ ಮೇಲೆ ದಾಳಿ ನಡೆಸಿದ್ದು, ಅಲ್ಲೂ ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಯುದ್ಧವನ್ನು ನಾವು ಪ್ರಾರಂಭ ಮಾಡಿಲ್ಲ ಆದರೆ ನಾವೇ ಅಂತ್ಯ ಮಾಡುತ್ತೇವೆ ಎಂದು ಇಸ್ರೇಲ್ ಪಣತೊಟ್ಟಿದೆ.

ವಿಶ್ವಸಂಸ್ಥೆ ನಡೆಸುತ್ತಿದ್ದ ಶಾಲೆಯ ಇಸ್ರೇಲ್ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು 70ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಗಾಜಾದಲ್ಲಿನ ಹಮಾಸ್ ಆರೋಗ್ಯ ಸಚಿವಾಲಯವು ತಿಳಿಸಿದೆ.

ಅಲ್-ಫಖುರಾ ಶಾಲೆಯ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 15 ಮಂದಿ ಮೃತಪಟ್ಟಿದ್ದರು, ಮತ್ತು 70 ಮಂದಿ ಗಾಯಗೊಂಡಿದ್ದರು. ಇದಕ್ಕೂ ಮೊದಲು ಈ ಶಾಲೆಯ ಮೇಲೆ ನಡೆದ ದಾಳಿಯಲ್ಲಿ 12 ಜನರು ಸಾವನ್ನಪ್ಪಿದ್ದಾರೆ ಮತ್ತು 54 ಮಂದಿ ಗಾಯಗೊಂಡಿದ್ದಾರೆ ಎಂದು ಸಚಿವಾಲಯ ಹೇಳಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್