AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾಯಕಾರಿ ಮಟ್ಟಕ್ಕೆ ವಾಯುಮಾಲಿನ್ಯ; ನೇಪಾಳದಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಶೀಘ್ರವಾಗಿ ಬೆಳವಣಿಗೆ ಹೊಂದುತ್ತಿರುವ ನೇಪಾಳ ರಾಷ್ಟ್ರ ರಾಜಧಾನಿ ಕಠ್ಮಂಡುವಿನಲ್ಲಿ ವಾಯುಮಾಲಿನ್ಯ ಕೂಡ ದೀರ್ಘಕಾಲದ ಸಮಸ್ಯೆಯಾಗಿದೆ. ಕೊರೊನಾ ಸಾಂಕ್ರಾಮಿಕ ರೋಗದ ನಡುವೆ ವಾಯುಮಾಲಿನ್ಯವನ್ನು ನಿಯಂತ್ರಣಕ್ಕೆ ತರುವುದು ಸರ್ಕಾರಕ್ಕೆ ಈಗ ಸವಾಲಾಗಿ ಪರಿಣಮಿಸಿದೆ.

ಅಪಾಯಕಾರಿ ಮಟ್ಟಕ್ಕೆ ವಾಯುಮಾಲಿನ್ಯ; ನೇಪಾಳದಲ್ಲಿ ಶಾಲೆಗಳಿಗೆ ರಜೆ ಘೋಷಣೆ
ವಾಯುಮಾಲಿನ್ಯ
TV9 Web
| Edited By: |

Updated on:Apr 05, 2022 | 1:02 PM

Share

ಕಠ್ಮಂಡು: ವಾಯುಮಾಲಿನ್ಯ ಅಪಾಯಕಾರಿ ಮಟ್ಟವನ್ನು ತಲುಪಿದ ಕಾರಣ ನೇಪಾಳದಲ್ಲಿ ನಾಲ್ಕು ದಿನಗಳ ಕಾಲ ಶಾಲೆಯನ್ನು ಮುಚ್ಚಲಾಗಿದೆ. ಇದರಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳು ಮನೆಯಲ್ಲೇ ಉಳಿಯುವಂತಾಗಿದೆ. ಸುಮಾರು 30 ಲಕ್ಷ ಜನಸಂಖ್ಯೆ ಇರುವ ನೇಪಾಳವು ಹಿಮಾಲಯ ಪರ್ವತ ಶ್ರೇಣಿ, ಚೀನಾ ಹಾಗೂ ಭಾರತದ ನಡುವೆ ಇದೆ. ಚೀನಾ ಮತ್ತು ಭಾರತ ಕೂಡ ವಾಯುಮಾಲಿನ್ಯ ಮಟ್ಟದಲ್ಲಿ ವಿಶ್ವದಲ್ಲಿ ಮುಂಚೂಣಿಯಲ್ಲಿದೆ.

ಶೀಘ್ರವಾಗಿ ಬೆಳವಣಿಗೆ ಹೊಂದುತ್ತಿರುವ ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ವಾಯುಮಾಲಿನ್ಯ ಕೂಡ ದೀರ್ಘಕಾಲದ ಸಮಸ್ಯೆಯಾಗಿದೆ. ಕೊರೊನಾ ಸಾಂಕ್ರಾಮಿಕ ರೋಗದ ನಡುವೆ ವಾಯುಮಾಲಿನ್ಯವನ್ನು ನಿಯಂತ್ರಣಕ್ಕೆ ತರುವುದು ಸರ್ಕಾರಕ್ಕೆ ಈಗ ಸವಾಲಾಗಿ ಪರಿಣಮಿಸಿದೆ.

2016ರಿಂದಲೂ ವಾಯು ಗುಣಮಟ್ಟ ಕಳಪೆಯಾಗುತ್ತಿತ್ತು. ವಾರಾಂತ್ಯದ ಬಳಿಕ ವಾಯುಮಾಲಿನ್ಯ ಅತ್ಯಂತ ಗರಿಷ್ಠ ಮಟ್ಟವನ್ನು ತಲುಪಿದೆ ಎಂದು ಸರ್ಕಾರಿ ಅಧಿಕಾರಿ ಶಂಕರ್ ಪೌಡೆಲ್ ಮಾಹಿತಿ ನೀಡಿದ್ದಾರೆ. ಈ ಪರಿಸ್ಥಿತಿಯಿಂದ ಸುಮಾರು 8 ಲಕ್ಷ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ ಎಂದು ಶಿಕ್ಷಣ ಇಲಾಖೆ ವಕ್ತಾರ ದೀಪಕ್ ಶರ್ಮಾ ಹೇಳಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಪಿಎಂ2.5 ಮಟ್ಟ ಹೆಚ್ಚಾಗಿದೆ. ಗಾಳಿಯಲ್ಲಿ ತೇಲುವ ಅತಿಸೂಕ್ಷ್ಮ ಘನ ಮತ್ತು ದ್ರವಕಣಗಳನ್ನು ಪರ್ಟಿಕ್ಯುಲೇಟ್ ಮ್ಯಾಟರ್ (ಪಿಎಂ) ಎಂದು ಕರೆಯುತ್ತಾರೆ. ಶ್ವಾಸಕೋಶದ ಆಳಕ್ಕೆ ತಲುಪಬಲ್ಲ ಈ ಕಣಗಳು ವ್ಯಾಪಕ ಹಾನಿಯುಂಟು ಮಾಡಬಲ್ಲವು. ಕಠ್ಮಂಡು ನಗರದ ಭೈಸೆಪತಿ ಪ್ರದೇಶದಲ್ಲಿ ಪ್ರತಿ ಕ್ಯೂಬಿಕ್ ಮೀಟರ್ ಪ್ರದೇಶದಲ್ಲಿ 214 ಮೈಕ್ರೊಗ್ರಾಂಗಳಷ್ಟು ಇತ್ತು. ಸರ್ಕಾರದ ನಿಯಮಗಳ ಪ್ರಕಾರ ಪ್ರತಿ ಕ್ಯೂಬಿಕ್ ಮೀಟರ್​ಗೆ 40 ಮೈಕ್ರೊಗ್ರಾಂಗಳಷ್ಟಿರಬೇಕು.

ನೇಪಾಳ ರಾಜಧಾನಿ ಕಠ್ಮಂಡುವಿನ ವಾಯು ಗುಣಮಟ್ಟ ಹದಗೆಟ್ಟಿದೆ. ಆದರೆ, ಇತ್ತೀಚೆಗಿನ ಸರಾಸರಿ ವಾಯುಮಾಲಿನ್ಯ ಪ್ರಮಾಣ ತಿಳಿದುಬಂದಿಲ್ಲ. ಕಟ್ಟಡ ಕಾಮಗಾರಿಯಿಂದ ಉಂಟಾಗುವ ಧೂಳು, ಹಳೆಯ ಮತ್ತು ಸರಿಯಾಗಿ ನಿರ್ವಹಣೆ ಕಾಣದ ವಾಹನಗಳು, ಅದರ ಹೊಗೆ ಇತ್ಯಾದಿಗಳಿಂದ ವಾಯುಮಾಲಿನ್ಯ ಹೆಚ್ಚಾಗುತ್ತಿದೆ. ಇದರಿಂದ ಕ್ಯಾನ್ಸರ್, ಪಾರ್ಶ್ವವಾಯು, ಅಸ್ತಮಾ ಮತ್ತು ಅತಿಯಾದ ರಕ್ತದೊತ್ತಡ ಮುಂತಾದ ಸಮಸ್ಯೆಗಳ ಅಪಾಯ ಹೆಚ್ಚುತ್ತಿದೆ. ಕೊವಿಡ್-19 ಆತಂಕವೂ ಹೆಚ್ಚಿದೆ ಎಂದು ಟ್ರಾಪಿಕಲ್ ಮತ್ತು ಇನ್ಫೆಕ್ಷಿಯಸ್ ಆಸ್ಪತ್ರೆ ವೈದ್ಯ ಶೇರ್ ಬಹದೂರ್ ಪನ್ ಹೇಳಿಕೆ ನೀಡಿದ್ದಾರೆ.

ಕಠ್ಮಂಡುವಿನಲ್ಲಿ ದಿನಸಿ ಅಂಗಡಿ ಇಟ್ಟುಕೊಂಡಿರುವ 65 ವರ್ಷ ವಯಸ್ಸಿನ ಅರ್ಜುನ್ ಖಾಡ್ಕ, ತಮಗೆ ಕಣ್ಣು ಹಾಗೂ ಮೂಗಿನಲ್ಲಿ ಸುಡುವ ಅನುಭವ ಆಗಿರುವ ಬಗ್ಗೆ ಹೇಳಿಕೊಂಡಿದ್ದಾರೆ. ಈ ಮಟ್ಟದ ವಾಯು ಮಾಲಿನ್ಯವನ್ನು ನಾನು ಕಠ್ಮಂಡುವಿನಲ್ಲಿ ಕಂಡಿರಲಿಲ್ಲ ಎಂದೂ ಅವರು ತಿಳಿಸಿದ್ದಾರೆ. ಜನರು ಸಾಧ್ಯವಾದಷ್ಟು ಮನೆಯೊಳಗೆ ಉಳಿದುಕೊಳ್ಳಬೇಕು. ಅಗತ್ಯ ಕೆಲಸಕಾರ್ಯಗಳಿಗೆ ಮಾತ್ರ ಮನೆಯಿಂದ ಹೊರಬರಬೇಕು ಎಂದು ಆರೋಗ್ಯ ಸಚಿವಾಲಯ ಸೂಚಿಸಿದೆ.

ಇದನ್ನೂ ಓದಿ: ಅಮೆರಿಕ ಅಧ್ಯಕ್ಷ ಜೋ ಬೈಡನ್​ ಸಾಕು ನಾಯಿ ವೈಟ್​ ಹೌಸ್​ ಕೆಲಸಗಾರನಿಗೆ ಕಚ್ಚಿದ್ದು ಈಗ ಅಂತರಾಷ್ಟ್ರೀಯ ಸುದ್ದಿ!

ಇದನ್ನೂ ಓದಿ: ಸೂಯೆಜ್ ಕಾಲುವೆಯಲ್ಲಿ ದೈತ್ಯ ಹಡಗು ಮತ್ತೆ ತೇಲಲು ಹುಣ್ಣಿಮೆ ಚಂದ್ರನೇ ಕಾರಣ!

Published On - 4:23 pm, Wed, 31 March 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?