AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಶೋ ಸಮಯದಲ್ಲಿ ನೀರಿಗಿಳಿದ ವಿಮಾನ; ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ವಿಡಿಯೋ

ಫ್ಲೋರಿಡಾ ಏರ್ ಶೋ ಸಮಯದಲ್ಲಿ ವಿಮಾನವು ನೀರಿಗಿಳಿಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಏರ್ ಶೋ ಸಮಯದಲ್ಲಿ ನೀರಿಗಿಳಿದ ವಿಮಾನ; ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ವಿಡಿಯೋ
ನೀರಿಗಿಳಿದ ವಿಮಾನ
shruti hegde
| Edited By: |

Updated on: Apr 20, 2021 | 10:08 PM

Share

ಏರ್​ ಶೋ ಎಂದರೆ ಎಲ್ಲರೂ ಒಮ್ಮೆ ಚಕಿತರಾಗಿ ನೋಡುತ್ತೇವೆ. ಆಕಾಶದಲ್ಲಿ ಹಾರಾಡುವ ವಿಮಾನವನ್ನು ನೋಡುವುದೇ ಸುಂದರ ಅನುಭವ. ಜೊತೆಗೆ ಪೈಲಟ್​ಗಳ ಚಮತ್ಕಾರ ಅದ್ಭುತ. ಅಂತಹ ದೃಶ್ಯ ನೋಡುತ್ತಿದ್ದ ಕಡಲತೀರದ ಜನರಿಗೆ ಒಮ್ಮೆಲೆ ಆತಂಕ ಮೂಡಿಸುವ ಘಟನೆಯೊಂದು ನಡೆದಿದೆ. ಫ್ಲೋರಿಡಾದಲ್ಲಿ ತಾಂತ್ರಿಕ ದೋಷದಿಂದಾಗಿ ವಿಮಾನ ಕೊಕೊ ಬೀಚ್​ಗೆ ಇಳಿದ ದೃಶ್ಯ ಕಂಡ ಕಡಲ ತೀರದ ಜನರು ಭಯಗೊಂಡಿದ್ದಾರೆ.

ಏರ್​ ಶೋ ಒಂದರಲ್ಲಿ ವಿಮಾನವು ಫ್ಲೋರಿಡಾದ ಕೊಕೊ ಬೀಚ್​ನ ನೀರಿನಲ್ಲಿ ಇಳಿದ ಘಟನೆ ಫ್ಲೋರಿಡಾದ ಕೊಕೊ ಬೀಚ್​ನಲ್ಲಿ ಶನಿವಾರ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್​ ಆಗಿದ್ದು, ನೆಟ್ಟಿಗರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ವಿಡಿಯೋದಲ್ಲಿ ನೋಡ ನೋಡುತ್ತಿದ್ದಂತೆಯೇ ಸಿಂಗಲ್​-ಎಂಜಿನ್​ ಟಿಬಿಎಂ ಎವೆಂಜರ್​ ವಿಮಾನವು ನೀರಿನಲ್ಲಿ ಇಳಿಯುತ್ತಿರುವ ವಿಡಿಯೋ ವೈರಲ್​ ಆಗಿದೆ.

ವಿಮಾನವು ತಾಂತ್ರಿಕ ಸಮಸ್ಯೆಯಿಂದಾಗಿ ನೀರಿಗಿಳಿಯುವ ಪ್ರಸಂಗ ಉಂಟಾಗಿದೆ. ಘಟನೆಯಲ್ಲಿ ಪೈಲೆಟ್​​ ಅಥವಾ ಸುತ್ತಲಿದ್ದ ಸಿಬ್ಬಂದಿಗೆ ಯಾವುದೇ ಗಾಯವಾಗಿಲ್ಲ ಎಂದು ಏರ್​ ಶೋ ಮೂಲ ಮಾಹಿತಿ ಹಂಚಿಕೊಂಡಿದೆ. ವಿಡಿಯೋವನ್ನು ನೋಡಿದ ನೆಟ್ಟಿಗರು ಪೈಲ್​ಟ್​ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ 46 ಸೆಕೆಂಡ್​ನ ವಿಡಿಯೋ ಕ್ಲಿಪ್​ ನೋಡಿ ನೆಟ್ಟಿಗರು ಆಶ್ಚರ್ಯಚಕಿತರಾಗಿದ್ದಾರೆ.

ತಾಂತ್ರಿಕ ಸಮಸ್ಯೆಯಿಂದಾಗಿ ಏರ್​ ಶೋದಲ್ಲಿ ಭಾಗಿಯಾಗಿದ್ದ ವಿಮಾನ ನೀರಿಗಿಳಿದಿದೆ. ಕಡಲ ತೀರದಲ್ಲಿದ್ದ ಅದೆಷ್ಟೋ ಜನರನ್ನು ಉಳಿಸಿದ್ದಕ್ಕಾಗಿ ನೆಟ್ಟಿಗರು ಪೈಲೆಟ್​ಅನ್ನು ಹಾಡಿ ಹೊಗಳಿದ್ದಾರೆ. ಪೈಲೆಟ್​ನ ಆರೋಗ್ಯವನ್ನು ವಿಚಾರಿಸಿದ್ದಾರೆ. ಜೊತೆಗೆ ಪೈಲೆಟ್​ನ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Viral Video: ರೈಲ್ವೇ ಹಳಿಗೆ ಬಿದ್ದ ಮಗು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು; ಸಿಬ್ಬಂದಿಗೆ ರೈಲ್ವೇ ಇಲಾಖೆ ಪ್ರಶಂಸೆ

ಇದನ್ನೂ ಓದಿ: Viral Video: ಬಿಯರ್​ ಬಾಟಲಿ ಮುಚ್ಚಳ ತೆಗೆಯಲು ಸಿಂಪಲ್​ ವಿಧಾನ; ಕಾಲಲ್ಲಿ ಶೂ ಇದ್ದರೆ ಸಾಕು !

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು