AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಚೀನಾದಲ್ಲಿ 133 ಪ್ರಯಾಣಿಕರಿದ್ದ ವಿಮಾನ ಪತನ; ಪರ್ವತಗಳ ಮಧ್ಯೆ ಅಪಘಾತಕ್ಕೀಡಾದ ಫ್ಲೈಟ್​

ಚೀನಾ ಈಸ್ಟರ್ನ್​ ಏರ್​ಲೈನ್ಸ್​ ಎಂಬುದು ಶಾಂಘೈ ಮೂಲದ ವಿಮಾನಯಾನ ಸಂಸ್ಥೆ. ಚೀನಾದ ಮೂರು ಪ್ರಮುಖ ವಿಮಾನ ಯಾನ ಸ್ಂಸ್ಥೆಗಳಲ್ಲಿ ಇದೂ ಒಂದು. ದೇಶೀಯ ಮತ್ತು ಅಂತಾರಾಷ್ಟ್ರೀಯ ಸೇರಿ ಒಟ್ಟು 248 ಪ್ರದೇಶಗಳಿಗೆ ಇದರ ವಿಮಾನಸೇವೆ ಇದೆ. 

Video: ಚೀನಾದಲ್ಲಿ 133 ಪ್ರಯಾಣಿಕರಿದ್ದ ವಿಮಾನ ಪತನ; ಪರ್ವತಗಳ ಮಧ್ಯೆ ಅಪಘಾತಕ್ಕೀಡಾದ ಫ್ಲೈಟ್​
ಚೀನಾ ವಿಮಾನ ಅಪಘಾತ
TV9 Web
| Edited By: |

Updated on:Mar 21, 2022 | 2:56 PM

Share

ಚೀನಾ ಈಸ್ಟರ್ನ್​ ಏರ್​ಲೈನ್ಸ್​​ (600115.SS) ಗೆ ಸೇರಿದ ವಿಮಾನವೊಂದು ಇಂದು ದಕ್ಷಿಣ ಚೀನಾದ ಪರ್ವತಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ (China Plane Crashes).  ಕುನ್ಮಿಂಗ್ ಎಂಬ ನಗರದಿಂದ ಗುವಾಂಗ್ಝೌಕ್ಕೆ ಸಂಚಾರ ಮಾಡುತ್ತಿದ್ದ ಈ  ವಿಮಾನದಲ್ಲಿ ಸುಮಾರು 133 ಪ್ರಯಾಣಿಕರು ಇದ್ದರು. ಚೀನಾ ಈಸ್ಟರ್ನ್​ ಏರ್​ಲೈನ್ಸ್​ಗೆ ಸೇರಿದ ಬೋಯಿಂಗ್​ 737-800 ವಿಮಾನ MU5735 ವುಝೌ ಬಳಿ ಅಪಘಾತಕ್ಕೀಡಾಗಿದ್ದು, ಗುಡ್ಡ ಪ್ರದೇಶದಿಂದ ಭರ್ಜರಿ ಹೊಗೆ ಏಳುತ್ತಿರುವ ವಿಡಿಯೋ ಕೂಡ ವೈರಲ್ ಆಗಿದೆ. ಇದು ಸುಮಾರು ಆರು ವರ್ಷ ಹಳೇ ವಿಮಾನವಾಗಿದ್ದು, ಅಪಘಾತದಲ್ಲಿ ಯಾರಾದರೂ ಮೃತಪಟ್ಟಿದ್ದಾರಾ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ.

ಚೀನಾ ಈಸ್ಟರ್ನ್​ ಏರ್​ಲೈನ್ಸ್​ ಎಂಬುದು ಶಾಂಘೈ ಮೂಲದ ವಿಮಾನಯಾನ ಸಂಸ್ಥೆ. ಚೀನಾದ ಮೂರು ಪ್ರಮುಖ ವಿಮಾನ ಯಾನ ಸ್ಂಸ್ಥೆಗಳಲ್ಲಿ ಇದೂ ಒಂದು. ದೇಶೀಯ ಮತ್ತು ಅಂತಾರಾಷ್ಟ್ರೀಯ ಸೇರಿ ಒಟ್ಟು 248 ಪ್ರದೇಶಗಳಿಗೆ ಇದರ ವಿಮಾನಸೇವೆ ಇದೆ.  ಈ ವಿಮಾನ ಕುನ್ಮಿಂಗ್​​ನಿಂದ ಮಧ್ಯಾಹ್ನ 1.11ಕ್ಕೆ ಹೊರಟಿದೆ. ಸುಮಾರು 2.22ರ ಹೊತ್ತಿಗೆ ಫ್ಲೈಟ್​ ಟ್ರ್ಯಾಕ್​ ಅಂತ್ಯಗೊಂಡಿತು. ಆಗ ವಿಮಾನ ಸಮುದ್ರ ಮಟ್ಟದಿಂದ ಸುಮಾರು 3225 ಅಡಿ ಎತ್ತರದಲ್ಲಿ, 376 ನಾಟ್​​ ವೇಗದಲ್ಲಿ  ಚಲಿಸುತ್ತಿತ್ತು ಎಂದು ಫ್ಲೈಟ್​ರಾಡಾರ್​ 24 ಎಂಬ ವೆಬ್​ಸೈಟ್​ ತಿಳಿಸಿದೆ. ಸರಿಯಾಗಿ ಹೋಗಿದ್ದರೆ 3.05ನಿಮಿಷದ ಹೊತ್ತಿಗೆ ಗುವಾಂಗ್ಝೌನಲ್ಲಿ ಲ್ಯಾಂಡ್ ಆಗಬೇಕಿತ್ತು ಎಂದೂ ಮಾಹಿತಿ ನೀಡಿದೆ.

ಚೀನಾದ ಒಟ್ಟಾರೆ ಏರ್​ಲೈನ್​ ಸಂಸ್ಥೆಗಳು ಅತ್ಯುತ್ತಮ ಮತ್ತು ಸುರಕ್ಷಿತ ಎಂದು ಹೇಳಲಾಗುತ್ತದೆ. ಚೀನಾದಲ್ಲಿ 2010ರಲ್ಲಿ 96 ಜನರಿದ್ದ  ಎಂಬ್ರೇರ್ ಇ ಪ್ರಾದೇಶಿಕ ಜೆಟ್​​ವೊಂದು ಅಪಘಾತಕ್ಕೀಡಾಗಿ, 46 ಮಂದಿ ಮೃತಪಟ್ಟಿದ್ದರು. ಇದು ಚೀನಾದ ಹೆನಾನ್​ ಏರ್​ಲೈನ್​ ಸಂಸ್ಥೆಯ ವಿಮಾನವಾಗಿದ್ದು, ಕೆಟ್ಟ ವಾತಾವರಣದ ಕಾರಣದಿಂದ ಅಪಘಾತ  ಸಂಭವಿಸಿತ್ತು.

ಇದನ್ನೂ ಓದಿ: Viral Photo: ಪೂಜೆ ವೇಳೆ ಅಮ್ಮ ಮಾಡಿದ ಆ ಒಂದು ಕೆಲಸದಿಂದ ಮುಜುಗರಕ್ಕೀಡಾದ ಮಗ; ಫೋಟೋ ವೈರಲ್

Published On - 2:28 pm, Mon, 21 March 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ