Sign In

By signing in or creating an account, you agree with Associated Broadcasting Company's Terms & Conditions and Privacy Policy.

Nepal: ರನ್​ ವೇದಲ್ಲಿ ಆಯತಪ್ಪಿದ ವಿಮಾನ; 80 ಪ್ರಯಾಣಿಕರ ಸುರಕ್ಷಿತ ಸ್ಥಳಾಂತರ

ವಿಮಾನದಲ್ಲಿ ತಾಂತ್ರಿಕ ದೋಷದಿಂದ ಹೀಗಾಗಿದೆ ಎಂದು ತ್ರಿಭುವನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಕ್ತಾರ ರೆಂಜಿ ಶೇರ್ಪಾ ತಿಳಿಸಿದ್ದಾರೆ.

Nepal:  ರನ್​ ವೇದಲ್ಲಿ ಆಯತಪ್ಪಿದ ವಿಮಾನ; 80 ಪ್ರಯಾಣಿಕರ ಸುರಕ್ಷಿತ ಸ್ಥಳಾಂತರ
ಕಾಟ್ಮಂಡು ವಿಮಾನ ನಿಲ್ದಾಣ
Follow us
TV9 Web
| Updated By: Lakshmi Hegde

Updated on:Oct 05, 2021 | 6:35 PM

ಕಾಟ್ಮಂಡು: ನೇಪಾಳದ ದೇಶೀಯ ವಿಮಾನ (Nepal’s Domestic Aircraft)  ಅಂದರೆ ದೇಶದೊಳಗೇ ಸಂಚರಿಸುವ ವಿಮಾನವೊಂದು ರನ್​ವೇದಲ್ಲಿ ಆಯತಪ್ಪಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಈ ವಿಮಾನದಲ್ಲಿ ಸುಮಾರು 80 ಪ್ರಯಾಣಿಕರು ಇದ್ದರು. ಅದೃಷ್ಟವಶಾತ್​ ಯಾರಿಗೂ ಏನೂ ಆಗಲಿಲ್ಲ. ನೇಪಾಳದ ಶ್ರೀ ಏರ್​​ಲೈನ್​​ಗೆ ಸೇರಿದ ವಿಮಾನ, ಇಂದು ಬೆಳಗ್ಗೆ 10.30ರ ಹೊತ್ತಿಗೆ ಕಾಟ್ಮಂಡುವಿನ ತ್ರಿಭುವನ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೇಪಾಳ್​ಗುಂಜ್​ಗೆ ಹೊರಟಿತ್ತು. ಟೇಕ್​ಆಫ್​ಗೂ ಮುನ್ನ ಟ್ಯಾಕ್ಸಿ ವೇದಲ್ಲಿ ಸಂಚಾರ ಮಾಡುತ್ತಿದ್ದಾಗ ಸ್ಕಿಡ್​ ಆಗಿದೆ ಎಂದು ವರದಿಯಾಗಿದೆ. 

ವಿಮಾನ ಅಪಘಾತಕ್ಕೀಡಾಗುತ್ತಿದ್ದಂತೆ ಅದರಲ್ಲಿದ್ದ ಎಲ್ಲ ಪ್ರಯಾಣಿಕರನ್ನೂ ಸುರಕ್ಷಿತವಾಗಿ ಸ್ಥಳಾಂತರ ಮಾಡಲಾಗಿದೆ. ತಾಂತ್ರಿಕ ದೋಷದಿಂದ ಹೀಗಾಗಿದೆ ಎಂದು ತ್ರಿಭುವನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಕ್ತಾರ ರೆಂಜಿ ಶೇರ್ಪಾ ತಿಳಿಸಿದ್ದಾರೆ.  ಈ ವಿಮಾನವನ್ನು ತಾಂತ್ರಿಕ ಪರಿಶೀಲನೆಗಾಗಿ ತೆಗೆದುಕೊಂಡು ಹೋಗಲಾಗಿದ್ದು, ಅದನ್ನು ಸಂಪೂರ್ಣವಾಗಿ ಪರಿಶೀಲಿಸಿ, ನೇಪಾಳ ನಾಗರಿಕ ವಿಮಾನಯಾನ ಪ್ರಾಧಿಕಾರದ ಅನುಮೋದನೆ ಬಳಿಕವಷ್ಟೇ ಮತ್ತೆ ಹಾರಾಟ ನಡೆಸಲಾಗುವುದು ಎಂದೂ ಹೇಳಿದ್ದಾರೆ. ರನ್​ವೇದಲ್ಲಿ ಹೋಗುತ್ತಿದ್ದಾಗ ವಿಮಾನದ ಎಡಗಾಲಿ ಹುಲ್ಲಿನ ಮೇಲೆ ಹೋಗಿದೆ ಎನ್ನಲಾಗಿದೆ. ಈ ವಿಮಾನ ಆಯತಪ್ಪಿ ಸಣ್ಣಮಟ್ಟದ ಅವಘಡ ಸಂಭವಿಸಿದ್ದರೂ ಏರ್​ಪೋರ್ಟ್​​ನಲ್ಲಿ ಉಳಿದ ವಿಮಾನಗಳ ಕಾರ್ಯಾಚರಣೆ ನಡೆಯುತ್ತಲೇ ಇದೆ.

ಇದನ್ನೂ ಓದಿ: Lakhimpur Kheri violence: ಪ್ರಿಯಾಂಕಾ ಗಾಂಧಿ ಸೇರಿ 11 ಕಾಂಗ್ರೆಸ್​ ನಾಯಕರ ಅಧಿಕೃತ ಬಂಧನ; ನವಜೋತ್​ ಸಿಂಗ್​ ಸಿಧುರಿಂದ ಎಚ್ಚರಿಕೆ

Covaxin: ಕೋವ್ಯಾಕ್ಸಿನ್​ಗೆ ಅನುಮೋದನೆ ನೀಡುವ ಬಗ್ಗೆ WHO ಸಭೆ; ಸದ್ಯದಲ್ಲೇ ಅಂತಿಮ ನಿರ್ಧಾರ ಸಾಧ್ಯತೆ

Published On - 6:35 pm, Tue, 5 October 21

ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ