AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nepal: ರನ್​ ವೇದಲ್ಲಿ ಆಯತಪ್ಪಿದ ವಿಮಾನ; 80 ಪ್ರಯಾಣಿಕರ ಸುರಕ್ಷಿತ ಸ್ಥಳಾಂತರ

ವಿಮಾನದಲ್ಲಿ ತಾಂತ್ರಿಕ ದೋಷದಿಂದ ಹೀಗಾಗಿದೆ ಎಂದು ತ್ರಿಭುವನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಕ್ತಾರ ರೆಂಜಿ ಶೇರ್ಪಾ ತಿಳಿಸಿದ್ದಾರೆ.

Nepal:  ರನ್​ ವೇದಲ್ಲಿ ಆಯತಪ್ಪಿದ ವಿಮಾನ; 80 ಪ್ರಯಾಣಿಕರ ಸುರಕ್ಷಿತ ಸ್ಥಳಾಂತರ
ಕಾಟ್ಮಂಡು ವಿಮಾನ ನಿಲ್ದಾಣ
TV9 Web
| Edited By: |

Updated on:Oct 05, 2021 | 6:35 PM

Share

ಕಾಟ್ಮಂಡು: ನೇಪಾಳದ ದೇಶೀಯ ವಿಮಾನ (Nepal’s Domestic Aircraft)  ಅಂದರೆ ದೇಶದೊಳಗೇ ಸಂಚರಿಸುವ ವಿಮಾನವೊಂದು ರನ್​ವೇದಲ್ಲಿ ಆಯತಪ್ಪಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಈ ವಿಮಾನದಲ್ಲಿ ಸುಮಾರು 80 ಪ್ರಯಾಣಿಕರು ಇದ್ದರು. ಅದೃಷ್ಟವಶಾತ್​ ಯಾರಿಗೂ ಏನೂ ಆಗಲಿಲ್ಲ. ನೇಪಾಳದ ಶ್ರೀ ಏರ್​​ಲೈನ್​​ಗೆ ಸೇರಿದ ವಿಮಾನ, ಇಂದು ಬೆಳಗ್ಗೆ 10.30ರ ಹೊತ್ತಿಗೆ ಕಾಟ್ಮಂಡುವಿನ ತ್ರಿಭುವನ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೇಪಾಳ್​ಗುಂಜ್​ಗೆ ಹೊರಟಿತ್ತು. ಟೇಕ್​ಆಫ್​ಗೂ ಮುನ್ನ ಟ್ಯಾಕ್ಸಿ ವೇದಲ್ಲಿ ಸಂಚಾರ ಮಾಡುತ್ತಿದ್ದಾಗ ಸ್ಕಿಡ್​ ಆಗಿದೆ ಎಂದು ವರದಿಯಾಗಿದೆ. 

ವಿಮಾನ ಅಪಘಾತಕ್ಕೀಡಾಗುತ್ತಿದ್ದಂತೆ ಅದರಲ್ಲಿದ್ದ ಎಲ್ಲ ಪ್ರಯಾಣಿಕರನ್ನೂ ಸುರಕ್ಷಿತವಾಗಿ ಸ್ಥಳಾಂತರ ಮಾಡಲಾಗಿದೆ. ತಾಂತ್ರಿಕ ದೋಷದಿಂದ ಹೀಗಾಗಿದೆ ಎಂದು ತ್ರಿಭುವನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಕ್ತಾರ ರೆಂಜಿ ಶೇರ್ಪಾ ತಿಳಿಸಿದ್ದಾರೆ.  ಈ ವಿಮಾನವನ್ನು ತಾಂತ್ರಿಕ ಪರಿಶೀಲನೆಗಾಗಿ ತೆಗೆದುಕೊಂಡು ಹೋಗಲಾಗಿದ್ದು, ಅದನ್ನು ಸಂಪೂರ್ಣವಾಗಿ ಪರಿಶೀಲಿಸಿ, ನೇಪಾಳ ನಾಗರಿಕ ವಿಮಾನಯಾನ ಪ್ರಾಧಿಕಾರದ ಅನುಮೋದನೆ ಬಳಿಕವಷ್ಟೇ ಮತ್ತೆ ಹಾರಾಟ ನಡೆಸಲಾಗುವುದು ಎಂದೂ ಹೇಳಿದ್ದಾರೆ. ರನ್​ವೇದಲ್ಲಿ ಹೋಗುತ್ತಿದ್ದಾಗ ವಿಮಾನದ ಎಡಗಾಲಿ ಹುಲ್ಲಿನ ಮೇಲೆ ಹೋಗಿದೆ ಎನ್ನಲಾಗಿದೆ. ಈ ವಿಮಾನ ಆಯತಪ್ಪಿ ಸಣ್ಣಮಟ್ಟದ ಅವಘಡ ಸಂಭವಿಸಿದ್ದರೂ ಏರ್​ಪೋರ್ಟ್​​ನಲ್ಲಿ ಉಳಿದ ವಿಮಾನಗಳ ಕಾರ್ಯಾಚರಣೆ ನಡೆಯುತ್ತಲೇ ಇದೆ.

ಇದನ್ನೂ ಓದಿ: Lakhimpur Kheri violence: ಪ್ರಿಯಾಂಕಾ ಗಾಂಧಿ ಸೇರಿ 11 ಕಾಂಗ್ರೆಸ್​ ನಾಯಕರ ಅಧಿಕೃತ ಬಂಧನ; ನವಜೋತ್​ ಸಿಂಗ್​ ಸಿಧುರಿಂದ ಎಚ್ಚರಿಕೆ

Covaxin: ಕೋವ್ಯಾಕ್ಸಿನ್​ಗೆ ಅನುಮೋದನೆ ನೀಡುವ ಬಗ್ಗೆ WHO ಸಭೆ; ಸದ್ಯದಲ್ಲೇ ಅಂತಿಮ ನಿರ್ಧಾರ ಸಾಧ್ಯತೆ

Published On - 6:35 pm, Tue, 5 October 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ