AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nepal: ರನ್​ ವೇದಲ್ಲಿ ಆಯತಪ್ಪಿದ ವಿಮಾನ; 80 ಪ್ರಯಾಣಿಕರ ಸುರಕ್ಷಿತ ಸ್ಥಳಾಂತರ

ವಿಮಾನದಲ್ಲಿ ತಾಂತ್ರಿಕ ದೋಷದಿಂದ ಹೀಗಾಗಿದೆ ಎಂದು ತ್ರಿಭುವನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಕ್ತಾರ ರೆಂಜಿ ಶೇರ್ಪಾ ತಿಳಿಸಿದ್ದಾರೆ.

Nepal:  ರನ್​ ವೇದಲ್ಲಿ ಆಯತಪ್ಪಿದ ವಿಮಾನ; 80 ಪ್ರಯಾಣಿಕರ ಸುರಕ್ಷಿತ ಸ್ಥಳಾಂತರ
ಕಾಟ್ಮಂಡು ವಿಮಾನ ನಿಲ್ದಾಣ
TV9 Web
| Edited By: |

Updated on:Oct 05, 2021 | 6:35 PM

Share

ಕಾಟ್ಮಂಡು: ನೇಪಾಳದ ದೇಶೀಯ ವಿಮಾನ (Nepal’s Domestic Aircraft)  ಅಂದರೆ ದೇಶದೊಳಗೇ ಸಂಚರಿಸುವ ವಿಮಾನವೊಂದು ರನ್​ವೇದಲ್ಲಿ ಆಯತಪ್ಪಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಈ ವಿಮಾನದಲ್ಲಿ ಸುಮಾರು 80 ಪ್ರಯಾಣಿಕರು ಇದ್ದರು. ಅದೃಷ್ಟವಶಾತ್​ ಯಾರಿಗೂ ಏನೂ ಆಗಲಿಲ್ಲ. ನೇಪಾಳದ ಶ್ರೀ ಏರ್​​ಲೈನ್​​ಗೆ ಸೇರಿದ ವಿಮಾನ, ಇಂದು ಬೆಳಗ್ಗೆ 10.30ರ ಹೊತ್ತಿಗೆ ಕಾಟ್ಮಂಡುವಿನ ತ್ರಿಭುವನ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೇಪಾಳ್​ಗುಂಜ್​ಗೆ ಹೊರಟಿತ್ತು. ಟೇಕ್​ಆಫ್​ಗೂ ಮುನ್ನ ಟ್ಯಾಕ್ಸಿ ವೇದಲ್ಲಿ ಸಂಚಾರ ಮಾಡುತ್ತಿದ್ದಾಗ ಸ್ಕಿಡ್​ ಆಗಿದೆ ಎಂದು ವರದಿಯಾಗಿದೆ. 

ವಿಮಾನ ಅಪಘಾತಕ್ಕೀಡಾಗುತ್ತಿದ್ದಂತೆ ಅದರಲ್ಲಿದ್ದ ಎಲ್ಲ ಪ್ರಯಾಣಿಕರನ್ನೂ ಸುರಕ್ಷಿತವಾಗಿ ಸ್ಥಳಾಂತರ ಮಾಡಲಾಗಿದೆ. ತಾಂತ್ರಿಕ ದೋಷದಿಂದ ಹೀಗಾಗಿದೆ ಎಂದು ತ್ರಿಭುವನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಕ್ತಾರ ರೆಂಜಿ ಶೇರ್ಪಾ ತಿಳಿಸಿದ್ದಾರೆ.  ಈ ವಿಮಾನವನ್ನು ತಾಂತ್ರಿಕ ಪರಿಶೀಲನೆಗಾಗಿ ತೆಗೆದುಕೊಂಡು ಹೋಗಲಾಗಿದ್ದು, ಅದನ್ನು ಸಂಪೂರ್ಣವಾಗಿ ಪರಿಶೀಲಿಸಿ, ನೇಪಾಳ ನಾಗರಿಕ ವಿಮಾನಯಾನ ಪ್ರಾಧಿಕಾರದ ಅನುಮೋದನೆ ಬಳಿಕವಷ್ಟೇ ಮತ್ತೆ ಹಾರಾಟ ನಡೆಸಲಾಗುವುದು ಎಂದೂ ಹೇಳಿದ್ದಾರೆ. ರನ್​ವೇದಲ್ಲಿ ಹೋಗುತ್ತಿದ್ದಾಗ ವಿಮಾನದ ಎಡಗಾಲಿ ಹುಲ್ಲಿನ ಮೇಲೆ ಹೋಗಿದೆ ಎನ್ನಲಾಗಿದೆ. ಈ ವಿಮಾನ ಆಯತಪ್ಪಿ ಸಣ್ಣಮಟ್ಟದ ಅವಘಡ ಸಂಭವಿಸಿದ್ದರೂ ಏರ್​ಪೋರ್ಟ್​​ನಲ್ಲಿ ಉಳಿದ ವಿಮಾನಗಳ ಕಾರ್ಯಾಚರಣೆ ನಡೆಯುತ್ತಲೇ ಇದೆ.

ಇದನ್ನೂ ಓದಿ: Lakhimpur Kheri violence: ಪ್ರಿಯಾಂಕಾ ಗಾಂಧಿ ಸೇರಿ 11 ಕಾಂಗ್ರೆಸ್​ ನಾಯಕರ ಅಧಿಕೃತ ಬಂಧನ; ನವಜೋತ್​ ಸಿಂಗ್​ ಸಿಧುರಿಂದ ಎಚ್ಚರಿಕೆ

Covaxin: ಕೋವ್ಯಾಕ್ಸಿನ್​ಗೆ ಅನುಮೋದನೆ ನೀಡುವ ಬಗ್ಗೆ WHO ಸಭೆ; ಸದ್ಯದಲ್ಲೇ ಅಂತಿಮ ನಿರ್ಧಾರ ಸಾಧ್ಯತೆ

Published On - 6:35 pm, Tue, 5 October 21

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್